ಶಿಕ್ಷಣ, ವೈದ್ಯಕೀಯ, ಸಾರಿಗೆ– ಇವು ಸೇವಾ ಕ್ಷೇತ್ರಗಳು. ಇಲ್ಲಿ ರಿಯಾಯಿತಿ ದರದ ಬಸ್ ಪಾಸ್ ವೆಚ್ಚವನ್ನು ಭರಿಸುವುದು ಸರ್ಕಾರದ ಜವಾಬ್ದಾರಿ. ಆದರೆ ಈ ವೆಚ್ಚವನ್ನು ಸಾರಿಗೆ ನಿಗಮ ಮತ್ತು ವಿದ್ಯಾರ್ಥಿಗಳ ಮೇಲೆ ಹೊರಿಸುವುದು ಅತ್ಯಂತ ಬೇಜವಾಬ್ದಾರಿ ಧೋರಣೆಯಾಗಿದೆ. ಸಾರಿಗೆ ನಿಗಮಗಳು ಈ ಹೊರೆಯನ್ನು ಬಡ ವಿದ್ಯಾರ್ಥಿಗಳು, ಪೋಷಕರಿಗೆ ವರ್ಗಾಯಿಸುತ್ತಿವೆ. ಸಾರಿಗೆ ನಿಗಮ ಮತ್ತು ವಿದ್ಯಾರ್ಥಿಗಳ ನಡುವೆ ಒಡಕು ತಂದು, ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪಿತೂರಿ ನಡೆಸಿದೆ ಎಂದು ಆರೋಪಿಸಿದ್ದಾರೆ.