ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಡೆಯೂರು: ಇಂದು ಮುಖ್ಯಮಂತ್ರಿಯಿಂದ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

ಸಿದ್ಧಲಿಂಗೇಶ್ವರಸ್ವಾಮಿ ದೇವಾಲಯ
Last Updated 18 ಅಕ್ಟೋಬರ್ 2019, 2:48 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಇಂದು ಬೆಳಿಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿದೇವಾಲಯದ ನವೀಕರಣ ಕಾಮಗಾರಿಹಂತ 2ರಡಿ ಪೂರ್ಣಗೊಂಡಿರುವ ದೇವಾಲಯ ಪ್ರವೇಶ ಪ್ರಾಂಗಣ, ನಡು ಪ್ರಾಂಗಣ ಮತ್ತು ಸಿದ್ಧಲಿಂಗೇಶ್ವರ ಸ್ವಾಮಿಯ ಪವಾಡ ದೃಶ್ಯಗಳನ್ನೊಳಗೊಂಡ ಪ್ರದಕ್ಷಿಣೆ ಪ್ರಾಂಗಣ ಸೇರಿ ಒಟ್ಟು ₹10 ಕೋಟಿ ಮೊತ್ತದ ಕಾಮಗಾರಿಗಳನ್ನು ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ.

ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ದೇವಸ್ಥಾನದ ನಿವೇಶನದಲ್ಲಿ ಲೋಕೋಪಯೋಗಿ ಇಲಾಖೆಯಿಂದ ₹5 ಕೋಟಿ ಮೊತ್ತದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ಸಮುದಾಯ ಭವನ ನಿರ್ಮಾಣಕ್ಕೂ ಮುಖ್ಯಮಂತ್ರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಅವರ ಪತ್ನಿ ಹೆಸರಲ್ಲಿ ನಿರ್ಮಿಸಲುದ್ದೇಶಿಸಿರುವ ಈ ಸಮುದಾಯ ಭವನ ನಿರ್ಮಾಣ ವೆಚ್ಚವನ್ನು ಘೋಷಣೆ ಮಾಡಿಲ್ಲ.

ಮುಖ್ಯಮಂತ್ರಿ ಅವರೊಂದಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಮುಜರಾಯಿ ಸಚಿವ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಶಾಸಕರು, ಸಂಸದರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಡಂಬಳ- ಗದಗ ಜಗದ್ಗುರು ತೋಂಟದಾರ್ಯ ಸಿದ್ಧರಾಮ ಸ್ವಾಮೀಜಿ, ಬಾಳೆಹೊನ್ನೂರು ಶಾಖಾಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT