<p><strong>ತುಮಕೂರು</strong>: ಮೌಢ್ಯ ನಿಂತ ನೀರಾದರೆ ವಿಜ್ಞಾನ ಹರಿಯುವ ನದಿಯಂತೆ. ಮಾಟ, ಮಂತ್ರ, ಮೂಢನಂಬಿಕೆ, ಕಂದಾಚಾರಗಳಿಂದ ತಮ್ಮ ಜೀವನ ರಕ್ಷಿಸಿಕೊಳ್ಳಬೇಕು ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಹುಲಿಕಲ್ ನಟರಾಜ್ ಸಲಹೆ ಮಾಡಿದರು.</p>.<p>ತಾಲ್ಲೂಕಿನ ನಾಗವಲ್ಲಿಯ ಕೆಪಿಎಸ್ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳು ವೈಜ್ಞಾನಿಕ ತಳಹದಿಯ ಮೇಲೆ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಇಂದಿನ ಸಮಾಜದಲ್ಲಿ ಬಡತನಕ್ಕಿಂತ ಮನುಷ್ಯತ್ವದ ಕೊರತೆ ಬಹಳಷ್ಟಿದೆ. ವಿದ್ಯಾರ್ಥಿ ಜೀವನದಲ್ಲಿಯೇ ಉತ್ತಮ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಬೇಕು. ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ರೂಢಿಸಿಕೊಳ್ಳಬೇಕು ಎಂದರು.</p>.<p>ಮೌಢ್ಯದಿಂದ ಮುಗ್ಧ ಜನರು ಯಾವೆಲ್ಲ ರೀತಿ ವಂಚನೆಗೆ ಒಳಗಾಗುತ್ತಾರೆ ಎಂಬುದನ್ನು ಹತ್ತಾರು ಪ್ರಾತ್ಯಕ್ಷಿಕೆ ಮೂಲಕ ಮಕ್ಕಳಿಗೆ ತಿಳಿಸಿದರು. ಮಕ್ಕಳ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.</p>.<p>ಉಪಪ್ರಾಂಶುಪಾಲ ಜೆ.ಶ್ರೀನಿವಾಸ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಗಂಗಾಧರಯ್ಯ, ಶಿಕ್ಷಕರಾದ ಕೇಶವಮೂರ್ತಿ, ವೀಣಾ, ವಿಜಯಲಕ್ಷ್ಮಿ, ಅನಿಲ್ಕುಮಾರ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಮೌಢ್ಯ ನಿಂತ ನೀರಾದರೆ ವಿಜ್ಞಾನ ಹರಿಯುವ ನದಿಯಂತೆ. ಮಾಟ, ಮಂತ್ರ, ಮೂಢನಂಬಿಕೆ, ಕಂದಾಚಾರಗಳಿಂದ ತಮ್ಮ ಜೀವನ ರಕ್ಷಿಸಿಕೊಳ್ಳಬೇಕು ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಹುಲಿಕಲ್ ನಟರಾಜ್ ಸಲಹೆ ಮಾಡಿದರು.</p>.<p>ತಾಲ್ಲೂಕಿನ ನಾಗವಲ್ಲಿಯ ಕೆಪಿಎಸ್ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳು ವೈಜ್ಞಾನಿಕ ತಳಹದಿಯ ಮೇಲೆ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಇಂದಿನ ಸಮಾಜದಲ್ಲಿ ಬಡತನಕ್ಕಿಂತ ಮನುಷ್ಯತ್ವದ ಕೊರತೆ ಬಹಳಷ್ಟಿದೆ. ವಿದ್ಯಾರ್ಥಿ ಜೀವನದಲ್ಲಿಯೇ ಉತ್ತಮ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಬೇಕು. ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ರೂಢಿಸಿಕೊಳ್ಳಬೇಕು ಎಂದರು.</p>.<p>ಮೌಢ್ಯದಿಂದ ಮುಗ್ಧ ಜನರು ಯಾವೆಲ್ಲ ರೀತಿ ವಂಚನೆಗೆ ಒಳಗಾಗುತ್ತಾರೆ ಎಂಬುದನ್ನು ಹತ್ತಾರು ಪ್ರಾತ್ಯಕ್ಷಿಕೆ ಮೂಲಕ ಮಕ್ಕಳಿಗೆ ತಿಳಿಸಿದರು. ಮಕ್ಕಳ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.</p>.<p>ಉಪಪ್ರಾಂಶುಪಾಲ ಜೆ.ಶ್ರೀನಿವಾಸ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಗಂಗಾಧರಯ್ಯ, ಶಿಕ್ಷಕರಾದ ಕೇಶವಮೂರ್ತಿ, ವೀಣಾ, ವಿಜಯಲಕ್ಷ್ಮಿ, ಅನಿಲ್ಕುಮಾರ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>