<p><strong>ತುಮಕೂರು: </strong>ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವು ಕುಣಿಗಲ್ ತಾಲ್ಲೂಕಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ₹720 ಕೋಟಿ ಅನುಮೋದನೆ ನೀಡಿದ್ದರೂ ತಡೆ ಹಿಡಿಯಲಾಗಿದೆ. ಯಾವ ಕಾರಣಕ್ಕೆ ತಡೆ ಹಿಡಿಯಲಾಗಿದೆ ಎಂಬುದು ಗೊತ್ತಿಲ್ಲ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ಅವರು ಹೇಳಿದ ಮಾತಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಟ್ಟಾದರು.</p>.<p>ಎಡೆಯೂರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕರು ಮಾತನಾಡುತ್ತಿದ್ದರು.</p>.<p>'ಎಡೆಯೂರು ನಿಮ್ಮ ಮನೆ ದೇವರು. ಆ ದೇವರು ಇರುವ ಕ್ಷೇತ್ರ ಕುಣಿಗಲ್ ತಾಲ್ಲೂಕು. ಈ ತಾಲ್ಲೂಕಿಗೆ ಅಭಿವೃದ್ಧಿ ವಿಚಾರದಲ್ಲಿ ಅನ್ಯಾಯ ಆಗುತ್ತಿದೆ. ಎಕ್ಸಪ್ರೆಸ್ ಕೆನಾಲ್ ಯೋಜನೆ ರದ್ದುಪಡಿಸಲಾಗಿದೆ. 25 ವರ್ಷಗಳಿಂದ ನೀರಾವರಿ ವಿಚಾರದಲ್ಲಿ ತಾಲ್ಲೂಕಿಗೆ ಅನ್ಯಾಯ ಆಗಿದೆ' ಎಂದು ಶಾಸಕರು ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/tumakuru/bs-yediyurppa-yediyuru-674738.html" target="_blank">ಎಡೆಯೂರು ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ</a></p>.<p>ಶಾಸಕರು ಇದೇ ರೀತಿ ಮಾತು ಮುಂದುವರಿಸಿದಾಗ ಮುಖ್ಯಮಂತ್ರಿ ಯಡಿಯೂರಪ್ಪ ಸಿಟ್ಟಾದರು. 'ಆಯ್ತು ರೀ. ಸಾಕು ಮುಗಿಸ್ರಿ' ಎಂದು ಶಾಸಕರತ್ತ ಕೈ ಮಾಡಿ ಹೇಳಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ರಂಗನಾಥ್ ಆಯ್ತು ಸರ್. ಐದು ನಿಮಿಷ ಮಾತಾಡಿ ಮುಗಿಸ್ತೇನೆ ಎಂದರು.</p>.<p>ಬಳಿಕ ಮಾತಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, 'ರಾಜ್ಯದ ಹಣಕಾದಿನ ಸ್ಥಿತಿ ಹೇಗಿದೆ ಎಂಬುದು ಮುಖ್ಯಮಂತ್ರಿಯಾದ ನನಗೊಬ್ಬನಿಗೇ ಗೊತ್ತು. ನೀರಿನ ವಿಚಾರದಲ್ಲಿ ಅನ್ಯಾಯ ಮಾಡುವ ವ್ಯಕ್ತಿ ನಾನಲ್ಲ. ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಭವಿಷ್ಯದಲ್ಲಿ ನೀರಾವರಿಗೆ, ಅಭಿವೃದ್ಧಿ ಯೋಜನೆಗೆ ಹಣಕಾಸಿನ ವ್ಯವಸ್ಥೆ ಮಾಡಿಕೊಡಲಾಗುವುದು’ಎಂದು ಹೇಳಿದರು.</p>.<p>ಹಿಂದಿನ ಸರ್ಕಾರವು ರಾಜ್ಯದ ಹಣಕಾಸಿನ ಲಭ್ಯತೆಯ ಸ್ಥಿತಿ ಅರಿಯದೇ ಅಭಿವೃದ್ಧಿ ಯೋಜನೆ ರೂಪಿಸಿದೆ. ರಾಜ್ಯ ಸರ್ಕಾರವು ಇನ್ನೂ ಐದಾರು ವರ್ಷ ಹಣ ಕೂಡಿಟ್ಟರೂ ಆ ಯೋಜನೆಗಳು ಪೂರ್ಣಗೊಳ್ಳುವುದು ಕಷ್ಟ ಎಂದರು.</p>.<p><strong>ಅತಿವೃಷ್ಟಿಗೆ ಒತ್ತು: </strong>ಅತಿವೃಷ್ಟಿ ಪ್ರದೇಶದಲ್ಲಿ ಪರಿಹಾರ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಿ ಸರ್ಕಾರ ಹಣ ಖರ್ಚು ಮಾಡುತ್ತಿದೆ. ಬೇರೆ ಯೋಜನೆಗಳಿಗೆ ಸದ್ಯಕ್ಕೆ ಹಣ ಪೂರ್ಣ ಪ್ರಮಾಣದಲ್ಲಿ ಒದಗಿಸಲು ಆಗುತ್ತಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವು ಕುಣಿಗಲ್ ತಾಲ್ಲೂಕಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ₹720 ಕೋಟಿ ಅನುಮೋದನೆ ನೀಡಿದ್ದರೂ ತಡೆ ಹಿಡಿಯಲಾಗಿದೆ. ಯಾವ ಕಾರಣಕ್ಕೆ ತಡೆ ಹಿಡಿಯಲಾಗಿದೆ ಎಂಬುದು ಗೊತ್ತಿಲ್ಲ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ಅವರು ಹೇಳಿದ ಮಾತಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಟ್ಟಾದರು.</p>.<p>ಎಡೆಯೂರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕರು ಮಾತನಾಡುತ್ತಿದ್ದರು.</p>.<p>'ಎಡೆಯೂರು ನಿಮ್ಮ ಮನೆ ದೇವರು. ಆ ದೇವರು ಇರುವ ಕ್ಷೇತ್ರ ಕುಣಿಗಲ್ ತಾಲ್ಲೂಕು. ಈ ತಾಲ್ಲೂಕಿಗೆ ಅಭಿವೃದ್ಧಿ ವಿಚಾರದಲ್ಲಿ ಅನ್ಯಾಯ ಆಗುತ್ತಿದೆ. ಎಕ್ಸಪ್ರೆಸ್ ಕೆನಾಲ್ ಯೋಜನೆ ರದ್ದುಪಡಿಸಲಾಗಿದೆ. 25 ವರ್ಷಗಳಿಂದ ನೀರಾವರಿ ವಿಚಾರದಲ್ಲಿ ತಾಲ್ಲೂಕಿಗೆ ಅನ್ಯಾಯ ಆಗಿದೆ' ಎಂದು ಶಾಸಕರು ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/tumakuru/bs-yediyurppa-yediyuru-674738.html" target="_blank">ಎಡೆಯೂರು ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ</a></p>.<p>ಶಾಸಕರು ಇದೇ ರೀತಿ ಮಾತು ಮುಂದುವರಿಸಿದಾಗ ಮುಖ್ಯಮಂತ್ರಿ ಯಡಿಯೂರಪ್ಪ ಸಿಟ್ಟಾದರು. 'ಆಯ್ತು ರೀ. ಸಾಕು ಮುಗಿಸ್ರಿ' ಎಂದು ಶಾಸಕರತ್ತ ಕೈ ಮಾಡಿ ಹೇಳಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ರಂಗನಾಥ್ ಆಯ್ತು ಸರ್. ಐದು ನಿಮಿಷ ಮಾತಾಡಿ ಮುಗಿಸ್ತೇನೆ ಎಂದರು.</p>.<p>ಬಳಿಕ ಮಾತಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, 'ರಾಜ್ಯದ ಹಣಕಾದಿನ ಸ್ಥಿತಿ ಹೇಗಿದೆ ಎಂಬುದು ಮುಖ್ಯಮಂತ್ರಿಯಾದ ನನಗೊಬ್ಬನಿಗೇ ಗೊತ್ತು. ನೀರಿನ ವಿಚಾರದಲ್ಲಿ ಅನ್ಯಾಯ ಮಾಡುವ ವ್ಯಕ್ತಿ ನಾನಲ್ಲ. ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಭವಿಷ್ಯದಲ್ಲಿ ನೀರಾವರಿಗೆ, ಅಭಿವೃದ್ಧಿ ಯೋಜನೆಗೆ ಹಣಕಾಸಿನ ವ್ಯವಸ್ಥೆ ಮಾಡಿಕೊಡಲಾಗುವುದು’ಎಂದು ಹೇಳಿದರು.</p>.<p>ಹಿಂದಿನ ಸರ್ಕಾರವು ರಾಜ್ಯದ ಹಣಕಾಸಿನ ಲಭ್ಯತೆಯ ಸ್ಥಿತಿ ಅರಿಯದೇ ಅಭಿವೃದ್ಧಿ ಯೋಜನೆ ರೂಪಿಸಿದೆ. ರಾಜ್ಯ ಸರ್ಕಾರವು ಇನ್ನೂ ಐದಾರು ವರ್ಷ ಹಣ ಕೂಡಿಟ್ಟರೂ ಆ ಯೋಜನೆಗಳು ಪೂರ್ಣಗೊಳ್ಳುವುದು ಕಷ್ಟ ಎಂದರು.</p>.<p><strong>ಅತಿವೃಷ್ಟಿಗೆ ಒತ್ತು: </strong>ಅತಿವೃಷ್ಟಿ ಪ್ರದೇಶದಲ್ಲಿ ಪರಿಹಾರ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಿ ಸರ್ಕಾರ ಹಣ ಖರ್ಚು ಮಾಡುತ್ತಿದೆ. ಬೇರೆ ಯೋಜನೆಗಳಿಗೆ ಸದ್ಯಕ್ಕೆ ಹಣ ಪೂರ್ಣ ಪ್ರಮಾಣದಲ್ಲಿ ಒದಗಿಸಲು ಆಗುತ್ತಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>