ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಂದ ಹಣ್ಣು ಖರೀದಿ: ಸೋಂಕಿತರಿಗೆ ರಸಾಯನ

Last Updated 3 ಜೂನ್ 2021, 5:39 IST
ಅಕ್ಷರ ಗಾತ್ರ

ಶಿರಾ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿ 25 ವರ್ಷ ಪೂರ್ಣಗೊಂಡ ಬೆಳ್ಳಿ ಹಬ್ಬದ ನೆನಪಿಗಾಗಿ ಬುಧವಾರ ಜೆಡಿಎಸ್ ಮುಖಂಡ ಸಿ.ಆರ್. ಉಮೇಶ್ ರೈತರಿಂದ ಹಣ್ಣುಗಳನ್ನು ಖರೀದಿಸಿ, ಆಸ್ಪತ್ರೆಯಲ್ಲಿನ ರೋಗಿಗಳಿಗೆ ಪೌಷ್ಟಿಕ ರಸಾಯನ ತಯಾರಿಸಿ ವಿತರಿಸಿದರು.

ಕರ್ನಾಟಕದ ಕೀರ್ತಿಯನ್ನು ರಾಷ್ಟ್ರ ಮಟ್ಟದಲ್ಲಿ ಬೆಳಗಿಸಿದ ದೇವೇಗೌಡರು ಹೆಮ್ಮೆಯ ಪ್ರತೀಕವಾಗಿದ್ದಾರೆ. ಅಧಿಕಾರವಧಿಯಲ್ಲಿ ರೈತಪರ ನಿಲುವು ತೆಗೆದುಕೊಳ್ಳುವ ಮೂಲಕ ರೈತರ ಬದುಕಿನಲ್ಲಿ ಆಶಾ ಕಿರಣ ಮೂಡಿಸಿದರು.

ಕೊರೊನಾ ಸಂಕಷ್ಟದಿಂದ ರೈತರು ಬೆಳೆದ ಹಣ್ಣುಗಳಿಗೆ ಮಾರುಕಟ್ಟೆ ಇಲ್ಲದೆ ಕಷ್ಟ ಅನುಭವಿಸುತ್ತಿರುವುದರಿಂದ ರೈತರಿಂದ ನೇರವಾಗಿ ಮಾವು, ಹಲಸು, ಬಾಳೆಹಣ್ಣು ಸೇರಿದಂತೆ ಅನೇಕ ತಾಜಾ ಹಣ್ಣುಗಳನ್ನು ಖರೀದಿಸಿ ಪೌಷ್ಟಿಕಯುಕ್ತ ರಸಾಯನ ತಯಾರಿಸಿ ಕೋವಿಡ್ ಸೊಂಕಿತರು ಹಾಗೂ ಆಸ್ಪತ್ರೆಯಲ್ಲಿನ ರೋಗಿಗಳಿಗೆ ವಿತರಿಸಲು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶ್ರೀನಾಥ್ ಹಾಗೂ ಡಾ.ಡಿ.ಎಂ.ಗೌಡ ಅವರಿಗೆ ಹಸ್ತಾಂತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT