ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಬಡಕುಟುಂಬದಿಂದ ಬಂದವರಾಗಿದ್ದಾರೆ. ಪೋಷಕರ ಬಳಿ ಮೊಬೈಲ್ ಇಲ್ಲ. ಕೆಲವೆಡೆ ನೆಟ್ವರ್ಕ್ ಸಮಸ್ಯೆ ಇದ್ದು, ಆನ್ಲೈನ್ ಶಿಕ್ಷಣ ಫಲಪ್ರದವಾಗಿಲ್ಲ. ಅಂಧ ವಿದ್ಯಾರ್ಥಿಗಳಿಗೆ ಧ್ವನಿ ಗ್ರಹಣದ ಮೂಲಕ ಪಾಠಮಾಡುತ್ತಿದ್ದರೂ, ನಿರೀಕ್ಷಿತ ಪ್ರಗತಿ ಸಾಧ್ಯವಾಗಿಲ್ಲ ಎನ್ನುತ್ತಾರೆ ಮುಖ್ಯ ಶಿಕ್ಷಕ ಸದಾಶಿವಯ್ಯ.