<p><strong>ಪಾವಗಡ: </strong>ಪಟ್ಟಣದ ಅಗಸರ ಕುಂಟೆ ಸುತ್ತಲೂ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಬೇಕು ಎಂದು ವಿವಿಧ ಸಂಘ, ಸಂಸ್ಥೆಯ ಪದಾಧಿಕಾರಿಗಳು ಸೋಮವಾರ ಪುರಸಭೆ ಅಧ್ಯಕ್ಷ ರಾಮಾಂಜಿನಪ್ಪ ಅವರಿಗೆ ಮನವಿ ಸಲ್ಲಿಸಿದರು.</p>.<p>ಪಟ್ಟಣದ ಅಗಸರ ಕುಂಟೆಗೆ ನಾಗಲಮಡಿಕೆ ಚೆಕ್ ಡ್ಯಾಂನಿಂದ ನೀರು ಹರಿಸಲಾಗುತ್ತಿದೆ. ಕುಂಟೆಯಲ್ಲಿರುವ ಬೃಹತ್ ಗುಂಡಿಗಳು ತುಂಬಿವೆ. ಪಟ್ಟಣಕ್ಕೆ ಹೊಂದಿಕೊಂಡಿರುವ ಕುಂಟೆ ಸಮೀಪ ಸಾಯಿಬಾಬಾ ದೇಗುಲ ಮತ್ತು ಬಡಾವಣೆಗಳಿವೆ. ಹೀಗಾಗಿ ಅವಘಡಗಳು ನಡೆಯುವ ಸಂಭವವಿದೆ ಎಂದುಹೇಳಿದರು.</p>.<p>ಈಗಾಗಲೇ ಸಾಕಷ್ಟು ಮಂದಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕುಂಟೆಗೆ ಬಿದ್ದಿದ್ದಾರೆ. ಕೆಲವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಕೆಲ ದಿನಗಳ ಹಿಂದೆ ಬಾಲಕ ಕುಂಟೆಗೆ ಬಿದ್ದು ಮೃತಪಟ್ಟಿದ್ದಾನೆ. ಇಷ್ಟಾದರೂ ಸಂಬಂಧಿಸಿದವರು ನಿರ್ಲಕ್ಷ್ಯ ಪ್ರದರ್ಶಿಸುತ್ತಿರುವುದು ಬೇಸರದ ಸಂಗತಿ ಎಂದುತಿಳಿಸಿದರು.</p>.<p>ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಶ್ರೀರಾಮಸೇನೆ ಅಧ್ಯಕ್ಷ ರಾಮಾಂಜಿ, ಪುರಸಭೆ ಸದಸ್ಯರಾದ ಪಿ.ಎಚ್. ರಾಜೇಶ್, ವೇಲುರಾಜ್, ಮುಖಂಡ ಅನಿಲ್, ಆಟೊ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ: </strong>ಪಟ್ಟಣದ ಅಗಸರ ಕುಂಟೆ ಸುತ್ತಲೂ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಬೇಕು ಎಂದು ವಿವಿಧ ಸಂಘ, ಸಂಸ್ಥೆಯ ಪದಾಧಿಕಾರಿಗಳು ಸೋಮವಾರ ಪುರಸಭೆ ಅಧ್ಯಕ್ಷ ರಾಮಾಂಜಿನಪ್ಪ ಅವರಿಗೆ ಮನವಿ ಸಲ್ಲಿಸಿದರು.</p>.<p>ಪಟ್ಟಣದ ಅಗಸರ ಕುಂಟೆಗೆ ನಾಗಲಮಡಿಕೆ ಚೆಕ್ ಡ್ಯಾಂನಿಂದ ನೀರು ಹರಿಸಲಾಗುತ್ತಿದೆ. ಕುಂಟೆಯಲ್ಲಿರುವ ಬೃಹತ್ ಗುಂಡಿಗಳು ತುಂಬಿವೆ. ಪಟ್ಟಣಕ್ಕೆ ಹೊಂದಿಕೊಂಡಿರುವ ಕುಂಟೆ ಸಮೀಪ ಸಾಯಿಬಾಬಾ ದೇಗುಲ ಮತ್ತು ಬಡಾವಣೆಗಳಿವೆ. ಹೀಗಾಗಿ ಅವಘಡಗಳು ನಡೆಯುವ ಸಂಭವವಿದೆ ಎಂದುಹೇಳಿದರು.</p>.<p>ಈಗಾಗಲೇ ಸಾಕಷ್ಟು ಮಂದಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕುಂಟೆಗೆ ಬಿದ್ದಿದ್ದಾರೆ. ಕೆಲವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಕೆಲ ದಿನಗಳ ಹಿಂದೆ ಬಾಲಕ ಕುಂಟೆಗೆ ಬಿದ್ದು ಮೃತಪಟ್ಟಿದ್ದಾನೆ. ಇಷ್ಟಾದರೂ ಸಂಬಂಧಿಸಿದವರು ನಿರ್ಲಕ್ಷ್ಯ ಪ್ರದರ್ಶಿಸುತ್ತಿರುವುದು ಬೇಸರದ ಸಂಗತಿ ಎಂದುತಿಳಿಸಿದರು.</p>.<p>ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಶ್ರೀರಾಮಸೇನೆ ಅಧ್ಯಕ್ಷ ರಾಮಾಂಜಿ, ಪುರಸಭೆ ಸದಸ್ಯರಾದ ಪಿ.ಎಚ್. ರಾಜೇಶ್, ವೇಲುರಾಜ್, ಮುಖಂಡ ಅನಿಲ್, ಆಟೊ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>