<p><strong>ಶಿರಾ:</strong> ರಾಜ್ಯ ಬಜೆಟ್ ಬಗ್ಗೆ ತಾಲ್ಲೂಕಿನ ಜನತೆಯ ನಿರೀಕ್ಷೆ ಹೆಚ್ಚಾಗಿದ್ದು, ಕ್ಷೇತ್ರಕ್ಕೆ ಎಷ್ಟು ಮಹತ್ವ ದೊರೆಯುವುದು ಎನ್ನುವ ಚರ್ಚೆ ನಡೆಯುತ್ತಿದೆ.</p>.<p>ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಕೃಷಿ ಪದವಿ ಕಾಲೇಜು ಪ್ರಾರಂಭದ ಬಗ್ಗೆ ಹಿಂದೆ ಚರ್ಚೆಗಳು ನಡೆದಿದ್ದವು. ಹಿಂದೆ ಟಿ.ಬಿ.ಜಯಚಂದ್ರ ಅವರು ಸಚಿವರಾಗಿದ್ದ ಸಮಯದಲ್ಲಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ್ದು ಈ ಬಾರಿ ಬಜೆಟ್ನಲ್ಲಿ ಸೇರಿಸಬಹುದು ಎನ್ನುವ ನಿರೀಕ್ಷೆ ಇದೆ.</p>.<p>ದಾವಣಗೆರೆ- ತುಮಕೂರು ರೈಲು ಮಾರ್ಗದ ಕಾಮಗಾರಿ ವಿಳಂಬವಾಗಿದ್ದು ಭೂಸ್ವಾಧೀನ ಕೆಲಸ ನಡೆಯಬೇಕಿದೆ. ಇದಕ್ಕೆ ಅನುದಾನವನ್ನು ನೀಡಿ ತಕ್ಷಣ ಕಾಮಗಾರಿ ಪ್ರಾರಂಭಿಸಬೇಕು ಎನ್ನುವುದು ಜನತೆಯ ಒತ್ತಾಯವಾಗಿದೆ.</p>.<p>ತಾಲ್ಲೂಕಿಗೆ ಹೇಮಾವತಿ ಜೊತೆಗೆ ಭದ್ರಾ ಮೇಲ್ದಂಡೆ ಹಾಗೂ ಎತ್ತಿನಹೊಳೆ ಯೋಜನೆಯಿಂದ ನೀರು ತರುವ ಮೂಲಕ ತ್ರಿವೇಣಿ ಸಂಗಮ ಮಾಡುವುದಾಗಿ ಕನಸು ಕಾಣುತ್ತಿದ್ದು ಈ ಹಿನ್ನೆಲೆಯಲ್ಲಿ ಮಂದಗತಿಯಲ್ಲಿ ಸಾಗುತ್ತಿರುವ ಭದ್ರಾ ಮೇಲ್ದಂಡೆ ಹಾಗೂ ಎತ್ತಿನಹೊಳೆ ಯೋಜನೆಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಕಾಮಗಾರಿಗೆ ಚುರುಕು ಮೂಡಿಸಬೇಕಿದೆ.</p>.<p>ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿರುವ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರು ಸಚಿವ ಸ್ಥಾನದಿಂದ ವಂಚಿತರಾಗಿರುವುದರಿಂದ ಅವರನ್ನು ಸಮಾಧಾನ ಮಾಡಲು ಬಜೆಟ್ನಲ್ಲಿ ಶಿರಾ ಕ್ಷೇತ್ರಕ್ಕೆ ಹೆಚ್ಚಿನ ಮನ್ನಣೆ ದೊರೆಯವುದೇ ಎನ್ನುವ ನಿರೀಕ್ಷೆ ಜನರಲ್ಲಿ ಮೂಡಿದೆ.</p>.<p>ಶಿರಾ ತಾಲ್ಲೂಕು ಶಾಶ್ವತ ಬರಪೀಡಿತ ಪ್ರದೇಶವಾಗಿದ್ದು ಅಂತರ್ಜಲ ವೃದ್ಧಿಗೆ ವಿಶೇಷ ಯೋಜನೆ ರೂಪಿಸುವಂತೆ ರೈತರ ಒತ್ತಾಯವಾಗಿದೆ. ತಾಲ್ಲೂಕು ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿದ್ದು ಶಿಥಿಲವಾಗಿರುವ ಶಾಲಾ ಕಟ್ಟಡಗಳ ನವೀಕರಣಕ್ಕೆ ವಿಶೇಷ ಅನುದಾನ ನೀಡಬೇಕು ಎನ್ನುವುದು ಜನತೆಯ ಒತ್ತಾಯವಾಗಿದೆ.</p>.<p>ಯುವ ಜನತೆಗೆ ಉದ್ಯೋಗ ಸೃಷ್ಟಿಸಲು ಶಿರಾದಲ್ಲಿ ಜವಳಿ ಪಾರ್ಕ್ ಪ್ರಾರಂಭಿಸುವುದಾಗಿ ಶಾಸಕ ಟಿ.ಬಿ.ಜಯಚಂದ್ರ ಪದೇ ಪದೇ ಹೇಳುತ್ತಿದ್ದು ಈ ಬಜೆಟ್ನಲ್ಲಿ ಘೋಷಣೆಯಾಗುವುದೇ ಎಂಬ ಕುತೂಹಲ ಇದೆ.</p>.<h2>ಕೃಷಿ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಿ</h2><h2></h2><p>ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಸರ್ಕಾರ ತಕ್ಷಣ ಕೈಬಿಡಬೇಕು. ಬಜೆಟ್ನ ಒಟ್ಟು ಮೊತ್ತದಲ್ಲಿ ಶೇ 60 ರಷ್ಟುನ್ನು ಕೃಷಿ ಕ್ಷೇತ್ರಕ್ಕೆ ನೀಡಬೇಕು. ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಕೈಗೊಳ್ಳುವ ಮೂಲಕ ರೈತರ ಬೆಳೆ ಸಾಲವನ್ನು ಮನ್ನಾ ಮಾಡಿದರೆ ರೈತರಿಗೆ ಅನುಕೂಲವಾಗುವುದು.</p><p><strong>ಧನಂಜಯಾರಾಧ್ಯ, ರೈತ ಸಂಘದ ಜಿಲ್ಲಾಧ್ಯಕ್ಷ</strong> </p> <h2>ಬೆಳೆಗೆ ಪ್ರೋತ್ಸಾಹಧನ ನೀಡಿ</h2><h2></h2><p>ಶೇಷ ಪ್ಯಾಕೇಜ್ ನೀಡುವ ಜೊತೆಗೆ ಬಯಲು ಸೀಮೆಯಲ್ಲಿ ಬೆಳೆಯುವ ಸಿರಿಧಾನ್ಯ, ಶೇಂಗಾ, ತೊಗರಿ, ಎಣ್ಣೆಕಾಳು ಬೆಳೆಗಳಿಗೆ ಬಜೆಟ್ನಲ್ಲಿ ಹಣ ಮೀಸಲಿರಿಸಿ ಪ್ರೋತ್ಸಾಹಧನ ನೀಡಿದರೆ ರೈತರಿಗೆ ಅನುಕೂಲ.</p><p><strong>ಗಂಗಾಧರ್, ಪಟ್ಟನಾಯಕನಹಳ್ಳಿ</strong></p> <h2>ಯುವಜನತೆಗೆ ಉದ್ಯೋಗ ನೀಡಿ</h2><h2></h2><p>ರಾಜ್ಯ ಸರ್ಕಾರ ಬಜೆಟ್ನಲ್ಲಿ ಯುವ ಜನತೆಗೆ ಉದ್ಯೋಗ ಕಲ್ಪಿಸುವ ಯೋಜನೆಗಳಿಗೆ ಹೆಚ್ಚು ಒತ್ತು ನೀಡಬೇಕು. ಸ್ವಯಂ ಉದ್ಯೋಗ ಮಾಡುವ ಯುವಜನತೆಯನ್ನು ಪ್ರೋತ್ಸಾಹಿಸುವ ಕೆಲಸ ಮಾಡಿದರೆ ಹೆಚ್ಚು ಅನುಕೂಲ.</p><p><strong>ಟಿ.ರಾಘವೇಂದ್ರ, ಛಾಯಾಗ್ರಾಹಕ, ಪಟ್ಟನಾಯಕನಹಳ್ಳಿ</strong></p> <h2>ಉದ್ಯಮಿಗಳಿಗೆ ಪ್ರೋತ್ಸಾಹ ನೀಡಿ</h2><p>ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು. ಉದ್ಯಮ ಪ್ರಾರಂಭಿಸುವ ಮಹಿಳೆಯರಿಗೆ ಹೆಚ್ಚು ಪ್ರೋತ್ಸಾಹ ನೀಡುವ ಮೂಲಕ ಅವರನ್ನು ಸಮರ್ಥ ಉದ್ಯಮಿಗಳಾಗಿ ರೂಪಿಸಲು ಬಜೆಟ್ನಲ್ಲಿ ವಿಶೇಷ ಯೋಜನೆ ರೂಪಿಸಿ, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿ.</p><p><strong>ಆರ್.ನಾಗಮ್ಮ ಸುರೇಶ್, ಕಾಮಗೊಂಡನಹಳ್ಳಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ರಾಜ್ಯ ಬಜೆಟ್ ಬಗ್ಗೆ ತಾಲ್ಲೂಕಿನ ಜನತೆಯ ನಿರೀಕ್ಷೆ ಹೆಚ್ಚಾಗಿದ್ದು, ಕ್ಷೇತ್ರಕ್ಕೆ ಎಷ್ಟು ಮಹತ್ವ ದೊರೆಯುವುದು ಎನ್ನುವ ಚರ್ಚೆ ನಡೆಯುತ್ತಿದೆ.</p>.<p>ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಕೃಷಿ ಪದವಿ ಕಾಲೇಜು ಪ್ರಾರಂಭದ ಬಗ್ಗೆ ಹಿಂದೆ ಚರ್ಚೆಗಳು ನಡೆದಿದ್ದವು. ಹಿಂದೆ ಟಿ.ಬಿ.ಜಯಚಂದ್ರ ಅವರು ಸಚಿವರಾಗಿದ್ದ ಸಮಯದಲ್ಲಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ್ದು ಈ ಬಾರಿ ಬಜೆಟ್ನಲ್ಲಿ ಸೇರಿಸಬಹುದು ಎನ್ನುವ ನಿರೀಕ್ಷೆ ಇದೆ.</p>.<p>ದಾವಣಗೆರೆ- ತುಮಕೂರು ರೈಲು ಮಾರ್ಗದ ಕಾಮಗಾರಿ ವಿಳಂಬವಾಗಿದ್ದು ಭೂಸ್ವಾಧೀನ ಕೆಲಸ ನಡೆಯಬೇಕಿದೆ. ಇದಕ್ಕೆ ಅನುದಾನವನ್ನು ನೀಡಿ ತಕ್ಷಣ ಕಾಮಗಾರಿ ಪ್ರಾರಂಭಿಸಬೇಕು ಎನ್ನುವುದು ಜನತೆಯ ಒತ್ತಾಯವಾಗಿದೆ.</p>.<p>ತಾಲ್ಲೂಕಿಗೆ ಹೇಮಾವತಿ ಜೊತೆಗೆ ಭದ್ರಾ ಮೇಲ್ದಂಡೆ ಹಾಗೂ ಎತ್ತಿನಹೊಳೆ ಯೋಜನೆಯಿಂದ ನೀರು ತರುವ ಮೂಲಕ ತ್ರಿವೇಣಿ ಸಂಗಮ ಮಾಡುವುದಾಗಿ ಕನಸು ಕಾಣುತ್ತಿದ್ದು ಈ ಹಿನ್ನೆಲೆಯಲ್ಲಿ ಮಂದಗತಿಯಲ್ಲಿ ಸಾಗುತ್ತಿರುವ ಭದ್ರಾ ಮೇಲ್ದಂಡೆ ಹಾಗೂ ಎತ್ತಿನಹೊಳೆ ಯೋಜನೆಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಕಾಮಗಾರಿಗೆ ಚುರುಕು ಮೂಡಿಸಬೇಕಿದೆ.</p>.<p>ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿರುವ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರು ಸಚಿವ ಸ್ಥಾನದಿಂದ ವಂಚಿತರಾಗಿರುವುದರಿಂದ ಅವರನ್ನು ಸಮಾಧಾನ ಮಾಡಲು ಬಜೆಟ್ನಲ್ಲಿ ಶಿರಾ ಕ್ಷೇತ್ರಕ್ಕೆ ಹೆಚ್ಚಿನ ಮನ್ನಣೆ ದೊರೆಯವುದೇ ಎನ್ನುವ ನಿರೀಕ್ಷೆ ಜನರಲ್ಲಿ ಮೂಡಿದೆ.</p>.<p>ಶಿರಾ ತಾಲ್ಲೂಕು ಶಾಶ್ವತ ಬರಪೀಡಿತ ಪ್ರದೇಶವಾಗಿದ್ದು ಅಂತರ್ಜಲ ವೃದ್ಧಿಗೆ ವಿಶೇಷ ಯೋಜನೆ ರೂಪಿಸುವಂತೆ ರೈತರ ಒತ್ತಾಯವಾಗಿದೆ. ತಾಲ್ಲೂಕು ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿದ್ದು ಶಿಥಿಲವಾಗಿರುವ ಶಾಲಾ ಕಟ್ಟಡಗಳ ನವೀಕರಣಕ್ಕೆ ವಿಶೇಷ ಅನುದಾನ ನೀಡಬೇಕು ಎನ್ನುವುದು ಜನತೆಯ ಒತ್ತಾಯವಾಗಿದೆ.</p>.<p>ಯುವ ಜನತೆಗೆ ಉದ್ಯೋಗ ಸೃಷ್ಟಿಸಲು ಶಿರಾದಲ್ಲಿ ಜವಳಿ ಪಾರ್ಕ್ ಪ್ರಾರಂಭಿಸುವುದಾಗಿ ಶಾಸಕ ಟಿ.ಬಿ.ಜಯಚಂದ್ರ ಪದೇ ಪದೇ ಹೇಳುತ್ತಿದ್ದು ಈ ಬಜೆಟ್ನಲ್ಲಿ ಘೋಷಣೆಯಾಗುವುದೇ ಎಂಬ ಕುತೂಹಲ ಇದೆ.</p>.<h2>ಕೃಷಿ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಿ</h2><h2></h2><p>ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಸರ್ಕಾರ ತಕ್ಷಣ ಕೈಬಿಡಬೇಕು. ಬಜೆಟ್ನ ಒಟ್ಟು ಮೊತ್ತದಲ್ಲಿ ಶೇ 60 ರಷ್ಟುನ್ನು ಕೃಷಿ ಕ್ಷೇತ್ರಕ್ಕೆ ನೀಡಬೇಕು. ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಕೈಗೊಳ್ಳುವ ಮೂಲಕ ರೈತರ ಬೆಳೆ ಸಾಲವನ್ನು ಮನ್ನಾ ಮಾಡಿದರೆ ರೈತರಿಗೆ ಅನುಕೂಲವಾಗುವುದು.</p><p><strong>ಧನಂಜಯಾರಾಧ್ಯ, ರೈತ ಸಂಘದ ಜಿಲ್ಲಾಧ್ಯಕ್ಷ</strong> </p> <h2>ಬೆಳೆಗೆ ಪ್ರೋತ್ಸಾಹಧನ ನೀಡಿ</h2><h2></h2><p>ಶೇಷ ಪ್ಯಾಕೇಜ್ ನೀಡುವ ಜೊತೆಗೆ ಬಯಲು ಸೀಮೆಯಲ್ಲಿ ಬೆಳೆಯುವ ಸಿರಿಧಾನ್ಯ, ಶೇಂಗಾ, ತೊಗರಿ, ಎಣ್ಣೆಕಾಳು ಬೆಳೆಗಳಿಗೆ ಬಜೆಟ್ನಲ್ಲಿ ಹಣ ಮೀಸಲಿರಿಸಿ ಪ್ರೋತ್ಸಾಹಧನ ನೀಡಿದರೆ ರೈತರಿಗೆ ಅನುಕೂಲ.</p><p><strong>ಗಂಗಾಧರ್, ಪಟ್ಟನಾಯಕನಹಳ್ಳಿ</strong></p> <h2>ಯುವಜನತೆಗೆ ಉದ್ಯೋಗ ನೀಡಿ</h2><h2></h2><p>ರಾಜ್ಯ ಸರ್ಕಾರ ಬಜೆಟ್ನಲ್ಲಿ ಯುವ ಜನತೆಗೆ ಉದ್ಯೋಗ ಕಲ್ಪಿಸುವ ಯೋಜನೆಗಳಿಗೆ ಹೆಚ್ಚು ಒತ್ತು ನೀಡಬೇಕು. ಸ್ವಯಂ ಉದ್ಯೋಗ ಮಾಡುವ ಯುವಜನತೆಯನ್ನು ಪ್ರೋತ್ಸಾಹಿಸುವ ಕೆಲಸ ಮಾಡಿದರೆ ಹೆಚ್ಚು ಅನುಕೂಲ.</p><p><strong>ಟಿ.ರಾಘವೇಂದ್ರ, ಛಾಯಾಗ್ರಾಹಕ, ಪಟ್ಟನಾಯಕನಹಳ್ಳಿ</strong></p> <h2>ಉದ್ಯಮಿಗಳಿಗೆ ಪ್ರೋತ್ಸಾಹ ನೀಡಿ</h2><p>ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು. ಉದ್ಯಮ ಪ್ರಾರಂಭಿಸುವ ಮಹಿಳೆಯರಿಗೆ ಹೆಚ್ಚು ಪ್ರೋತ್ಸಾಹ ನೀಡುವ ಮೂಲಕ ಅವರನ್ನು ಸಮರ್ಥ ಉದ್ಯಮಿಗಳಾಗಿ ರೂಪಿಸಲು ಬಜೆಟ್ನಲ್ಲಿ ವಿಶೇಷ ಯೋಜನೆ ರೂಪಿಸಿ, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಿ.</p><p><strong>ಆರ್.ನಾಗಮ್ಮ ಸುರೇಶ್, ಕಾಮಗೊಂಡನಹಳ್ಳಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>