ಹಲವು ಕಡೆ ಚರಂಡಿ ಇಲ್ಲ
ನಗರದ ಎಲ್ಲ ರಾಜಕಾಲುವೆಗಳು ಮುಚ್ಚಿಕೊಂಡು ಹೋಗಿವೆ. ನೀರು ಸಮರ್ಪಕವಾಗಿ ಹರಿದು ಹೋಗಲು ಆಗುತ್ತಿಲ್ಲ. ಹಲವು ಕಡೆಗಳಲ್ಲಿ ಚರಂಡಿ ಇಲ್ಲದಂತಾಗಿದೆ. ಕಲುಷಿತ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಜಿಲ್ಲಾ ಆಡಳಿತ, ಪಾಲಿಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕು. ಸ್ಮಾರ್ಟ್ ಸಿಟಿ ಯೋಜನೆಯಡಿ ರಾಜಕಾಲುವೆಗಳ ನಿರ್ವಹಣೆ ಮಾಡಬಹುದಿತ್ತು. ಆದರೆ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ.-ಕುಂದರನಹಳ್ಳಿ ರಮೇಶ್, ರಾಜ್ಯ ಮಟ್ಟದ ದಿಶಾ ಸಮಿತಿ ಸದಸ್ಯ