ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಸ್ನಾತಕೋತ್ತರ ಪರಿಸರ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಸಿಜ್ಞಾ ಯುವ ಸಂವಾದ ಕೇಂದ್ರದಿಂದ ಏ.22ರಂದು ಬೆಳಿಗ್ಗೆ 10.30ಕ್ಕೆ ವಿ.ವಿಯ ಪರೀಕ್ಷಾ ಭವನದಲ್ಲಿ ಭೂಮಿ ದಿನ ನಡೆಯಲಿದೆ.
ಜೀವ ಸಂಕುಲ–ಸಂರಕ್ಷಣೆ ಕುರಿತು ‘ಗ್ರೀನ್’ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ಸಂವಾದ ಇರಲಿದೆ. ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಅಧ್ಯಕ್ಷತೆ ವಹಿಸುವರು. ಪರಿಸರ ಸ್ನೇಹಿ ವಸ್ತ್ರ ವಿನ್ಯಾಸಕಿ ಎಂ.ಶಮಾ ಕಾರ್ಯಕ್ರಮ ಉದ್ಘಾಟಿಸುವರು. ಸಿಜ್ಞಾ ಯುವ ಸಂವಾದ ಕೇಂದ್ರದ ಜ್ಞಾನ ಸಿಂಧೂ ಸ್ವಾಮಿ ಯುವಜನರ ಜೊತೆ ಸಂವಾದ ನಡೆಸುವರು.
ಸ್ನಾತಕೋತ್ತರ ಪರಿಸರ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ.ರಾಜನಾಯ್ಕ ಪಾಲ್ಗೊಳ್ಳುವರು.