2020 ಆಗಸ್ಟ್ 28ರಲ್ಲಿ ಬಾವಿಕಟ್ಟೆ ನಾಗಣ್ಣ ಅವರನ್ನು ಟೂಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಸುಮಾರು 1 ವರ್ಷ 10 ತಿಂಗಳು ಕೆಲಸ ನಿರ್ವಹಿಸಿದ್ದರು. ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಬಾವಿಕಟ್ಟೆ ನಾಗಣ್ಣ ಅವರನ್ನು ನೇಮಕ ಮಾಡಲಾಗಿತ್ತು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ವಿವಿಧ ನಿಗಮ ಮಂಡಳಿಗಳಿಗೆ ಹಿಂದಿನ ಅಧ್ಯಕ್ಷರು, ಸದಸ್ಯರನ್ನು ಬದಲಿಸಿ ಹೊಸದಾಗಿ ನೇಮಕ ಮಾಡಲು ನಿರ್ಧರಿಸಲಾಗಿತ್ತು. ರಾಜ್ಯದಲ್ಲಿ ಕೆಲ ದಿನಗಳ ಹಿಂದೆ ಕೆಲವು ನಿಗಮಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿತ್ತು. ಜಿಲ್ಲೆಯಲ್ಲಿನ ನೇಮಕ ಸಾಧ್ಯವಾಗಿರಲಿಲ್ಲ. ಈಗ ಟೂಡಾ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ.