<p><strong>ತುಮಕೂರು: </strong>‘ಮೌನದ ಮೂಲಕ ಜಗತ್ತನ್ನು ಅರ್ಥೈಸಿಕೊಂಡು, ಸಮುದಾಯದ ಸಂಕಟಗಳಿಗೆ ಪರಿಹಾರ ಹುಡುಕಿದ ಬುದ್ಧ, ಎದೆಯ ಕತ್ತಲಿಗೆ ಬೆಳಕಿನ ರೂಪ ಕೊಟ್ಟ ದಾರ್ಶನಿಕ’ ಎಂದು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿ ಮುಖ್ಯಸ್ಥ ಪ್ರೊ.ಪ್ರಶಾಂತ್ ನಾಯಕ ಅಭಿಪ್ರಾಯಪಟ್ಟರು.</p>.<p>ವಿಶ್ವವಿದ್ಯಾನಿಲಯದಲ್ಲಿ ಸೋಮ ವಾರ ಬುದ್ಧ ಪೂರ್ಣಿಮೆ ಪ್ರಯುಕ್ತ ಹಮ್ಮಿ ಕೊಂಡಿದ್ದ ‘ಬುದ್ಧ ಮತ್ತು ಸಮಕಾಲೀನ ಸಂದರ್ಭ’ ಕುರಿತು ಉಪನ್ಯಾಸ ನೀಡಿ, ‘ಬುದ್ಧ ದೇವರೂ ಅಲ್ಲ, ಬೋಧಿಸಿದ್ದು ಧರ್ಮವೂ ಅಲ್ಲ. ಭಾರತದ ಎಲ್ಲಾ ವಿಚಾರವಾದಿಗಳು ಬುದ್ಧನ ಬೆಳಕಿನ ಜೊತೆಗೆ ಬಂದವರು’ ಎಂದರು.</p>.<p>ಅಗೋಚರ ಶಕ್ತಿಗಳ ಬಗ್ಗೆ ಮಾತನಾಡುವವರಿಂದ ಬದುಕಿನ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ನಮ್ಮನ್ನು ನಾವು ಅರ್ಥೈಸಿಕೊಳ್ಳುವ ಕ್ರಮವನ್ನು ಅಳವಡಿಸಿ ಕೊಂಡಾಗ ಕಣ್ಣೊಳಗಿನ ಕತ್ತಲೆಗೆ ಬೆಳಕು ಮೂಡುತ್ತದೆ. ಸ್ವಂತಿಕೆ ಕಳೆದು ಕೊಂಡಿರುವ ನಮಗೆ ಬುದ್ಧನ ಬೆಳಕು ಬೇಕು ಎಂದು ತಿಳಿಸಿದರು.</p>.<p>ವಿ.ವಿ ಸಿಂಡಿಕೇಟ್ ಸದಸ್ಯ ಟಿ.ಡಿ. ವಿನಯ್, ‘ಬುದ್ಧ ವಿಶ್ವಕ್ಕೆ ಬೆಳಕಾಗಿದ್ದಾನೆ. ನಮ್ಮ ನಡುವೆ ಸಂಕಷ್ಟದಲ್ಲಿ ಸಿಲುಕಿರುವ ಜನರಿಗೆ ಸಹಾಯ ಮಾಡುವುದರ ಮೂಲಕ ಬುದ್ಧನನ್ನು ಕಾಣಬೇಕಿದೆ. ಬುದ್ಧನೆಂದರೆ ಪ್ರಶ್ನೆಗೆ ಬರೆಯುವ ಉತ್ತರವಾಗಬಾರದು, ನಮ್ಮೊಳಗಿನ ಪ್ರಜ್ಞೆಯಾಗಬೇಕು’ ಎಂದರು.</p>.<p>ಶಿರಾ ತಹಶೀಲ್ದಾರ್ ಮಮತಾ, ‘ಸಮಾಜಕ್ಕಾಗಿ ಜೀವನ ಮುಡಿಪಾಗಿಟ್ಟ ತತ್ವಜ್ಞಾನಿಗಳುನಮ್ಮ ಮುಂದಿದ್ದಾರೆ. ಅದರಲ್ಲಿ ಬುದ್ಧನೂ ಒಬ್ಬ. ಅವರ ತತ್ವಾದರ್ಶಗಳಲ್ಲಿ ಒಂದಂಶವನ್ನಾದರೂ ಅಳವಡಿಸಿಕೊಂಡರೆ ನಮ್ಮ ಜೀವನ ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ವಿ.ವಿಯ ಪ್ರಭಾರ ಕುಲಪತಿ ಪ್ರೊ.ಕೇಶವ, ಕುಲಸಚಿವ ಪ್ರೊ.ಕೆ. ಶಿವಚಿತ್ತಪ್ಪ, ಗೌತಮ ಬುದ್ಧ ಅಧ್ಯಯನ ಪೀಠದ ಸಂಚಾಲಕ ನಾಗಭೂಷಣ ಬಗ್ಗನಡು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>‘ಮೌನದ ಮೂಲಕ ಜಗತ್ತನ್ನು ಅರ್ಥೈಸಿಕೊಂಡು, ಸಮುದಾಯದ ಸಂಕಟಗಳಿಗೆ ಪರಿಹಾರ ಹುಡುಕಿದ ಬುದ್ಧ, ಎದೆಯ ಕತ್ತಲಿಗೆ ಬೆಳಕಿನ ರೂಪ ಕೊಟ್ಟ ದಾರ್ಶನಿಕ’ ಎಂದು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿ ಮುಖ್ಯಸ್ಥ ಪ್ರೊ.ಪ್ರಶಾಂತ್ ನಾಯಕ ಅಭಿಪ್ರಾಯಪಟ್ಟರು.</p>.<p>ವಿಶ್ವವಿದ್ಯಾನಿಲಯದಲ್ಲಿ ಸೋಮ ವಾರ ಬುದ್ಧ ಪೂರ್ಣಿಮೆ ಪ್ರಯುಕ್ತ ಹಮ್ಮಿ ಕೊಂಡಿದ್ದ ‘ಬುದ್ಧ ಮತ್ತು ಸಮಕಾಲೀನ ಸಂದರ್ಭ’ ಕುರಿತು ಉಪನ್ಯಾಸ ನೀಡಿ, ‘ಬುದ್ಧ ದೇವರೂ ಅಲ್ಲ, ಬೋಧಿಸಿದ್ದು ಧರ್ಮವೂ ಅಲ್ಲ. ಭಾರತದ ಎಲ್ಲಾ ವಿಚಾರವಾದಿಗಳು ಬುದ್ಧನ ಬೆಳಕಿನ ಜೊತೆಗೆ ಬಂದವರು’ ಎಂದರು.</p>.<p>ಅಗೋಚರ ಶಕ್ತಿಗಳ ಬಗ್ಗೆ ಮಾತನಾಡುವವರಿಂದ ಬದುಕಿನ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ನಮ್ಮನ್ನು ನಾವು ಅರ್ಥೈಸಿಕೊಳ್ಳುವ ಕ್ರಮವನ್ನು ಅಳವಡಿಸಿ ಕೊಂಡಾಗ ಕಣ್ಣೊಳಗಿನ ಕತ್ತಲೆಗೆ ಬೆಳಕು ಮೂಡುತ್ತದೆ. ಸ್ವಂತಿಕೆ ಕಳೆದು ಕೊಂಡಿರುವ ನಮಗೆ ಬುದ್ಧನ ಬೆಳಕು ಬೇಕು ಎಂದು ತಿಳಿಸಿದರು.</p>.<p>ವಿ.ವಿ ಸಿಂಡಿಕೇಟ್ ಸದಸ್ಯ ಟಿ.ಡಿ. ವಿನಯ್, ‘ಬುದ್ಧ ವಿಶ್ವಕ್ಕೆ ಬೆಳಕಾಗಿದ್ದಾನೆ. ನಮ್ಮ ನಡುವೆ ಸಂಕಷ್ಟದಲ್ಲಿ ಸಿಲುಕಿರುವ ಜನರಿಗೆ ಸಹಾಯ ಮಾಡುವುದರ ಮೂಲಕ ಬುದ್ಧನನ್ನು ಕಾಣಬೇಕಿದೆ. ಬುದ್ಧನೆಂದರೆ ಪ್ರಶ್ನೆಗೆ ಬರೆಯುವ ಉತ್ತರವಾಗಬಾರದು, ನಮ್ಮೊಳಗಿನ ಪ್ರಜ್ಞೆಯಾಗಬೇಕು’ ಎಂದರು.</p>.<p>ಶಿರಾ ತಹಶೀಲ್ದಾರ್ ಮಮತಾ, ‘ಸಮಾಜಕ್ಕಾಗಿ ಜೀವನ ಮುಡಿಪಾಗಿಟ್ಟ ತತ್ವಜ್ಞಾನಿಗಳುನಮ್ಮ ಮುಂದಿದ್ದಾರೆ. ಅದರಲ್ಲಿ ಬುದ್ಧನೂ ಒಬ್ಬ. ಅವರ ತತ್ವಾದರ್ಶಗಳಲ್ಲಿ ಒಂದಂಶವನ್ನಾದರೂ ಅಳವಡಿಸಿಕೊಂಡರೆ ನಮ್ಮ ಜೀವನ ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ವಿ.ವಿಯ ಪ್ರಭಾರ ಕುಲಪತಿ ಪ್ರೊ.ಕೇಶವ, ಕುಲಸಚಿವ ಪ್ರೊ.ಕೆ. ಶಿವಚಿತ್ತಪ್ಪ, ಗೌತಮ ಬುದ್ಧ ಅಧ್ಯಯನ ಪೀಠದ ಸಂಚಾಲಕ ನಾಗಭೂಷಣ ಬಗ್ಗನಡು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>