<p>ತುಮಕೂರು: ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆಯಿಂದ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಆರೋಗ್ಯ ಅಭಿಯಾನದಲ್ಲಿ ತಪಾಸಣೆಗೆ ಒಳಗಾಗಿದ್ದ 249 ಜನರಲ್ಲಿ ಕ್ಯಾನ್ಸರ್ ಲಕ್ಷಣಗಳು ಕಂಡು ಬಂದಿವೆ.</p>.<p>‘ಜಿಲ್ಲೆಯಲ್ಲಿ 30 ವರ್ಷ ಮೇಲ್ಪಟ್ಟ 2.23 ಲಕ್ಷ ಜನರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಈ ವೇಳೆ 143 ಜನರಲ್ಲಿ ಬಾಯಿ ಕ್ಯಾನ್ಸರ್, 42 ಜನರಲ್ಲಿ ಸ್ತನ ಕ್ಯಾನ್ಸರ್, 64 ಮಂದಿಯಲ್ಲಿ ಗರ್ಭಕಂಠ ಕ್ಯಾನ್ಸರ್ ಇರುವುದನ್ನು ಪತ್ತೆ ಹಚ್ಚಲಾಗಿದೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗಿದೆ’ ಎಂ ಜಿ.ಪಂ ಸಿಇಒ ಜಿ.ಪ್ರಭು ತಿಳಿಸಿದರು.</p>.<p>ನಗರದ ಜಿ.ಪಂ ಕಚೇರಿಯಲ್ಲಿ ಬುಧವಾರ ಶಿಕ್ಷಣ, ಆರೋಗ್ಯ ಪ್ರಗತಿ ಕುರಿತು ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಮಾಹಿತಿ ನೀಡಿದರು.</p>.<p>‘ಹಸಿರು ಗ್ರಾಮ ಅಭಿಯಾನದ ಅಂಗವಾಗಿ 3.3 ಲಕ್ಷ ಸಸಿ ನೆಡುವ ಗುರಿ ಹೊಂದಲಾಗಿದೆ. ಸಸ್ಯಕ್ಷೇತ್ರಗಳಲ್ಲಿ ಸುಮಾರು 47 ಜಾತಿ 3,68,552 ಸಸಿಗಳನ್ನು ಬೆಳೆಸಲಾಗಿದೆ. ಈ ಸಸಿಗಳನ್ನು ಶಾಲಾ ಆವರಣ, ಸರ್ಕಾರಿ ಜಾಗ, ಗೋಮಾಳ, ರಸ್ತೆ ಬದಿ, ಆಸ್ಪತ್ರೆ ಆವರಣಗಳಲ್ಲಿ ನೆಟ್ಟು ಪೋಷಿಸಬೇಕು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆಯಿಂದ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಆರೋಗ್ಯ ಅಭಿಯಾನದಲ್ಲಿ ತಪಾಸಣೆಗೆ ಒಳಗಾಗಿದ್ದ 249 ಜನರಲ್ಲಿ ಕ್ಯಾನ್ಸರ್ ಲಕ್ಷಣಗಳು ಕಂಡು ಬಂದಿವೆ.</p>.<p>‘ಜಿಲ್ಲೆಯಲ್ಲಿ 30 ವರ್ಷ ಮೇಲ್ಪಟ್ಟ 2.23 ಲಕ್ಷ ಜನರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಈ ವೇಳೆ 143 ಜನರಲ್ಲಿ ಬಾಯಿ ಕ್ಯಾನ್ಸರ್, 42 ಜನರಲ್ಲಿ ಸ್ತನ ಕ್ಯಾನ್ಸರ್, 64 ಮಂದಿಯಲ್ಲಿ ಗರ್ಭಕಂಠ ಕ್ಯಾನ್ಸರ್ ಇರುವುದನ್ನು ಪತ್ತೆ ಹಚ್ಚಲಾಗಿದೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗಿದೆ’ ಎಂ ಜಿ.ಪಂ ಸಿಇಒ ಜಿ.ಪ್ರಭು ತಿಳಿಸಿದರು.</p>.<p>ನಗರದ ಜಿ.ಪಂ ಕಚೇರಿಯಲ್ಲಿ ಬುಧವಾರ ಶಿಕ್ಷಣ, ಆರೋಗ್ಯ ಪ್ರಗತಿ ಕುರಿತು ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಮಾಹಿತಿ ನೀಡಿದರು.</p>.<p>‘ಹಸಿರು ಗ್ರಾಮ ಅಭಿಯಾನದ ಅಂಗವಾಗಿ 3.3 ಲಕ್ಷ ಸಸಿ ನೆಡುವ ಗುರಿ ಹೊಂದಲಾಗಿದೆ. ಸಸ್ಯಕ್ಷೇತ್ರಗಳಲ್ಲಿ ಸುಮಾರು 47 ಜಾತಿ 3,68,552 ಸಸಿಗಳನ್ನು ಬೆಳೆಸಲಾಗಿದೆ. ಈ ಸಸಿಗಳನ್ನು ಶಾಲಾ ಆವರಣ, ಸರ್ಕಾರಿ ಜಾಗ, ಗೋಮಾಳ, ರಸ್ತೆ ಬದಿ, ಆಸ್ಪತ್ರೆ ಆವರಣಗಳಲ್ಲಿ ನೆಟ್ಟು ಪೋಷಿಸಬೇಕು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>