<p><strong>ತುಮಕೂರು:</strong> ‘ಕೃತಿ ವಿಮರ್ಶೆ ಮಾಡುವುದು ಅಂತಿಮ ತೀರ್ಪಲ್ಲ. ಅದು ವಿಮರ್ಶಕನ ನಿಲುವಷ್ಟೇ’ ಎಂದು ವಿಮರ್ಶಕ ಪ್ರೊ.ಓ.ಎಲ್.ನಾಗಭೂಷಣಸ್ವಾಮಿ ಅಭಿಪ್ರಾಯಪಟ್ಟರು.</p>.<p>ತುಮಕೂರು ವಿಶ್ವವಿದ್ಯಾಲಯದಲ್ಲಿ ಅಮೂಲ್ಯ ಪುಸ್ತಕದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗೀತಾ ವಸಂತ ಅವರ ‘ತೆರೆದಷ್ಟೂ ಅರಿವು’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.</p>.<p>ವಿಮರ್ಶಕ ಒಂದು ನಿಲುವು ತಾಳಬೇಕು. ಆ ನಿಲುವಿನ ಬಗೆಗೂ ವಿಮರ್ಶೆ ನಡೆಯಬೇಕು. ಒಂದು ಸಾಹಿತ್ಯ ಕೃತಿಯನ್ನು ಅರ್ಥಮಾಡಿಕೊಳ್ಳುವುದು ಎಂಬುವುದು ಇಲ್ಲ. ಅರ್ಥ ಎಂಬುದು ಅನುಭವದ ಸಾವು. ಒಂದು ಸತ್ಯ ಎನ್ನುವುದು ಇದೆಯೇ? ಸತ್ಯ, ಅನುಭವ ಎಂದರೇನು? ಪ್ರಶ್ನೆಗಳನ್ನು ಲೇಖಕರು ತಮ್ಮ ಕೃತಿಯಲ್ಲಿ ಹಾಕಿಕೊಂಡಿದ್ದಾರೆ ಎಂದು ಹೇಳಿದರು.</p>.<p>ಗೀತಾ ವಸಂತ ಅವರು ಪ್ರಾಮಾಣಿಕವಾದ ವಿಮರ್ಶೆಯನ್ನು ತಮ್ಮ ಕೃತಿಯಲ್ಲಿ ಮಂಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಕೃತಿ ಕುರಿತು ಮಾತನಾಡಿದ ರಂಗನಾಥ ಕಂಟನಕುಂಟೆ, ‘ವಿಮರ್ಶೆ ಎಂಬುದೇ ಒಂದು ಬಂಡುಕೋರತನ, ಚಕಮಕಿತನ. ವಿಮರ್ಶೆಯ ಪ್ರಜಾಸತ್ತಾತ್ಮಕ ನಿಲುವು ಕಳೆದುಹೋಗುತ್ತಿರುವ ಕಾಲಘಟ್ಟದಲ್ಲಿ ವಿಮರ್ಶಕರ ನಿಲುವು ಏನೆಂಬುದು ಮುಖ್ಯ’ ಎಂದು ಹೇಳಿದರು.</p>.<p>‘ಲೇಖಕರು ಸಾಹಿತ್ಯ ಕೃತಿಯ ಅನನ್ಯತೆಯನ್ನು ಮಾನ್ಯ ಮಾಡುವ, ಸಾಹಿತ್ಯ ಕೃತಿಯ ಅನುಭವವನ್ನೇ ಪ್ರಧಾನವಾಗಿ ನೋಡುವ ಪ್ರಯತ್ನ ಮಾಡಿದ್ದಾರೆ. ಕೋಮಲವಾದ ಸೃಜನಶೀಲ ಕೃತಿಗಳನ್ನು ಅಷ್ಟೇ ಕೋಮಲವಾಗಿ ಎದುರುಗೊಂಡಿದ್ದಾರೆ’ ಎಂದರು.</p>.<p>ಲೇಖಕಿ ಗೀತಾ ವಸಂತ, ‘ಕೋಮಲವಾಗಿರುವುದು ದುರ್ಬಲವಲ್ಲ ಎನ್ನುವುದು ನನ್ನ ಅನುಭವದಲ್ಲಿ ಮೂಡಿದ ಲೋಕದೃಷ್ಟಿ. ಎಲ್ಲವನ್ನೂ ಸಾವಧಾನದಿಂದ, ಸೂಕ್ಷ್ಮತೆಯಿಂದ, ಅಂತಃಕರಣದಿಂದ ಒಳಗೊಳ್ಳುವ ಒಳನೋಟಗಳನ್ನು ಕಾಣಿಸುವ ಪ್ರಯತ್ನ ಈ ಕೃತಿಯಲ್ಲಿದೆ’ ಎಂದು ತಿಳಿಸಿದರು.</p>.<p>ಪರೀಕ್ಷಾಂಗ ಕುಲಸಚಿವರಾದ ಪ್ರೊ.ಎಚ್.ಎಸ್.ಮೋಹನ್, ಡಿವಿಜಿ ಕನ್ನಡ ಅಧ್ಯಯನ ಕೇಂದ್ರದ ಪ್ರೊ.ನಿತ್ಯಾನಂದ ಬಿ. ಶೆಟ್ಟಿ, ಪ್ರಾಧ್ಯಾಪಕರಾದ ಎನ್.ಎಸ್.ಗುಂಡೂರ, ನಾಗಭೂಷಣ ಬಗ್ಗನಡು, ಲೇಖಕರಾದ ಎಸ್.ಪಿ.ಪದ್ಮಪ್ರಸಾದ್, ರಂಗಮ್ಮ ಹೊದೆಕಲ್, ಮಿರ್ಜ ಬಷೀರ್, ಗುರುಪ್ರಸಾದ್ ಕಂಟಲಗೆರೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ಕೃತಿ ವಿಮರ್ಶೆ ಮಾಡುವುದು ಅಂತಿಮ ತೀರ್ಪಲ್ಲ. ಅದು ವಿಮರ್ಶಕನ ನಿಲುವಷ್ಟೇ’ ಎಂದು ವಿಮರ್ಶಕ ಪ್ರೊ.ಓ.ಎಲ್.ನಾಗಭೂಷಣಸ್ವಾಮಿ ಅಭಿಪ್ರಾಯಪಟ್ಟರು.</p>.<p>ತುಮಕೂರು ವಿಶ್ವವಿದ್ಯಾಲಯದಲ್ಲಿ ಅಮೂಲ್ಯ ಪುಸ್ತಕದ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗೀತಾ ವಸಂತ ಅವರ ‘ತೆರೆದಷ್ಟೂ ಅರಿವು’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.</p>.<p>ವಿಮರ್ಶಕ ಒಂದು ನಿಲುವು ತಾಳಬೇಕು. ಆ ನಿಲುವಿನ ಬಗೆಗೂ ವಿಮರ್ಶೆ ನಡೆಯಬೇಕು. ಒಂದು ಸಾಹಿತ್ಯ ಕೃತಿಯನ್ನು ಅರ್ಥಮಾಡಿಕೊಳ್ಳುವುದು ಎಂಬುವುದು ಇಲ್ಲ. ಅರ್ಥ ಎಂಬುದು ಅನುಭವದ ಸಾವು. ಒಂದು ಸತ್ಯ ಎನ್ನುವುದು ಇದೆಯೇ? ಸತ್ಯ, ಅನುಭವ ಎಂದರೇನು? ಪ್ರಶ್ನೆಗಳನ್ನು ಲೇಖಕರು ತಮ್ಮ ಕೃತಿಯಲ್ಲಿ ಹಾಕಿಕೊಂಡಿದ್ದಾರೆ ಎಂದು ಹೇಳಿದರು.</p>.<p>ಗೀತಾ ವಸಂತ ಅವರು ಪ್ರಾಮಾಣಿಕವಾದ ವಿಮರ್ಶೆಯನ್ನು ತಮ್ಮ ಕೃತಿಯಲ್ಲಿ ಮಂಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಕೃತಿ ಕುರಿತು ಮಾತನಾಡಿದ ರಂಗನಾಥ ಕಂಟನಕುಂಟೆ, ‘ವಿಮರ್ಶೆ ಎಂಬುದೇ ಒಂದು ಬಂಡುಕೋರತನ, ಚಕಮಕಿತನ. ವಿಮರ್ಶೆಯ ಪ್ರಜಾಸತ್ತಾತ್ಮಕ ನಿಲುವು ಕಳೆದುಹೋಗುತ್ತಿರುವ ಕಾಲಘಟ್ಟದಲ್ಲಿ ವಿಮರ್ಶಕರ ನಿಲುವು ಏನೆಂಬುದು ಮುಖ್ಯ’ ಎಂದು ಹೇಳಿದರು.</p>.<p>‘ಲೇಖಕರು ಸಾಹಿತ್ಯ ಕೃತಿಯ ಅನನ್ಯತೆಯನ್ನು ಮಾನ್ಯ ಮಾಡುವ, ಸಾಹಿತ್ಯ ಕೃತಿಯ ಅನುಭವವನ್ನೇ ಪ್ರಧಾನವಾಗಿ ನೋಡುವ ಪ್ರಯತ್ನ ಮಾಡಿದ್ದಾರೆ. ಕೋಮಲವಾದ ಸೃಜನಶೀಲ ಕೃತಿಗಳನ್ನು ಅಷ್ಟೇ ಕೋಮಲವಾಗಿ ಎದುರುಗೊಂಡಿದ್ದಾರೆ’ ಎಂದರು.</p>.<p>ಲೇಖಕಿ ಗೀತಾ ವಸಂತ, ‘ಕೋಮಲವಾಗಿರುವುದು ದುರ್ಬಲವಲ್ಲ ಎನ್ನುವುದು ನನ್ನ ಅನುಭವದಲ್ಲಿ ಮೂಡಿದ ಲೋಕದೃಷ್ಟಿ. ಎಲ್ಲವನ್ನೂ ಸಾವಧಾನದಿಂದ, ಸೂಕ್ಷ್ಮತೆಯಿಂದ, ಅಂತಃಕರಣದಿಂದ ಒಳಗೊಳ್ಳುವ ಒಳನೋಟಗಳನ್ನು ಕಾಣಿಸುವ ಪ್ರಯತ್ನ ಈ ಕೃತಿಯಲ್ಲಿದೆ’ ಎಂದು ತಿಳಿಸಿದರು.</p>.<p>ಪರೀಕ್ಷಾಂಗ ಕುಲಸಚಿವರಾದ ಪ್ರೊ.ಎಚ್.ಎಸ್.ಮೋಹನ್, ಡಿವಿಜಿ ಕನ್ನಡ ಅಧ್ಯಯನ ಕೇಂದ್ರದ ಪ್ರೊ.ನಿತ್ಯಾನಂದ ಬಿ. ಶೆಟ್ಟಿ, ಪ್ರಾಧ್ಯಾಪಕರಾದ ಎನ್.ಎಸ್.ಗುಂಡೂರ, ನಾಗಭೂಷಣ ಬಗ್ಗನಡು, ಲೇಖಕರಾದ ಎಸ್.ಪಿ.ಪದ್ಮಪ್ರಸಾದ್, ರಂಗಮ್ಮ ಹೊದೆಕಲ್, ಮಿರ್ಜ ಬಷೀರ್, ಗುರುಪ್ರಸಾದ್ ಕಂಟಲಗೆರೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>