<p><strong>ತುಮಕೂರು</strong>: ಖಾಸಗಿ ಬಸ್ಗಳನ್ನು ಓಡಿಸಲು ಅನುಕೂಲವಾಗುವಂತೆ ತುಂಬಾಡಿ ಮತ್ತು ಓಬಳಾಪುರ ಟೋಲ್ನಲ್ಲಿ ಶುಲ್ಕ ವಿನಾಯಿತಿ ನೀಡಬೇಕು ಎಂದು ಕೋರಿ ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳು ಸಂಸದ ಜಿ.ಎಸ್.ಬಸವರಾಜ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>‘ಆ.5ರಂದು ಖಾಸಗಿ ಬಸ್ ಸಂಚಾರ ಆರಂಭಿಸಲು ತೀರ್ಮಾನಿಸಲಾಗಿತ್ತು. ಮಧುಗಿರಿಯಿಂದ ತುಮಕೂರಿಗೆ ಹೋಗಿ ಬರಲು ತುಂಬಾಡಿ ಮತ್ತು ಓಬಳಾಪುರದ ಟೋಲ್ನಲ್ಲಿ ಶುಲ್ಕ ಪಾವತಿಸಬೇಕು. ಈ ಶುಲ್ಕ ದುಬಾರಿ ಆಗುತ್ತಿದೆ. ಸಂಸದರು ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು ಕರೆಸಿ ಮಾತನಾಡಿದ್ದಾರೆ’ ಎಂದು ಖಾಸಗಿ ಬಸ್ ಮಾಲೀಕರ ಸಂಘದ ಜಿಲ್ಲಾ ಕಾರ್ಯದರ್ಶಿ ಎಂ.ಎಸ್.ಶಂಕರ ನಾರಾಯಣ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಒಂದೆರಡು ದಿನಗಳಲ್ಲಿ ಖಾಸಗಿ ಬಸ್ಗಳು ಯಾವಾಗ ಸಂಚರಿಸಲಿವೆ ಎನ್ನುವುದು ಖಚಿತವಾಗುತ್ತದೆ. ನಿತ್ಯ ತುಮಕೂರು– ಮಧುಗಿರಿ ಮಾರ್ಗದಲ್ಲಿ 500 ಬಸ್ಗಳು ಸಂಚರಿಸುತ್ತವೆ. ಚಾಲಕರು, ನಿರ್ವಾಹಕರು, ಕ್ಲೀನರ್ ಸೇರಿದಂತೆ 6000 ಸಾವಿರ ಜನರು ಖಾಸಗಿ ಬಸ್ ವಲಯದಲ್ಲಿ ದುಡಿಯುತ್ತಿದ್ದಾರೆ’ ಎಂದರು.</p>.<p><strong>ಕುಣಿಗಲ್ ಮಾರ್ಗದಲ್ಲಿ ಆರಂಭ</strong></p>.<p>ಕುಣಿಗಲ್– ತುಮಕೂರು ನಡುವಿನ ಖಾಸಗಿ ಬಸ್ಗಳ ಸಂಚಾರ ಸೋಮವಾರದಿಂದ ಪುನರಾರಂಭವಾಯಿತು.</p>.<p>ಈ ಮಾರ್ಗದಲ್ಲಿ ಯಾವುದೇ ಟೋಲ್ಗಳು ಇಲ್ಲ. ಇದರಿಂದ ಈ ವಲಯದಲ್ಲಿ ಬಸ್ಗಳ ಸಂಚಾರ ಆರಂಭವಾಗಿದೆ. ಈ ಮಾರ್ಗದಲ್ಲಿ ಬೆಳಿಗ್ಗೆಯಿಂದ 12 ಖಾಸಗಿ ಬಸ್ಗಳು ಸಂಚಾರಿಸಿದವು. ಪ್ರಯಾಣಿಕರು ಕಡಿಮೆ ಸಂಖ್ಯೆಯಲ್ಲಿ ಇದ್ದರು. ಬಸ್ನಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮತ್ತು ಅಂತರ ಕಾಯ್ದುಕೊಳ್ಳಲಾಗಿತ್ತು. ಈ ಮಾರ್ಗದಲ್ಲಿ ಹೆಚ್ಚಿನ ಜನರು ಖಾಸಗಿ ಬಸ್ ಸಂಚಾರ ಅವಲಂಬಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಖಾಸಗಿ ಬಸ್ಗಳನ್ನು ಓಡಿಸಲು ಅನುಕೂಲವಾಗುವಂತೆ ತುಂಬಾಡಿ ಮತ್ತು ಓಬಳಾಪುರ ಟೋಲ್ನಲ್ಲಿ ಶುಲ್ಕ ವಿನಾಯಿತಿ ನೀಡಬೇಕು ಎಂದು ಕೋರಿ ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳು ಸಂಸದ ಜಿ.ಎಸ್.ಬಸವರಾಜ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>‘ಆ.5ರಂದು ಖಾಸಗಿ ಬಸ್ ಸಂಚಾರ ಆರಂಭಿಸಲು ತೀರ್ಮಾನಿಸಲಾಗಿತ್ತು. ಮಧುಗಿರಿಯಿಂದ ತುಮಕೂರಿಗೆ ಹೋಗಿ ಬರಲು ತುಂಬಾಡಿ ಮತ್ತು ಓಬಳಾಪುರದ ಟೋಲ್ನಲ್ಲಿ ಶುಲ್ಕ ಪಾವತಿಸಬೇಕು. ಈ ಶುಲ್ಕ ದುಬಾರಿ ಆಗುತ್ತಿದೆ. ಸಂಸದರು ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು ಕರೆಸಿ ಮಾತನಾಡಿದ್ದಾರೆ’ ಎಂದು ಖಾಸಗಿ ಬಸ್ ಮಾಲೀಕರ ಸಂಘದ ಜಿಲ್ಲಾ ಕಾರ್ಯದರ್ಶಿ ಎಂ.ಎಸ್.ಶಂಕರ ನಾರಾಯಣ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಒಂದೆರಡು ದಿನಗಳಲ್ಲಿ ಖಾಸಗಿ ಬಸ್ಗಳು ಯಾವಾಗ ಸಂಚರಿಸಲಿವೆ ಎನ್ನುವುದು ಖಚಿತವಾಗುತ್ತದೆ. ನಿತ್ಯ ತುಮಕೂರು– ಮಧುಗಿರಿ ಮಾರ್ಗದಲ್ಲಿ 500 ಬಸ್ಗಳು ಸಂಚರಿಸುತ್ತವೆ. ಚಾಲಕರು, ನಿರ್ವಾಹಕರು, ಕ್ಲೀನರ್ ಸೇರಿದಂತೆ 6000 ಸಾವಿರ ಜನರು ಖಾಸಗಿ ಬಸ್ ವಲಯದಲ್ಲಿ ದುಡಿಯುತ್ತಿದ್ದಾರೆ’ ಎಂದರು.</p>.<p><strong>ಕುಣಿಗಲ್ ಮಾರ್ಗದಲ್ಲಿ ಆರಂಭ</strong></p>.<p>ಕುಣಿಗಲ್– ತುಮಕೂರು ನಡುವಿನ ಖಾಸಗಿ ಬಸ್ಗಳ ಸಂಚಾರ ಸೋಮವಾರದಿಂದ ಪುನರಾರಂಭವಾಯಿತು.</p>.<p>ಈ ಮಾರ್ಗದಲ್ಲಿ ಯಾವುದೇ ಟೋಲ್ಗಳು ಇಲ್ಲ. ಇದರಿಂದ ಈ ವಲಯದಲ್ಲಿ ಬಸ್ಗಳ ಸಂಚಾರ ಆರಂಭವಾಗಿದೆ. ಈ ಮಾರ್ಗದಲ್ಲಿ ಬೆಳಿಗ್ಗೆಯಿಂದ 12 ಖಾಸಗಿ ಬಸ್ಗಳು ಸಂಚಾರಿಸಿದವು. ಪ್ರಯಾಣಿಕರು ಕಡಿಮೆ ಸಂಖ್ಯೆಯಲ್ಲಿ ಇದ್ದರು. ಬಸ್ನಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮತ್ತು ಅಂತರ ಕಾಯ್ದುಕೊಳ್ಳಲಾಗಿತ್ತು. ಈ ಮಾರ್ಗದಲ್ಲಿ ಹೆಚ್ಚಿನ ಜನರು ಖಾಸಗಿ ಬಸ್ ಸಂಚಾರ ಅವಲಂಬಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>