<p>ಪಾವಗಡ: ಪಟ್ಟಣಕ್ಕೆ 5 ಕಿ.ಮೀ ದೂರದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ನಿಲಯ ನಿರ್ಮಿಸುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತದೆ ಎಂದು ಆರೋಪಿಸಿ ರೈತ ಸಂಘ, ಹಸಿರು ಸೇನೆಯ ಪದಾಧಿಕಾರಿಗಳು ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ಸಮುದಾಯದವರಿದ್ದಾರೆ. ಈ ಸಮುದಾಯದ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಪಟ್ಟಣದ ಶಾಲಾ, ಕಾಲೇಜುಗಳಿಗೆ ಸುಮಾರು 5 ಕಿ.ಮೀ ದೂರದಲ್ಲಿ ವಿದ್ಯಾರ್ಥಿ ನಿಲಯ ಕಟ್ಟುವುದರಿಂದ ದಿನಕ್ಕೆ ಎರಡು ಬಾರಿ ವಿದ್ಯಾರ್ಥಿಗಳು ಕಾಲೇಜುಗಳಿಗೆ ಓಡಾಡಬೇಕಾಗುತ್ತದೆ. ಇದು ಬಡ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತದೆ ಎಂದು ದೂರಿದರು.</p>.<p>ವಿದ್ಯಾರ್ಥಿಗಳಿಗೆ ದ್ವಿಚಕ್ರವಾಹನ ಕೊಡಿಸಲು ಪೋಷಕರಿಗೆ ಶಕ್ತಿ ಇರುವುದಿಲ್ಲ. ಹಾಗಾಗಿ ಕಾಲ್ನಡಿಗೆ, ಬಸ್, ಆಟೊ ಇತ್ಯಾದಿಗೆ ಹಣ ವ್ಯಯ ಮಾಡಿ ಓಡಾಡುವ ಅನಿವಾರ್ಯತೆ ಇರುತ್ತದೆ ಎಂದು<br />ಹೇಳಿದರು.</p>.<p>ದೂಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ, ಕಾರ್ಯದರ್ಶಿ ಶಿವರಾಜು, ಕೃಷ್ಣರಾವ್, ಕೃಷ್ಣಮೂರ್ತಿ, ಗಂಗಾಧರ ನಾಯ್ಡು, ಸಿ.ಕೆ. ತಿಪ್ಪೇಸ್ವಾಮಿ, ಹನುಮಂತರಾಯ, ಬಡಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾವಗಡ: ಪಟ್ಟಣಕ್ಕೆ 5 ಕಿ.ಮೀ ದೂರದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ನಿಲಯ ನಿರ್ಮಿಸುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತದೆ ಎಂದು ಆರೋಪಿಸಿ ರೈತ ಸಂಘ, ಹಸಿರು ಸೇನೆಯ ಪದಾಧಿಕಾರಿಗಳು ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ಸಮುದಾಯದವರಿದ್ದಾರೆ. ಈ ಸಮುದಾಯದ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಪಟ್ಟಣದ ಶಾಲಾ, ಕಾಲೇಜುಗಳಿಗೆ ಸುಮಾರು 5 ಕಿ.ಮೀ ದೂರದಲ್ಲಿ ವಿದ್ಯಾರ್ಥಿ ನಿಲಯ ಕಟ್ಟುವುದರಿಂದ ದಿನಕ್ಕೆ ಎರಡು ಬಾರಿ ವಿದ್ಯಾರ್ಥಿಗಳು ಕಾಲೇಜುಗಳಿಗೆ ಓಡಾಡಬೇಕಾಗುತ್ತದೆ. ಇದು ಬಡ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತದೆ ಎಂದು ದೂರಿದರು.</p>.<p>ವಿದ್ಯಾರ್ಥಿಗಳಿಗೆ ದ್ವಿಚಕ್ರವಾಹನ ಕೊಡಿಸಲು ಪೋಷಕರಿಗೆ ಶಕ್ತಿ ಇರುವುದಿಲ್ಲ. ಹಾಗಾಗಿ ಕಾಲ್ನಡಿಗೆ, ಬಸ್, ಆಟೊ ಇತ್ಯಾದಿಗೆ ಹಣ ವ್ಯಯ ಮಾಡಿ ಓಡಾಡುವ ಅನಿವಾರ್ಯತೆ ಇರುತ್ತದೆ ಎಂದು<br />ಹೇಳಿದರು.</p>.<p>ದೂಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ, ಕಾರ್ಯದರ್ಶಿ ಶಿವರಾಜು, ಕೃಷ್ಣರಾವ್, ಕೃಷ್ಣಮೂರ್ತಿ, ಗಂಗಾಧರ ನಾಯ್ಡು, ಸಿ.ಕೆ. ತಿಪ್ಪೇಸ್ವಾಮಿ, ಹನುಮಂತರಾಯ, ಬಡಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>