ಗ್ರಾಮದ ಸಾಮಾನ್ಯ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿರುವ ಜಯರಾಮ್ ಬೆಂಗಳೂರಿನಲ್ಲಿ ಮತ್ತು ಗ್ರಾಮದಲ್ಲಿ ವಾಸವಾಗಿದ್ದಾರೆ. ಮತ್ತೊಬ್ಬ ಅಭ್ಯರ್ಥಿ ಶೇಖರ್ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಗ್ರಾಮದ ಪಟ್ಟಲದಮ್ಮ ದೇವಾಲಯ ಜೀರ್ಣೋದ್ಧಾರಕ್ಕೆ ₹ 1.35 ಕೋಟಿ ಅಗತ್ಯವಾಗಿದ್ದು ಜಯರಾಮ್, ಅಭಿವೃದ್ಧಿ ಸಮಿತಿಯ ಸದಸ್ಯರಾಗಿದ್ದಾರೆ. ಇವರಿಗೆ ಕೋಟಿ ಹಣ ನೀಡುವಷ್ಟು ಶಕ್ತಿ ಇಲ್ಲ. ಇವರಿಂದ ಖುದ್ದು ಹೇಳಿಕೆ ಪಡೆಯಲಾಗಿದೆ.