ಗಾಯತ್ರಿ, ಸಾವಿತ್ರಿ ಅವರಿಗೆ ಅಧಿಕಾರ ವಹಿಸಿಕೊಡಲು ನಿರಾಕರಿಸಿದ್ದರು. ಇದರಿಂದ ಗ್ರಾಮಪಂಚಾಯಿತಿ ಚುನಾವಣೆ ಕಾರ್ಯಕ್ಕೆ ಅಡ್ಡಿ ಆಗುತ್ತದೆ ಎಂದು ಗಾಯತ್ರಿಗೆ ನೋಟಿಸ್ ನೀಡಲಾಗಿತ್ತು. ಇದರಿಂದಾಗಿ ಮತ್ತಷ್ಟು ಕುಪಿತರಾದ ಗಾಯತ್ರಿ, ಪತಿ, ಪುತ್ರ ಮತ್ತು ಇತರರ ಜತೆ ತಹಶೀಲ್ದಾರ್ ನಿವಾಸಕ್ಕೆ ತೆರಳಿದ್ದಾರೆ. ಕೊರೊನಾ ಸೋಂಕಿನ ಕಾರಣ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ತಹಶೀಲ್ದಾರ್ ವಿಶ್ವನಾಥ್ ಅವರನ್ನು ಚರ್ಚೆಗೆ ಆಹ್ವಾನಿಸಿದ್ದಾರೆ.