ಹುಳಿಯಾರು: ಹೋಬಳಿಯ ಯಳನಡು ಸಮೀಪ ಭಾನುವಾರ ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಿಂಗಾಪುರ ಗ್ರಾಮದ ಕೆಂಪರಾಜು (28) ಹಾಗೂ ಕಿರಣ್ಬಾಬು (22) ಮೃತಪಟ್ಟಿದ್ದಾರೆ.
ಬೈಕ್ ಸವಾರರು ಹುಳಿಯಾರಿನಿಂದ ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದಾಗ ಯಳನಡು ಕಡೆಯಿಂದ ಬರುತ್ತಿದ್ದ ಹೊಸದುರ್ಗ- ಬೆಂಗಳೂರು ಕೆಎಸ್ಆರ್ಟಿಸಿ ಬಸ್ ವೇಗವಾಗಿ ಹೋಗಿ ಬೈಕ್ಗೆ ಡಿಕ್ಕಿ ಹೊಡೆದಿದೆ.
ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.