ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತಿತರ ನಾಯಕರಿದ್ದ ಯಾತ್ರೆಯು ತಿಪಟೂರು ಮೂಲಕ ಸಾಗಿ ಮಧ್ಯಾಹ್ನ 2.30ರ ವೇಳೆಗೆ ಕೈಮರದ ಬಳಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಪ್ರವೇಶಿಸಿತು. ಅಲ್ಲಿಂದ ಅದೇ ಮಾರ್ಗದಲ್ಲಿ ಸಾಗಿ ಮತಿಘಟ್ಟ, ಹುಳಿಯಾರಿನಲ್ಲಿ ಸಭೆ ಮುಗಿಸಿಕೊಂಡು ಚಿಕ್ಕನಾಯಕನಹಳ್ಳಿಗೆ ಬರಬೇಕಿತ್ತು.