ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ದೆಬಶಿಶ್ ಮುಖರ್ಜಿ ಮಾತನಾಡಿ,‘ ಆರ್ಥಿಕ ವ್ಯವಸ್ಥೆಯ ವಿವಿಧ ಕ್ಷೇತ್ರಗಳಿಗೆ ಸಾಲ ಸೌಲಭ್ಯ ಹೆಚ್ಚಳ, ತಂತ್ರಜ್ಞಾನ ಬಳಕೆ ಅಧಿಕ ಗೊಳಿಸುವುದು, ಬ್ಯಾಂಕಿಂಗ್ ಕ್ಷೇತ್ರವನ್ನು ಪ್ರಜಾ ಕೇಂದ್ರಿಕೃತವನ್ನಾಗಿಸುವುದು, ಹಿರಿಯ ನಾಗರಿಕರು, ಸಣ್ಣ ಉದ್ದಿಮೆದಾರರು, ಉದ್ಯಮಿಗಳು, ಯುವಕರು, ವಿದ್ಯಾರ್ಥಿಗಳು, ಮಹಿಳೆಯರು ಸೇರಿದಂತೆ ವಿವಿಧ ವರ್ಗಗಳ ಅವಶ್ಯಕತೆ, ಆಕಾಂಕ್ಷೆಗಳಿಗೆ ಸ್ಪಂದಿಸಿ ಜವಾಬ್ದಾರಿ ನಿಭಾಯಿಸುವ ಬಗ್ಗೆ ತಿಳಿಸಿದರು.