<p><strong>ಶಿರಾ:</strong> ತಾಲ್ಲೂಕಿನ ಬುಕ್ಕಾಪಟ್ಟಣ- ಹಾಗಲವಾಡಿ ರಸ್ತೆ ಮಳೆ ಬಂದರೆ ಕೆಸರು ಗದ್ದೆಯಾಗುತ್ತಿದ್ದು, ಸಂಪೂರ್ಣವಾಗಿ ಹಾಳಾಗಿರುವ ರಸ್ತೆಯನ್ನು ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p>ಬುಕ್ಕಾಪಟ್ಟಣದಿಂದ ಹಾಗಲವಾಡಿ, ಹೊಸಕೆರೆ, ಚೇಳೂರು ಮಾರ್ಗದಿಂದ ತುಮಕೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಬುಕ್ಕಾಪಟ್ಟಣ ಹೋಬಳಿಯಲ್ಲಿ ಸಂಪೂರ್ಣ ಹದಗೆಟ್ಟಿದೆ.</p>.<p>ಮಳೆ ಬಂದರೆ ರಸ್ತೆಯ ಗುಂಡಿಗಳಲ್ಲಿ ನೀರು ನಿಂತು ಯಾವುದು ಗುಂಡಿ, ಯಾವುದು ರಸ್ತೆ ಎನ್ನುವುದು ತಿಳಿಯದೆ ವಾಹನ ಸವಾರರು ಗುಂಡಿಗಳಲ್ಲಿ ಬಿದ್ದು ಪರದಾಡುವಂತಾಗಿದೆ.</p>.<p>ಬುಕ್ಕಾಪಟ್ಟಣ ಹೋಬಳಿ ಶಿರಾ ತಾಲ್ಲೂಕಿಗೆ ಸೇರಿದ್ದರೂ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟಿದೆ. ಆದ್ದರಿಂದ ಎರಡು ಕ್ಷೇತ್ರದ ಶಾಸಕರು ಈ ಹೋಬಳಿಯನ್ನು ಮೂಲೆಗುಂಪು ಮಾಡಿದ್ದಾರೆ ಎನ್ನುವುದು ಸ್ಥಳೀಯರ ಆರೋಪ.</p>.<p>ತುಮಕೂರು ನಗರ, ತುಮಕೂರು ಗ್ರಾಮಾಂತರ, ಗುಬ್ಬಿ, ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈ ರಸ್ತೆ ಹಾದು ಹೋಗುತ್ತಿದ್ದು ಮೂರು ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆ ಚೆನ್ನಾಗಿಯೇ ಇದೆ. ಆದರೆ ಬುಕ್ಕಾಪಟ್ಟಣ ಹೋಬಳಿಗೆ ಕಾಲಿಟ್ಟ ತಕ್ಷಣ ಸುಮಾರು 7 ಕಿ.ಮೀ ರಸ್ತೆ ಅಭಿವೃದ್ಧಿ ಕಂಡಿಲ್ಲ. ರಸ್ತೆ ಕಿರಿದಾಗಿದ್ದು, ಗುಂಡಿಗಳಿಂದ ಕೂಡಿದೆ. ಜನಪ್ರತಿನಿಧಿಗಳು ಹಾಗೂ ಶಾಸಕರು ಈ ಬಗ್ಗೆ ನಿಗಾವಹಿಸಿ ಅಭಿವೃದ್ಧಿಗೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ತಾ.ಪಂ ಮಾಜಿ ಅಧ್ಯಕ್ಷ ಬಿ.ಆರ್.ಮಂಜುನಾಥ್ ಪ್ರತಿಕ್ರಿಯಿಸಿ, ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ಅವರು ಸಚಿವರಾಗಿದ್ದಾಗ ಗುಬ್ಬಿ ತಾಲ್ಲೂಕು ಗಡಿಯಿಂದ ಬುಕ್ಕಾಪಟ್ಟಣದ ರಾಷ್ಟ್ರೀಯ ಹೆದ್ದಾರಿ– 234 ಮತ್ತು ಬುಕ್ಕಾಪಟ್ಟಣದಿಂದ ಗಾಣದ ಹುಣಸೆ- ತಾವರೆಕೆರೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ-48ಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನು ಜಿಲ್ಲಾ ಪ್ರಮುಖ ರಸ್ತೆಯಿಂದ ರಾಜ್ಯ ಹೆದ್ದಾರಿಯಾಗಿ ಮಾರ್ಪಡಿಸಿ ಅಭಿವೃದ್ಧಿಪಡಿಸುವ ಬಗ್ಗೆ ಕ್ರಿಯಾಯೋಜನೆ ತಯಾರಾಗಿತ್ತು. ₹24 ಕೋಟಿ ವೆಚ್ಚದ ದ್ವಿಪಥ ನಿರ್ಮಾಣಕ್ಕೆ ತಾಂತ್ರಿಕ ವರದಿ ಸಿದ್ಧಪಡಿಸಲಾಗಿತ್ತು. ಬದಲಾದ ರಾಜಕೀಯ ಸನ್ನಿವೇಶದಿಂದಾಗಿ ಈ ಕಾಮಗಾರಿ ನನೆಗುದಿಗೆ ಬಿದ್ದಿದೆ. ಶಾಸಕರು ಗಮನಹರಿಸಿ ರಸ್ತೆ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ತಾಲ್ಲೂಕಿನ ಬುಕ್ಕಾಪಟ್ಟಣ- ಹಾಗಲವಾಡಿ ರಸ್ತೆ ಮಳೆ ಬಂದರೆ ಕೆಸರು ಗದ್ದೆಯಾಗುತ್ತಿದ್ದು, ಸಂಪೂರ್ಣವಾಗಿ ಹಾಳಾಗಿರುವ ರಸ್ತೆಯನ್ನು ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p>ಬುಕ್ಕಾಪಟ್ಟಣದಿಂದ ಹಾಗಲವಾಡಿ, ಹೊಸಕೆರೆ, ಚೇಳೂರು ಮಾರ್ಗದಿಂದ ತುಮಕೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಬುಕ್ಕಾಪಟ್ಟಣ ಹೋಬಳಿಯಲ್ಲಿ ಸಂಪೂರ್ಣ ಹದಗೆಟ್ಟಿದೆ.</p>.<p>ಮಳೆ ಬಂದರೆ ರಸ್ತೆಯ ಗುಂಡಿಗಳಲ್ಲಿ ನೀರು ನಿಂತು ಯಾವುದು ಗುಂಡಿ, ಯಾವುದು ರಸ್ತೆ ಎನ್ನುವುದು ತಿಳಿಯದೆ ವಾಹನ ಸವಾರರು ಗುಂಡಿಗಳಲ್ಲಿ ಬಿದ್ದು ಪರದಾಡುವಂತಾಗಿದೆ.</p>.<p>ಬುಕ್ಕಾಪಟ್ಟಣ ಹೋಬಳಿ ಶಿರಾ ತಾಲ್ಲೂಕಿಗೆ ಸೇರಿದ್ದರೂ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟಿದೆ. ಆದ್ದರಿಂದ ಎರಡು ಕ್ಷೇತ್ರದ ಶಾಸಕರು ಈ ಹೋಬಳಿಯನ್ನು ಮೂಲೆಗುಂಪು ಮಾಡಿದ್ದಾರೆ ಎನ್ನುವುದು ಸ್ಥಳೀಯರ ಆರೋಪ.</p>.<p>ತುಮಕೂರು ನಗರ, ತುಮಕೂರು ಗ್ರಾಮಾಂತರ, ಗುಬ್ಬಿ, ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈ ರಸ್ತೆ ಹಾದು ಹೋಗುತ್ತಿದ್ದು ಮೂರು ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆ ಚೆನ್ನಾಗಿಯೇ ಇದೆ. ಆದರೆ ಬುಕ್ಕಾಪಟ್ಟಣ ಹೋಬಳಿಗೆ ಕಾಲಿಟ್ಟ ತಕ್ಷಣ ಸುಮಾರು 7 ಕಿ.ಮೀ ರಸ್ತೆ ಅಭಿವೃದ್ಧಿ ಕಂಡಿಲ್ಲ. ರಸ್ತೆ ಕಿರಿದಾಗಿದ್ದು, ಗುಂಡಿಗಳಿಂದ ಕೂಡಿದೆ. ಜನಪ್ರತಿನಿಧಿಗಳು ಹಾಗೂ ಶಾಸಕರು ಈ ಬಗ್ಗೆ ನಿಗಾವಹಿಸಿ ಅಭಿವೃದ್ಧಿಗೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ತಾ.ಪಂ ಮಾಜಿ ಅಧ್ಯಕ್ಷ ಬಿ.ಆರ್.ಮಂಜುನಾಥ್ ಪ್ರತಿಕ್ರಿಯಿಸಿ, ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ಅವರು ಸಚಿವರಾಗಿದ್ದಾಗ ಗುಬ್ಬಿ ತಾಲ್ಲೂಕು ಗಡಿಯಿಂದ ಬುಕ್ಕಾಪಟ್ಟಣದ ರಾಷ್ಟ್ರೀಯ ಹೆದ್ದಾರಿ– 234 ಮತ್ತು ಬುಕ್ಕಾಪಟ್ಟಣದಿಂದ ಗಾಣದ ಹುಣಸೆ- ತಾವರೆಕೆರೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ-48ಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನು ಜಿಲ್ಲಾ ಪ್ರಮುಖ ರಸ್ತೆಯಿಂದ ರಾಜ್ಯ ಹೆದ್ದಾರಿಯಾಗಿ ಮಾರ್ಪಡಿಸಿ ಅಭಿವೃದ್ಧಿಪಡಿಸುವ ಬಗ್ಗೆ ಕ್ರಿಯಾಯೋಜನೆ ತಯಾರಾಗಿತ್ತು. ₹24 ಕೋಟಿ ವೆಚ್ಚದ ದ್ವಿಪಥ ನಿರ್ಮಾಣಕ್ಕೆ ತಾಂತ್ರಿಕ ವರದಿ ಸಿದ್ಧಪಡಿಸಲಾಗಿತ್ತು. ಬದಲಾದ ರಾಜಕೀಯ ಸನ್ನಿವೇಶದಿಂದಾಗಿ ಈ ಕಾಮಗಾರಿ ನನೆಗುದಿಗೆ ಬಿದ್ದಿದೆ. ಶಾಸಕರು ಗಮನಹರಿಸಿ ರಸ್ತೆ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>