<p><strong>ತಿಪಟೂರು:</strong> ಬ್ರಾಹ್ಮಣ ಸಮುದಾಯದವರು ಆರ್ಥಿಕವಾಗಿ ಬಡವರಾಗಿರಬಹುದು. ಆದರೆ ವಿದ್ಯೆಯ ಮೂಲಕ ಗೌರವ, ಸ್ಥಾನಮಾನಗಳನ್ನು ಗಳಿಸಿದ್ದಾರೆ. ಬ್ರಾಹ್ಮಣರಿಗೆ ವಿದ್ಯೆಯೇ ನಿಜವಾದ ಆಸ್ತಿ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಸಭೆಯ ತುಮಕೂರು ಜಿಲ್ಲಾ ಪ್ರತಿನಿಧಿ ಡಾ. ಹರೀಶ್ ಅಭಿಪ್ರಾಯಪಟ್ಟರು.</p>.<p>ತಾಲೂಕು ಬ್ರಾಹ್ಮಣ ಗೆಳೆಯರ ಬಳಗ ಸೋಮವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸರ್ವೇ ಜನ ಸುಖಿನೋ ಭವಂತು’ ಎಂಬ ಜೀವನ ಧ್ಯೇಯ ಅಳವಡಿಸಿಕೊಂಡಿರುವುದು ಬ್ರಾಹ್ಮಣ ಸಮುದಾಯದ ಶ್ರೇಷ್ಠತೆ ಎಂದರು.</p>.<p>ಸಮಾಜದಿಂದ ದೊರೆಯುವ ಎಲ್ಲಾ ಸವಲತ್ತುಗಳನ್ನು ಸಮುದಾಯದ ಪ್ರತಿಯೊಬ್ಬರೂ ಪಡೆಯಬೇಕು. ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಉತ್ತಮ ಶಿಕ್ಷಣ ಸೌಲಭ್ಯ ಕಲ್ಪಿಸಲು ಸಭೆ ಸಹಾಯ ಮಾಡುತ್ತಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಸಭೆಯ ಉಪಾಧ್ಯಕ್ಷ ಸುದರ್ಶನಂ ಹೇಳಿದರು.</p>.<p>ವಿಪ್ರ ಸಮಾಜವು ಜೇನಗೂಡಿನಂತೆ ಸಹಕಾರ, ಸಹಬಾಳ್ವೆಯಿಂದ ಕಾರ್ಯನಿರ್ವಹಿಸಿದರೆ ತಾಲೂಕು ಮಟ್ಟದಿಂದಲೇ ಬಲಿಷ್ಠ ಸಮುದಾಯ ರೂಪಿಸಬಹುದು ಎಂದು ತುಮಕೂರು ಜಿಲ್ಲಾ ಬ್ರಾಹ್ಮಣ ಸಭೆಯ ಅಧ್ಯಕ್ಷ ಎಚ್.ಎನ್.ಚಂದ್ರಶೇಖರ್ ಅಭಿಪ್ರಾಯಪಟ್ಟರು.</p>.<p>ಮುಂದಿನ ಪೀಳಿಗೆ ಉಳಿಯಬೇಕಾದರೆ ಎಲ್ಲ ಹಿರಿಯರೂ ಬ್ರಾಹ್ಮಣ್ಯ ಪಾಲಿಸಬೇಕು. ಸನಾತನ ಧರ್ಮ, ಸಂಸ್ಕೃತಿ ಉಳಿದರೆ ಮುಂದಿನ ಪೀಳಿಗೆ ಉತ್ತಮ ಜೀವನ ನಡೆಸಬಹುದು ಎಂದು ತಿಪಟೂರಿನ ಡಾ.ಶ್ರೀಧರ ಕಿವಿಮಾತು ಹೇಳಿದರು.</p>.<p>ರಾಷ್ಟ್ರಪತಿ ಶೌರ್ಯ ಪ್ರಶಸ್ತಿ ಪಡೆದ ತಿಪಟೂರಿನ ಪ್ರಣವ್ ಬೆಳ್ಳೂರು, ಡಾಕ್ಟರೇಟ್ ಪದವಿ ಪುರಸ್ಕೃತರು ಹಾಗೂ ನಿಕಟಪೂರ್ವ ಸದಸ್ಯರನ್ನು ಸನ್ಮಾನಿಸಲಾಯಿತು.</p>.<p>ಗಾಯಕ ಶಶಿಧರ ಕೋಟೆ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಬ್ರಾಹ್ಮಣ ಗೆಳೆಯರ ಬಳಗದ ಅಧ್ಯಕ್ಷ ಬಿ.ಎಸ್. ಮೋಹನ್ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ಬ್ರಾಹ್ಮಣ ಸಮುದಾಯದವರು ಆರ್ಥಿಕವಾಗಿ ಬಡವರಾಗಿರಬಹುದು. ಆದರೆ ವಿದ್ಯೆಯ ಮೂಲಕ ಗೌರವ, ಸ್ಥಾನಮಾನಗಳನ್ನು ಗಳಿಸಿದ್ದಾರೆ. ಬ್ರಾಹ್ಮಣರಿಗೆ ವಿದ್ಯೆಯೇ ನಿಜವಾದ ಆಸ್ತಿ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಸಭೆಯ ತುಮಕೂರು ಜಿಲ್ಲಾ ಪ್ರತಿನಿಧಿ ಡಾ. ಹರೀಶ್ ಅಭಿಪ್ರಾಯಪಟ್ಟರು.</p>.<p>ತಾಲೂಕು ಬ್ರಾಹ್ಮಣ ಗೆಳೆಯರ ಬಳಗ ಸೋಮವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸರ್ವೇ ಜನ ಸುಖಿನೋ ಭವಂತು’ ಎಂಬ ಜೀವನ ಧ್ಯೇಯ ಅಳವಡಿಸಿಕೊಂಡಿರುವುದು ಬ್ರಾಹ್ಮಣ ಸಮುದಾಯದ ಶ್ರೇಷ್ಠತೆ ಎಂದರು.</p>.<p>ಸಮಾಜದಿಂದ ದೊರೆಯುವ ಎಲ್ಲಾ ಸವಲತ್ತುಗಳನ್ನು ಸಮುದಾಯದ ಪ್ರತಿಯೊಬ್ಬರೂ ಪಡೆಯಬೇಕು. ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಉತ್ತಮ ಶಿಕ್ಷಣ ಸೌಲಭ್ಯ ಕಲ್ಪಿಸಲು ಸಭೆ ಸಹಾಯ ಮಾಡುತ್ತಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಸಭೆಯ ಉಪಾಧ್ಯಕ್ಷ ಸುದರ್ಶನಂ ಹೇಳಿದರು.</p>.<p>ವಿಪ್ರ ಸಮಾಜವು ಜೇನಗೂಡಿನಂತೆ ಸಹಕಾರ, ಸಹಬಾಳ್ವೆಯಿಂದ ಕಾರ್ಯನಿರ್ವಹಿಸಿದರೆ ತಾಲೂಕು ಮಟ್ಟದಿಂದಲೇ ಬಲಿಷ್ಠ ಸಮುದಾಯ ರೂಪಿಸಬಹುದು ಎಂದು ತುಮಕೂರು ಜಿಲ್ಲಾ ಬ್ರಾಹ್ಮಣ ಸಭೆಯ ಅಧ್ಯಕ್ಷ ಎಚ್.ಎನ್.ಚಂದ್ರಶೇಖರ್ ಅಭಿಪ್ರಾಯಪಟ್ಟರು.</p>.<p>ಮುಂದಿನ ಪೀಳಿಗೆ ಉಳಿಯಬೇಕಾದರೆ ಎಲ್ಲ ಹಿರಿಯರೂ ಬ್ರಾಹ್ಮಣ್ಯ ಪಾಲಿಸಬೇಕು. ಸನಾತನ ಧರ್ಮ, ಸಂಸ್ಕೃತಿ ಉಳಿದರೆ ಮುಂದಿನ ಪೀಳಿಗೆ ಉತ್ತಮ ಜೀವನ ನಡೆಸಬಹುದು ಎಂದು ತಿಪಟೂರಿನ ಡಾ.ಶ್ರೀಧರ ಕಿವಿಮಾತು ಹೇಳಿದರು.</p>.<p>ರಾಷ್ಟ್ರಪತಿ ಶೌರ್ಯ ಪ್ರಶಸ್ತಿ ಪಡೆದ ತಿಪಟೂರಿನ ಪ್ರಣವ್ ಬೆಳ್ಳೂರು, ಡಾಕ್ಟರೇಟ್ ಪದವಿ ಪುರಸ್ಕೃತರು ಹಾಗೂ ನಿಕಟಪೂರ್ವ ಸದಸ್ಯರನ್ನು ಸನ್ಮಾನಿಸಲಾಯಿತು.</p>.<p>ಗಾಯಕ ಶಶಿಧರ ಕೋಟೆ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಬ್ರಾಹ್ಮಣ ಗೆಳೆಯರ ಬಳಗದ ಅಧ್ಯಕ್ಷ ಬಿ.ಎಸ್. ಮೋಹನ್ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>