<p><strong>ತುಮಕೂರು</strong>: ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿರುವ ಹಾಗೂ ಅತಿಯಾಗಿ ಅಂತರ್ಜಲ ಬಳಕೆಯಾಗಿರುವ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಸಲು ಅನುಮತಿ ಪಡೆಯುವುದು ಕಡ್ಡಾಯವಾಗಿದೆ.</p>.<p>ಚಿಕ್ಕನಾಯಕನಹಳ್ಳಿ, ಕೊರಟಗೆರೆ, ಮಧುಗಿರಿ, ತಿಪಟೂರು, ತುಮಕೂರು ತಾಲ್ಲೂಕಿನಲ್ಲಿ ಕೊಳವೆ ಬಾವಿ ಕೊರೆಸಲು ಇನ್ನು ಮುಂದೆ ಕಡ್ಡಾಯವಾಗಿ ಅನುಮತಿ ಪಡೆಯಬೇಕಾಗಿದೆ.</p>.<p>ಜಿಲ್ಲಾ ಅಂತರ್ಜಲ ಪ್ರಾಧಿಕಾರ ಸಮಿತಿ ಸಭೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಈ ವಿಚಾರ ಪ್ರಕಟಿಸಿದರು. ರಾಜ್ಯ ಅಂತರ್ಜಲ ಪ್ರಾಧಿಕಾರವು ಅತಿಯಾಗಿ ಅಂತರ್ಜಲ ಬಳಕೆ ಮಾಡುತ್ತಿರುವ 45 ತಾಲ್ಲೂಕುಗಳನ್ನು ಗುರುತಿಸಿದ್ದು, ಜಿಲ್ಲೆಯ ಐದು ತಾಲ್ಲೂಕುಗಳು ಸೇರಿವೆ. ಈ ಪ್ರದೇಶಗಳಲ್ಲಿ ಯಾವುದೇ ಉದ್ದೇಶಕ್ಕಾಗಿ ಕೊಳವೆ ಬಾವಿ ಕೊರೆಸಲು ಅನುಮತಿ ಪಡೆಯುವುದು ಕಡ್ಡಾಯವಾಗಿದೆ’ ಎಂದರು.</p>.<p>ಸರ್ಕಾರಿ, ನಿಗಮ, ಮಂಡಳಿ, ಇತರೆ ಇಲಾಖೆ ಹಾಗೂ ಖಾಸಗಿಯವರು ಕುಡಿಯುವ ನೀರು, ವಾಣಿಜ್ಯ ಉದ್ದೇಶಕ್ಕೆ ಕೊಳವೆ ಬಾವಿ ತೆಗೆಸುವುದನ್ನು ನಿರ್ಬಂಧಿಸಲಾಗಿದೆ. ಅನುಮತಿ ಪಡೆಯದೆ ಕೊರೆಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.</p>.<p class="Subhead">ಏಜೆನ್ಸಿ ವಿರುದ್ಧ ಕ್ರಮ: ಕೊಳವೆ ಬಾವಿ ಕೊರೆಯುವ ಯಂತ್ರ, ಏಜೆನ್ಸಿಗಳು ರಾಜ್ಯ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ನೋಂದಣಿ ಇಲ್ಲದೆ ಅಕ್ರಮವಾಗಿ ಕೊಳವೆ ಬಾವಿ ಕೊರೆಯುವಲ್ಲಿ ತೊಡಗಿಸಿಕೊಂಡರೆ ಅಂತಹ ಯಂತ್ರಗಳನ್ನು ವಶಪಡಿಸಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p class="Subhead"><strong>ಸುರಕ್ಷಿತವಾಗಿ ಮುಚ್ಚಿ:</strong> ವಿಫಲವಾದ ಕೊಳವೆ ಬಾವಿಗಳನ್ನು ಸುರಕ್ಷಿತವಾಗಿ ಮುಚ್ಚಬೇಕು. ಯಾವುದೇ ಅವಘಡಗಳು ಸಂಭವಿಸದಂತೆ ಕ್ರಮ ವಹಿಸಬೇಕು ಎಂದರು.</p>.<p>ಅಂತರ್ಜಲ ಅಭಿವೃದ್ಧಿಗೆ ಒತ್ತು ನೀಡಿ, ಅನುಪಯುಕ್ತ ಕೊಳವೆ ಬಾವಿಗಳಿಗೆ ಜಲ ಮರುಪೂರಣಗೊಳಿಸಲು ಅಧಿಕಾರಿಗಳು, ರೈತರು ಹೆಚ್ಚು ಆಸಕ್ತರಾಗಬೇಕು ಎಂದು ಸಲಹೆ ಮಾಡಿದರು.</p>.<p>ಕೊಳವೆ ಬಾವಿಗಳಿಗೆಜಲ ಮರುಪೂರಣ ಮಾಡಲು ನರೇಗಾ ಯೋಜನೆ ಬಳಸಿಕೊಳ್ಳಬಹುದಾಗಿದೆ. ಜಲ ಮರುಪೂರಣಕ್ಕೆ ವ್ಯವಸ್ಥಿತವಾಗಿ ಬಳಕೆ ಮಾಡಿಕೊಂಡರೆ ಅಂತರ್ಜಲ ಮಟ್ಟ ಹೆಚ್ಚಿಸಬಹುದಾಗಿದೆ. ಭವಿಷ್ಯದಲ್ಲಿ ಎದುರಾಗಬಹುದಾದ ಜಲಕ್ಷಾಮ ತಡೆಗಟ್ಟಬಹುದಾಗಿದೆ ಎಂದರು.</p>.<p>ಹಿರಿಯ ಭೂವಿಜ್ಞಾನಿ ನಾಗವೇಣಿ ಅಂತರ್ಜಲ ಕುಸಿತದ ಬಗ್ಗೆ ಮಾಹಿತಿ ನೀಡಿದರು. ಜಿ.ಪಂ ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿರುವ ಹಾಗೂ ಅತಿಯಾಗಿ ಅಂತರ್ಜಲ ಬಳಕೆಯಾಗಿರುವ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಸಲು ಅನುಮತಿ ಪಡೆಯುವುದು ಕಡ್ಡಾಯವಾಗಿದೆ.</p>.<p>ಚಿಕ್ಕನಾಯಕನಹಳ್ಳಿ, ಕೊರಟಗೆರೆ, ಮಧುಗಿರಿ, ತಿಪಟೂರು, ತುಮಕೂರು ತಾಲ್ಲೂಕಿನಲ್ಲಿ ಕೊಳವೆ ಬಾವಿ ಕೊರೆಸಲು ಇನ್ನು ಮುಂದೆ ಕಡ್ಡಾಯವಾಗಿ ಅನುಮತಿ ಪಡೆಯಬೇಕಾಗಿದೆ.</p>.<p>ಜಿಲ್ಲಾ ಅಂತರ್ಜಲ ಪ್ರಾಧಿಕಾರ ಸಮಿತಿ ಸಭೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಈ ವಿಚಾರ ಪ್ರಕಟಿಸಿದರು. ರಾಜ್ಯ ಅಂತರ್ಜಲ ಪ್ರಾಧಿಕಾರವು ಅತಿಯಾಗಿ ಅಂತರ್ಜಲ ಬಳಕೆ ಮಾಡುತ್ತಿರುವ 45 ತಾಲ್ಲೂಕುಗಳನ್ನು ಗುರುತಿಸಿದ್ದು, ಜಿಲ್ಲೆಯ ಐದು ತಾಲ್ಲೂಕುಗಳು ಸೇರಿವೆ. ಈ ಪ್ರದೇಶಗಳಲ್ಲಿ ಯಾವುದೇ ಉದ್ದೇಶಕ್ಕಾಗಿ ಕೊಳವೆ ಬಾವಿ ಕೊರೆಸಲು ಅನುಮತಿ ಪಡೆಯುವುದು ಕಡ್ಡಾಯವಾಗಿದೆ’ ಎಂದರು.</p>.<p>ಸರ್ಕಾರಿ, ನಿಗಮ, ಮಂಡಳಿ, ಇತರೆ ಇಲಾಖೆ ಹಾಗೂ ಖಾಸಗಿಯವರು ಕುಡಿಯುವ ನೀರು, ವಾಣಿಜ್ಯ ಉದ್ದೇಶಕ್ಕೆ ಕೊಳವೆ ಬಾವಿ ತೆಗೆಸುವುದನ್ನು ನಿರ್ಬಂಧಿಸಲಾಗಿದೆ. ಅನುಮತಿ ಪಡೆಯದೆ ಕೊರೆಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.</p>.<p class="Subhead">ಏಜೆನ್ಸಿ ವಿರುದ್ಧ ಕ್ರಮ: ಕೊಳವೆ ಬಾವಿ ಕೊರೆಯುವ ಯಂತ್ರ, ಏಜೆನ್ಸಿಗಳು ರಾಜ್ಯ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ನೋಂದಣಿ ಇಲ್ಲದೆ ಅಕ್ರಮವಾಗಿ ಕೊಳವೆ ಬಾವಿ ಕೊರೆಯುವಲ್ಲಿ ತೊಡಗಿಸಿಕೊಂಡರೆ ಅಂತಹ ಯಂತ್ರಗಳನ್ನು ವಶಪಡಿಸಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p class="Subhead"><strong>ಸುರಕ್ಷಿತವಾಗಿ ಮುಚ್ಚಿ:</strong> ವಿಫಲವಾದ ಕೊಳವೆ ಬಾವಿಗಳನ್ನು ಸುರಕ್ಷಿತವಾಗಿ ಮುಚ್ಚಬೇಕು. ಯಾವುದೇ ಅವಘಡಗಳು ಸಂಭವಿಸದಂತೆ ಕ್ರಮ ವಹಿಸಬೇಕು ಎಂದರು.</p>.<p>ಅಂತರ್ಜಲ ಅಭಿವೃದ್ಧಿಗೆ ಒತ್ತು ನೀಡಿ, ಅನುಪಯುಕ್ತ ಕೊಳವೆ ಬಾವಿಗಳಿಗೆ ಜಲ ಮರುಪೂರಣಗೊಳಿಸಲು ಅಧಿಕಾರಿಗಳು, ರೈತರು ಹೆಚ್ಚು ಆಸಕ್ತರಾಗಬೇಕು ಎಂದು ಸಲಹೆ ಮಾಡಿದರು.</p>.<p>ಕೊಳವೆ ಬಾವಿಗಳಿಗೆಜಲ ಮರುಪೂರಣ ಮಾಡಲು ನರೇಗಾ ಯೋಜನೆ ಬಳಸಿಕೊಳ್ಳಬಹುದಾಗಿದೆ. ಜಲ ಮರುಪೂರಣಕ್ಕೆ ವ್ಯವಸ್ಥಿತವಾಗಿ ಬಳಕೆ ಮಾಡಿಕೊಂಡರೆ ಅಂತರ್ಜಲ ಮಟ್ಟ ಹೆಚ್ಚಿಸಬಹುದಾಗಿದೆ. ಭವಿಷ್ಯದಲ್ಲಿ ಎದುರಾಗಬಹುದಾದ ಜಲಕ್ಷಾಮ ತಡೆಗಟ್ಟಬಹುದಾಗಿದೆ ಎಂದರು.</p>.<p>ಹಿರಿಯ ಭೂವಿಜ್ಞಾನಿ ನಾಗವೇಣಿ ಅಂತರ್ಜಲ ಕುಸಿತದ ಬಗ್ಗೆ ಮಾಹಿತಿ ನೀಡಿದರು. ಜಿ.ಪಂ ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>