ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರಟಗೆರೆ| ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಕಿತ್ತಾಟ

Last Updated 16 ಮಾರ್ಚ್ 2023, 12:46 IST
ಅಕ್ಷರ ಗಾತ್ರ

ಕೊರಟಗೆರೆ: ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಸಿಎಂ ಬೊಮ್ಮಾಯಿ ಪಟ್ಟಣಕ್ಕೆ ಭೇಟಿ ನೀಡುವ ಮುನ್ನವೇ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ಗುರುವಾರ ವಾಗ್ವಾದ ನಡೆಯಿತು. ‌

ಆಕಾಂಕ್ಷಿಗಳಾದ ಬಿ.ಎಚ್. ಅನಿಲ್ ಕುಮಾರ್ ಹಾಗೂ ಡಾ. ಲಕ್ಷ್ಮಿಕಾಂತ್ ಪರಸ್ಪರ ಕಿತ್ತಾಡಿಕೊಂಡರು. ಸಿಎಂ ಬೊಮ್ಮಾಯಿ ಅವರನ್ನು ಸ್ವಾಗತಿಸಲು ಇಬ್ಬರು ಸ್ಪರ್ಧೆಗೆ ಬಿದ್ದಿವರಂತೆ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕಿದ್ದರು.

ಡಾ.ಲಕ್ಷ್ಮಿಕಾಂತ್ ಅವರು ಹಾಕಿದ್ದ ಫ್ಲೆಕ್ಸ್ ಗಳನ್ನು ಅನಿಲ್ ಕುಮಾರ್ ಬೆಂಬಲಿಗರು ಕಿತ್ತು ಹಾಕಿದ್ದಾರೆ ಎಂಬ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆದಿದೆ.

ಪಟ್ಟಣ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮುನ್ಸೂಚನೆ ಅರಿತ ಪೊಲೀಸರು ಮಧ್ಯ ಪ್ರವೇಶಿಸಿ ಇಬ್ಬರನ್ನು ಸಮಾಧಾನ ಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT