ತುಮಕೂರು: ಪಾವಗಡ ತಾಲ್ಲೂಕಿನ ಮುರಾರಾಯನ ಹಳ್ಳಿ ಬಳಿಯ ಕೆರೆ ಪಕ್ಕದ ರಸ್ತೆಯಲ್ಲಿ ಗುರುವಾರ ಟಿವಿಎಸ್ ದ್ವಿಚಕ್ರ ವಾಹನ ಹಾಗೂ ಆಂಧ್ರಪ್ರದೇಶ ಸಾರಿಗೆ ಸಂಸ್ಥೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಕ್ಷ್ಮಿನರಸಪ್ಪ (58) ಮೃತರು. ದೊಮ್ಮತಮರಿ ಕಡೆಯಿಂದ ಮಡಕಶಿರಾ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನ, ಮಡಕಶಿರಾ ಕಡೆಯಿಂದ ದೊಮ್ಮತಮರಿ ಕಡೆಗೆ ಬರುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.