<p><strong>ತುರುವೇಕೆರೆ</strong>: ಮನುಷ್ಯನ ವ್ಯಕ್ತಿತ್ವ ರೂಪಿಸುವಲ್ಲಿ ವಿಜ್ಞಾನ ಮತ್ತು ಆಧ್ಯಾತ್ಮ ಎರಡೂ ಪೂರಕ ಎಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ವಿರಕ್ತಮಠ ರಸ್ತೆಯಲ್ಲಿನ ಲಯನ್ಸ್ ಭವನದಲ್ಲಿ ಸುರಭಿ ಸಂಗಮ, ತುರುವೇಕೆರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಲಯನ್ಸ್ ಮತ್ತು ರೋಟರಿ ಸಂಸ್ಥೆಯಿಂದ ಯೋಧ ಡಿ.ರಾಮಸ್ವಾಮಿ ಸ್ಮಾರಕ ಅಂಗವಾಗಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಮಾತನಾಡಿದರು.</p>.<p>ವಿಜ್ಞಾನ, ತಂತ್ರಜ್ಞಾನಗಳು ಬೌದ್ಧಿಕ ಸರಕುಗಳಾದರೆ, ಲೋಕಸತ್ಯಗಳನ್ನು ಆಧ್ಯಾತ್ಮ ತಿಳಿಸಿಕೊಡುತ್ತದೆ. ಆದರೆ ಆಧ್ಯಾತ್ಮ ಮತ್ತು ವಿಜ್ಞಾನದ ತಿಳುವಳಿಕೆ ಎಲ್ಲರಿಗೂ ಅತ್ಯಗತ್ಯ. ಈ ಎರಡೂ ಪರಿಕಲ್ಪನೆಯಲ್ಲಿ ಯಾವುದೇ ವೈರುಧ್ಯವಿಲ್ಲ ಎಂದರು.</p>.<p>ಮಾಜಿ ಯೋಧ ಹನುಮಂತರಾಯಪ್ಪ ಅವರನ್ನು ಸನ್ಮಾನಿಸಲಾಯಿತು. ಚರ್ಚಾಸ್ಪರ್ಧೆ ವಿಜೇತ ಎಂಟು ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.</p>.<p>ಪಟ್ಟಣ ಪಂಚಾಯಿತಿ ಸದಸ್ಯ ಚಿದಾನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಸೋಮಶೇಖರ್, ಲಯನ್ಸ್ ಸಂಘದ ಅಧ್ಯಕ್ಷ ಎಚ್.ಎನ್.ಪರಮೇಶ್ವರಯ್ಯ, ವೈದ್ಯ ನಾಗರಾಜ್, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಇಂದಿರಾ, ಪ್ರಸಾದ್, ಸುನಿಲ್, ಮಲ್ಲಿಕಾರ್ಜುನ್, ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ</strong>: ಮನುಷ್ಯನ ವ್ಯಕ್ತಿತ್ವ ರೂಪಿಸುವಲ್ಲಿ ವಿಜ್ಞಾನ ಮತ್ತು ಆಧ್ಯಾತ್ಮ ಎರಡೂ ಪೂರಕ ಎಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ವಿರಕ್ತಮಠ ರಸ್ತೆಯಲ್ಲಿನ ಲಯನ್ಸ್ ಭವನದಲ್ಲಿ ಸುರಭಿ ಸಂಗಮ, ತುರುವೇಕೆರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಲಯನ್ಸ್ ಮತ್ತು ರೋಟರಿ ಸಂಸ್ಥೆಯಿಂದ ಯೋಧ ಡಿ.ರಾಮಸ್ವಾಮಿ ಸ್ಮಾರಕ ಅಂಗವಾಗಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಮಾತನಾಡಿದರು.</p>.<p>ವಿಜ್ಞಾನ, ತಂತ್ರಜ್ಞಾನಗಳು ಬೌದ್ಧಿಕ ಸರಕುಗಳಾದರೆ, ಲೋಕಸತ್ಯಗಳನ್ನು ಆಧ್ಯಾತ್ಮ ತಿಳಿಸಿಕೊಡುತ್ತದೆ. ಆದರೆ ಆಧ್ಯಾತ್ಮ ಮತ್ತು ವಿಜ್ಞಾನದ ತಿಳುವಳಿಕೆ ಎಲ್ಲರಿಗೂ ಅತ್ಯಗತ್ಯ. ಈ ಎರಡೂ ಪರಿಕಲ್ಪನೆಯಲ್ಲಿ ಯಾವುದೇ ವೈರುಧ್ಯವಿಲ್ಲ ಎಂದರು.</p>.<p>ಮಾಜಿ ಯೋಧ ಹನುಮಂತರಾಯಪ್ಪ ಅವರನ್ನು ಸನ್ಮಾನಿಸಲಾಯಿತು. ಚರ್ಚಾಸ್ಪರ್ಧೆ ವಿಜೇತ ಎಂಟು ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.</p>.<p>ಪಟ್ಟಣ ಪಂಚಾಯಿತಿ ಸದಸ್ಯ ಚಿದಾನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಸೋಮಶೇಖರ್, ಲಯನ್ಸ್ ಸಂಘದ ಅಧ್ಯಕ್ಷ ಎಚ್.ಎನ್.ಪರಮೇಶ್ವರಯ್ಯ, ವೈದ್ಯ ನಾಗರಾಜ್, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಇಂದಿರಾ, ಪ್ರಸಾದ್, ಸುನಿಲ್, ಮಲ್ಲಿಕಾರ್ಜುನ್, ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>