<p><strong>ತುಮಕೂರು:</strong> ನಗರದಲ್ಲಿ ಶನಿವಾರ ರೋಟರಿ ತುಮಕೂರು ಸೆಂಟ್ರಲ್ ಹಾಗೂ ರೋಟರಿ ಈಸ್ಟ್ ವತಿಯಿಂದ ಕ್ಯಾನ್ಸರ್ ಜಾಗೃತಿ ಜಾಥಾ ನಡೆಯಿತು.</p>.<p>ನಗರದ ಎಸ್ಐಟಿ ಕಾಲೇಜು ಮುಂಭಾಗದಿಂದ ಆರಂಭವಾದ ಜಾಥಾ ಬಿ.ಎಚ್.ರಸ್ತೆ ಮೂಲಕ ಸಾಗಿ ವಿಶ್ವವಿದ್ಯಾಲಯ ಮುಂಭಾಗ ಮುಕ್ತಾಯಗೊಂಡಿತು. ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಕ್ಯಾನ್ಸರ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.</p>.<p>ರೋಟರಿ ಜಿಲ್ಲಾ ಕಾರ್ಯದರ್ಶಿ ಬಿಳಿಗೆರೆ ಶಿವಕುಮಾರ್, ‘ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳಲ್ಲಿ ಹೆಚ್ಚಾಗಿ ಗರ್ಭ ಕಂಠದ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಕ್ಯಾನ್ಸರ್ ನಿವಾರಣೆಗೆ ವ್ಯಾಕ್ಸಿನ್ ಸಹ ಬಂದಿದೆ’ ಎಂದು ತಿಳಿಸಿದರು.</p>.<p>ರೋಟರಿ ಮುಖಂಡರಾದ ಆಶಾ ಪ್ರಸನ್ನಕುಮಾರ್, ‘ಗರ್ಭಕಂಠದ ಕ್ಯಾನ್ಸರ್ ನಿವಾರಣೆಗಾಗಿ ರೋಟರಿ ವತಿಯಿಂದ ಉಚಿತವಾಗಿ ವ್ಯಾಕ್ಸಿನ್ ಕೊಡಿಸಲಾಗುತ್ತಿದೆ. ಈ ವ್ಯಾಕ್ಸಿನ್ ತೆಗೆದುಕೊಂಡರೆ ಜೀವನ ಪರ್ಯಂತ ಕ್ಯಾನ್ಸರ್ ಬರುವುದಿಲ್ಲ’ ಎಂದು ಹೇಳಿದರು.</p>.<p>ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್, ರೋಟರಿ ಸೆಂಟ್ರಲ್ ಅಧ್ಯಕ್ಷ ರಾಮಶೇಷಗಿರಿ ರಾವ್, ರೋಟರಿ ಈಸ್ಟ್ ಅಧ್ಯಕ್ಷ ಶಶಿಧರ್, ಪ್ರಮುಖರಾದ ಚಂದ್ರಶೇಖರ್, ಸುರೇಶ್, ಶ್ರೀಹರಿ, ಮಲ್ಲೇಶಯ್ಯ, ಕಿಶೋರ್, ನಾಗರಾಜಶೆಟ್ಟಿ, ಚಿಕ್ಕೇಗೌಡ, ನಾಗರತ್ನ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನಗರದಲ್ಲಿ ಶನಿವಾರ ರೋಟರಿ ತುಮಕೂರು ಸೆಂಟ್ರಲ್ ಹಾಗೂ ರೋಟರಿ ಈಸ್ಟ್ ವತಿಯಿಂದ ಕ್ಯಾನ್ಸರ್ ಜಾಗೃತಿ ಜಾಥಾ ನಡೆಯಿತು.</p>.<p>ನಗರದ ಎಸ್ಐಟಿ ಕಾಲೇಜು ಮುಂಭಾಗದಿಂದ ಆರಂಭವಾದ ಜಾಥಾ ಬಿ.ಎಚ್.ರಸ್ತೆ ಮೂಲಕ ಸಾಗಿ ವಿಶ್ವವಿದ್ಯಾಲಯ ಮುಂಭಾಗ ಮುಕ್ತಾಯಗೊಂಡಿತು. ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಕ್ಯಾನ್ಸರ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.</p>.<p>ರೋಟರಿ ಜಿಲ್ಲಾ ಕಾರ್ಯದರ್ಶಿ ಬಿಳಿಗೆರೆ ಶಿವಕುಮಾರ್, ‘ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳಲ್ಲಿ ಹೆಚ್ಚಾಗಿ ಗರ್ಭ ಕಂಠದ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಕ್ಯಾನ್ಸರ್ ನಿವಾರಣೆಗೆ ವ್ಯಾಕ್ಸಿನ್ ಸಹ ಬಂದಿದೆ’ ಎಂದು ತಿಳಿಸಿದರು.</p>.<p>ರೋಟರಿ ಮುಖಂಡರಾದ ಆಶಾ ಪ್ರಸನ್ನಕುಮಾರ್, ‘ಗರ್ಭಕಂಠದ ಕ್ಯಾನ್ಸರ್ ನಿವಾರಣೆಗಾಗಿ ರೋಟರಿ ವತಿಯಿಂದ ಉಚಿತವಾಗಿ ವ್ಯಾಕ್ಸಿನ್ ಕೊಡಿಸಲಾಗುತ್ತಿದೆ. ಈ ವ್ಯಾಕ್ಸಿನ್ ತೆಗೆದುಕೊಂಡರೆ ಜೀವನ ಪರ್ಯಂತ ಕ್ಯಾನ್ಸರ್ ಬರುವುದಿಲ್ಲ’ ಎಂದು ಹೇಳಿದರು.</p>.<p>ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್, ರೋಟರಿ ಸೆಂಟ್ರಲ್ ಅಧ್ಯಕ್ಷ ರಾಮಶೇಷಗಿರಿ ರಾವ್, ರೋಟರಿ ಈಸ್ಟ್ ಅಧ್ಯಕ್ಷ ಶಶಿಧರ್, ಪ್ರಮುಖರಾದ ಚಂದ್ರಶೇಖರ್, ಸುರೇಶ್, ಶ್ರೀಹರಿ, ಮಲ್ಲೇಶಯ್ಯ, ಕಿಶೋರ್, ನಾಗರಾಜಶೆಟ್ಟಿ, ಚಿಕ್ಕೇಗೌಡ, ನಾಗರತ್ನ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>