<p><strong>ತುಮಕೂರು: </strong>ಪಾವಗಡ ತಾಲ್ಲೂಕು ಗಡಿ ಭಾಗವಾದವೈಎನ್ ಹೊಸಕೋಟೆ ಸಮೀಪದ ಬೂದಿಬೆಟ್ಟ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ರಾತ್ರಿ ಸ್ಫೋಟ ಸಂಭವಿಸಿದೆ. ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಸ್ಫೋಟ ನಡೆಸಿದ್ದಾರೆ.</p>.<p>ಕಚೇರಿಯ ಹಿಂಭಾಗದ ಕಿಟಕಿಯನ್ನು ಕಿತ್ತು ಒಳ ನುಗ್ಗಿರುವ ದುಷ್ಕರ್ಮಿಗಳು ಸಭಾಂಗಣದ ಮೂಲೆಯಲ್ಲಿ ಇಳಿಸಿರುವ ದಾಖಲೆಗಳ ಅಲೆಮಾರಿಗೆ ಹೊಂದಿಕೊಂಡಂತೆ ಇರುವ ಕುರ್ಚಿಯ ಮೇಲೆ ಸ್ಫೋಟಕ ಇಟ್ಟಿದ್ದು ಕಂಡು ಬಂದಿದೆ. ಸ್ಫೋಟದಿಂದ ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ. ಕುರ್ಚಿಗಳು ಸುಟ್ಟು ಹೋಗಿವೆ.<br /><br />ರಾತ್ರಿ ಇದ್ದಕ್ಕಿದ್ದಂತೆ ಭಾರಿ ಸದ್ದು ಕೇಳಿ ಬಂತು. ಗಾಬರಿಗೊಂಡ ಜನರು ಹೋಗಿ ನೋಡಿದಾಗ ಸ್ಥಳದಲ್ಲಿ ಬೆಂಕಿ ಹತ್ತಿಕೊಂಡು ಉರಿಯುತ್ತಿದ್ದ ದೃಶ್ಯ ಕಂಡು ಬಂದಿದೆ.<br /><br />ಜಿಲೆಟಿನ್ ಪೌಡರ್ ಬಳಸಿ ಈ ಕೃತ್ಯ ಮಾಡಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ತನಿಖೆಯಿಂದ ಸತ್ಯ ಹೊರಬೀಳಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /><br />ಗ್ರಾಮ ಪಂಚಾಯಿತಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು, ದಾಖಲೆಗಳ ನಾಶಕ್ಕೆ ಈ ರೀತಿಯ ಕೃತ್ಯ ಮಾಡಿರಬಹುದು ಎಂದು ಸಾರ್ವಜನಿಕರು ಶಂಕಿಸಿದ್ದಾರೆ.</p>.<p><strong>ಓದಿ...<a href="https://www.prajavani.net/india-news/bharat-jodo-yatra-congress-workers-threaten-vegetable-shop-owner-for-refusing-to-fund-campaign-972504.html" target="_blank">Video: ಭಾರತ್ ಜೋಡೊ ಯಾತ್ರೆಗೆ ಹಣ ನೀಡದಿದ್ದಕ್ಕೆ ತರಕಾರಿ ವ್ಯಾಪಾರಿಗೆ ಬೆದರಿಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಪಾವಗಡ ತಾಲ್ಲೂಕು ಗಡಿ ಭಾಗವಾದವೈಎನ್ ಹೊಸಕೋಟೆ ಸಮೀಪದ ಬೂದಿಬೆಟ್ಟ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ರಾತ್ರಿ ಸ್ಫೋಟ ಸಂಭವಿಸಿದೆ. ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಸ್ಫೋಟ ನಡೆಸಿದ್ದಾರೆ.</p>.<p>ಕಚೇರಿಯ ಹಿಂಭಾಗದ ಕಿಟಕಿಯನ್ನು ಕಿತ್ತು ಒಳ ನುಗ್ಗಿರುವ ದುಷ್ಕರ್ಮಿಗಳು ಸಭಾಂಗಣದ ಮೂಲೆಯಲ್ಲಿ ಇಳಿಸಿರುವ ದಾಖಲೆಗಳ ಅಲೆಮಾರಿಗೆ ಹೊಂದಿಕೊಂಡಂತೆ ಇರುವ ಕುರ್ಚಿಯ ಮೇಲೆ ಸ್ಫೋಟಕ ಇಟ್ಟಿದ್ದು ಕಂಡು ಬಂದಿದೆ. ಸ್ಫೋಟದಿಂದ ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ. ಕುರ್ಚಿಗಳು ಸುಟ್ಟು ಹೋಗಿವೆ.<br /><br />ರಾತ್ರಿ ಇದ್ದಕ್ಕಿದ್ದಂತೆ ಭಾರಿ ಸದ್ದು ಕೇಳಿ ಬಂತು. ಗಾಬರಿಗೊಂಡ ಜನರು ಹೋಗಿ ನೋಡಿದಾಗ ಸ್ಥಳದಲ್ಲಿ ಬೆಂಕಿ ಹತ್ತಿಕೊಂಡು ಉರಿಯುತ್ತಿದ್ದ ದೃಶ್ಯ ಕಂಡು ಬಂದಿದೆ.<br /><br />ಜಿಲೆಟಿನ್ ಪೌಡರ್ ಬಳಸಿ ಈ ಕೃತ್ಯ ಮಾಡಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ತನಿಖೆಯಿಂದ ಸತ್ಯ ಹೊರಬೀಳಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /><br />ಗ್ರಾಮ ಪಂಚಾಯಿತಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು, ದಾಖಲೆಗಳ ನಾಶಕ್ಕೆ ಈ ರೀತಿಯ ಕೃತ್ಯ ಮಾಡಿರಬಹುದು ಎಂದು ಸಾರ್ವಜನಿಕರು ಶಂಕಿಸಿದ್ದಾರೆ.</p>.<p><strong>ಓದಿ...<a href="https://www.prajavani.net/india-news/bharat-jodo-yatra-congress-workers-threaten-vegetable-shop-owner-for-refusing-to-fund-campaign-972504.html" target="_blank">Video: ಭಾರತ್ ಜೋಡೊ ಯಾತ್ರೆಗೆ ಹಣ ನೀಡದಿದ್ದಕ್ಕೆ ತರಕಾರಿ ವ್ಯಾಪಾರಿಗೆ ಬೆದರಿಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>