<p><strong>ಗುಬ್ಬಿ</strong>: ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್.ನಂದಿಹಳ್ಳಿ ಗ್ರಾಮದ ಸುತ್ತಮುತ್ತ ಪಂಪ್ಸೆಟ್ಗಳ ಕೇಬಲ್ ಕಳ್ಳತನ ನಡೆಯುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.</p>.<p>ತಾಲ್ಲೂಕಿನಲ್ಲಿ ಅಡಿಕೆ ಬೆಳೆ ಹೆಚ್ಚಾಗಿರುವುದರಿಂದ ಕಾಲಕ್ಕೆ ಸರಿಯಾಗಿ ನೀರು ಹಾಯಿಸಲೇಬೇಕಿದೆ. ರಾತ್ರಿ ಕಳ್ಳರು ಕೇಬಲ್ ಕಳ್ಳತನ ಮಾಡುತ್ತಿರುವುದು ರೈತರನ್ನು ಚಿಂತೆಗೀಡು ಮಾಡಿದೆ. ರಾತ್ರಿ ತೋಟಕ್ಕೆ ಹೋಗಲು ಚಿರತೆಗಳ ಭಯ ಒಂದೆಡೆಯಾದರೆ, ಕಳ್ಳರ ಹಾವಳಿ ಮತ್ತೊಂದೆಡೆ.</p>.<p>ಕಳೆದ ಬೇಸಿಗೆ ಸಂದರ್ಭದಲ್ಲಿಯೂ ಗ್ರಾಮದ ಸುತ್ತಮುತ್ತ ರೈತರ ಕೃಷಿ ಪಂಪ್ಸೆಟ್ಗಳ ಕೇಬಲ್ ಕಳ್ಳತನವಾಗುತ್ತಿತ್ತು. ಆಗ ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಪೊಲೀಸರು ಬಂದು ಮಹಜರು ಮಾಡಿ ಹೋಗಿದ್ದರು. ಆದರೆ ತನಿಖೆ ಏನಾಯಿತು ಎಂಬ ಮಾಹಿತಿ ಇಲ್ಲವಾಗಿದೆ ಎಂದು ರೈತರು ದೂರಿದ್ದಾರೆ.</p>.<p>ಪೊಲೀಸರು ಅಗತ್ಯ ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಲು ಮುಂದಾಗಬೇಕು. ಪೊಲೀಸರು ರೈತರ ಸಹಕಾರಕ್ಕೆ ನಿಲ್ಲಬೇಕಿದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಜಶೇಖರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್.ನಂದಿಹಳ್ಳಿ ಗ್ರಾಮದ ಸುತ್ತಮುತ್ತ ಪಂಪ್ಸೆಟ್ಗಳ ಕೇಬಲ್ ಕಳ್ಳತನ ನಡೆಯುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.</p>.<p>ತಾಲ್ಲೂಕಿನಲ್ಲಿ ಅಡಿಕೆ ಬೆಳೆ ಹೆಚ್ಚಾಗಿರುವುದರಿಂದ ಕಾಲಕ್ಕೆ ಸರಿಯಾಗಿ ನೀರು ಹಾಯಿಸಲೇಬೇಕಿದೆ. ರಾತ್ರಿ ಕಳ್ಳರು ಕೇಬಲ್ ಕಳ್ಳತನ ಮಾಡುತ್ತಿರುವುದು ರೈತರನ್ನು ಚಿಂತೆಗೀಡು ಮಾಡಿದೆ. ರಾತ್ರಿ ತೋಟಕ್ಕೆ ಹೋಗಲು ಚಿರತೆಗಳ ಭಯ ಒಂದೆಡೆಯಾದರೆ, ಕಳ್ಳರ ಹಾವಳಿ ಮತ್ತೊಂದೆಡೆ.</p>.<p>ಕಳೆದ ಬೇಸಿಗೆ ಸಂದರ್ಭದಲ್ಲಿಯೂ ಗ್ರಾಮದ ಸುತ್ತಮುತ್ತ ರೈತರ ಕೃಷಿ ಪಂಪ್ಸೆಟ್ಗಳ ಕೇಬಲ್ ಕಳ್ಳತನವಾಗುತ್ತಿತ್ತು. ಆಗ ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಪೊಲೀಸರು ಬಂದು ಮಹಜರು ಮಾಡಿ ಹೋಗಿದ್ದರು. ಆದರೆ ತನಿಖೆ ಏನಾಯಿತು ಎಂಬ ಮಾಹಿತಿ ಇಲ್ಲವಾಗಿದೆ ಎಂದು ರೈತರು ದೂರಿದ್ದಾರೆ.</p>.<p>ಪೊಲೀಸರು ಅಗತ್ಯ ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಲು ಮುಂದಾಗಬೇಕು. ಪೊಲೀಸರು ರೈತರ ಸಹಕಾರಕ್ಕೆ ನಿಲ್ಲಬೇಕಿದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಜಶೇಖರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>