<p><strong>ತುಮಕೂರು</strong>: ತಾಲ್ಲೂಕಿನ ಬೆಳಧರ ಸರ್ಕಾರಿ ಶಾಲೆಗೆ ಕಾಂಪೌಂಡ್ ನಿರ್ಮಿಸುವಂತೆ ಒತ್ತಾಯಿಸಿ 6 ತಿಂಗಳಿನಿಂದ ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿಯನ್ನು ಮತ್ತೆ ಶಾಲೆಗೆ ಕರೆತರುವ ಕಾರ್ಯ ಯಶಸ್ವಿಯಾಗಿದೆ.</p>.<p>4ನೇ ತರಗತಿ ವಿದ್ಯಾರ್ಥಿನಿ ಸಿಮ್ರಾ ಸನೋಬರ್ ಶಾಲೆಯಿಂದ ದೂರ ಉಳಿದು ಪ್ರತಿಭಟನೆ ನಡೆಸುತ್ತಿದ್ದರು. ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಹಾಗೂ ಅಧಿಕಾರಿಗಳ ತಂಡ ಸೋಮವಾರ ಬಾಲಕಿ ಮನೆಗೆ ಭೇಟಿ ನೀಡಿ ಅಹವಾಲು ಆಲಿಸಿತು.</p>.<p>‘ನನ್ನ ಶಾಲೆಗೆ ಭದ್ರತೆ ಬೇಕು. ಶಾಲಾ ಮೈದಾನದಲ್ಲಿ ಓಡಾಡುವ ವಾಹನಗಳಿಂದ ಕಿರಿಕಿರಿಯಾಗುತ್ತಿದೆ. ಕಾಂಪೌಂಡ್ ನಿರ್ಮಿಸಬೇಕು’ ಎಂದು ಸಿಮ್ರಾ ಮನವಿ ಮಾಡಿದರು. ‘ಶೀಘ್ರದಲ್ಲಿಯೇ ಕಾಂಪೌಂಡ್ ನಿರ್ಮಿಸಲಾಗುವುದು’ ಎಂದು ನೂರುನ್ನೀಸಾ ಭರವಸೆ ನೀಡಿದರು. ವಿದ್ಯಾರ್ಥಿನಿಯನ್ನು ಅವರ ಜತೆಯಲ್ಲಿಯೇ ಶಾಲೆಗೆ ಕರೆದುಕೊಂಡು ಬಂದರು.</p>.<p>ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ತಹಶೀಲ್ದಾರ್ ಪಿ.ಎಸ್.ರಾಜೇಶ್ವರಿ, ರಾಜಸ್ವ ನಿರೀಕ್ಷಕ ಅರುಣ್ಕುಮಾರ್, ಗ್ರಾಮ ಆಡಳಿತಾಧಿಕಾರಿ ಅನಿಲ್, ಕಾಳಜಿ ಫೌಂಡೇಷನ್ನ ಶಿವಕುಮಾರ್ ಮೇಷ್ಟ್ರುಮನೆ, ಗಣೇಶ್ ಮಾರನಹಳ್ಳಿ, ರಫಿಪಾಷ, ಮುಖಂಡರಾದ ಅಯ್ಯನಪಾಳ್ಯ ಶ್ರೀನಿವಾಸ್, ಮಹಾಲಿಂಗಯ್ಯ, ಡಮರುಗ ಉಮೇಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ತಾಲ್ಲೂಕಿನ ಬೆಳಧರ ಸರ್ಕಾರಿ ಶಾಲೆಗೆ ಕಾಂಪೌಂಡ್ ನಿರ್ಮಿಸುವಂತೆ ಒತ್ತಾಯಿಸಿ 6 ತಿಂಗಳಿನಿಂದ ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿಯನ್ನು ಮತ್ತೆ ಶಾಲೆಗೆ ಕರೆತರುವ ಕಾರ್ಯ ಯಶಸ್ವಿಯಾಗಿದೆ.</p>.<p>4ನೇ ತರಗತಿ ವಿದ್ಯಾರ್ಥಿನಿ ಸಿಮ್ರಾ ಸನೋಬರ್ ಶಾಲೆಯಿಂದ ದೂರ ಉಳಿದು ಪ್ರತಿಭಟನೆ ನಡೆಸುತ್ತಿದ್ದರು. ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಹಾಗೂ ಅಧಿಕಾರಿಗಳ ತಂಡ ಸೋಮವಾರ ಬಾಲಕಿ ಮನೆಗೆ ಭೇಟಿ ನೀಡಿ ಅಹವಾಲು ಆಲಿಸಿತು.</p>.<p>‘ನನ್ನ ಶಾಲೆಗೆ ಭದ್ರತೆ ಬೇಕು. ಶಾಲಾ ಮೈದಾನದಲ್ಲಿ ಓಡಾಡುವ ವಾಹನಗಳಿಂದ ಕಿರಿಕಿರಿಯಾಗುತ್ತಿದೆ. ಕಾಂಪೌಂಡ್ ನಿರ್ಮಿಸಬೇಕು’ ಎಂದು ಸಿಮ್ರಾ ಮನವಿ ಮಾಡಿದರು. ‘ಶೀಘ್ರದಲ್ಲಿಯೇ ಕಾಂಪೌಂಡ್ ನಿರ್ಮಿಸಲಾಗುವುದು’ ಎಂದು ನೂರುನ್ನೀಸಾ ಭರವಸೆ ನೀಡಿದರು. ವಿದ್ಯಾರ್ಥಿನಿಯನ್ನು ಅವರ ಜತೆಯಲ್ಲಿಯೇ ಶಾಲೆಗೆ ಕರೆದುಕೊಂಡು ಬಂದರು.</p>.<p>ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ತಹಶೀಲ್ದಾರ್ ಪಿ.ಎಸ್.ರಾಜೇಶ್ವರಿ, ರಾಜಸ್ವ ನಿರೀಕ್ಷಕ ಅರುಣ್ಕುಮಾರ್, ಗ್ರಾಮ ಆಡಳಿತಾಧಿಕಾರಿ ಅನಿಲ್, ಕಾಳಜಿ ಫೌಂಡೇಷನ್ನ ಶಿವಕುಮಾರ್ ಮೇಷ್ಟ್ರುಮನೆ, ಗಣೇಶ್ ಮಾರನಹಳ್ಳಿ, ರಫಿಪಾಷ, ಮುಖಂಡರಾದ ಅಯ್ಯನಪಾಳ್ಯ ಶ್ರೀನಿವಾಸ್, ಮಹಾಲಿಂಗಯ್ಯ, ಡಮರುಗ ಉಮೇಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>