<p>ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ನಿಡಸಾಲೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಕಾಲುಬಾಯಿ ರೋಗದಿಂದ ಜಾನುವಾರು ಮೃತಪಡುತ್ತಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.</p>.<p>ನಿಡಸಾಲೆ, ಚಲಮಸಂದ್ರ ಗ್ರಾಮದಲ್ಲಿ ಕಾಲುಬಾಯಿ ರೋಗದಿಂದ ಜಾನುವಾರು ಬಳಲುತ್ತಿವೆ. ಕಳೆದ ವಾರದಿಂದ ಸೋಂಕು ತೀವ್ರವಾಗಿ ವ್ಯಾಪಿಸುತ್ತಿದ್ದು ಶನಿವಾರದಿಂದ ಇಲ್ಲಿಯವರೆಗೆನಿಡಸಾಲೆ ಗ್ರಾಮದ ಪಟೇಲ್ ಗಂಗಣ್ಣ, ಶಿವಲಿಂಗಯ್ಯ, ಕೃಷ್ಣಪ್ಪ, ಚಂದ್ರೇಗೌಡ ಅವರಿಗೆ ಸೇರಿದ ಒಟ್ಟು 8 ಜಾನುವಾರು ಮೃತಪಟ್ಟಿವೆ. ಇನ್ನೂ ಹತ್ತಾರು ಜಾನುವಾರು ಸೋಂಕಿನಿಂದ ಚಿಂತಾಜನಕ ಸ್ಥಿತಿಗೆ ತಲುಪಿವೆ.</p>.<p>‘ಕಣ್ಣ ಮುಂದೆಯೇ ಜಾನುವಾರು ನರಳಿ ಮೃತಪಡುವುದನ್ನು ನೋಡಲಾಗದ ಸ್ಥಿತಿಗೆ ರೈತರು ತಲುಪಿದ್ದಾರೆ’ ಎಂದು ಗ್ರಾಮಸ್ಥ ಅರುಣ್ ತಿಳಿಸಿದ್ದಾರೆ.</p>.<p>ಗ್ರಾಮದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿದೆ. ಜಾನುವಾರುಗಳಿಗೆ ಲಸಿಕೆಯ ಅಗತ್ಯವಿದೆ. ವಿತರಣೆ ಮಾಡಲು ಸಿಬ್ಬಂದಿ ಕೊರತೆಯ ಜತೆಗೆ ಪಶು ವೈದ್ಯರಿಗೆ ನಿಡಸಾಲೆಯ ಜತೆಗೆ ಉಜ್ಜನಿಯ ಗ್ರಾಮದ ಪ್ರಭಾರ ಕೆಲಸವನ್ನೂ ನೀಡಲಾಗಿದೆ. ಅಧಿಕಾರಿಗಳ ನಡುವಿನ ಸಮನ್ವಯತೆಯ ಕೊರತೆ ಇದೆ. ಜತೆಗೆ ಸರ್ಕಾರದಿಂದ ಉಚಿತ ಲಸಿಕೆ ವಿತರಣೆಯಾಗದಿರುವುದು ಜಾನುವಾರುಗಳ ರಕ್ಷಣೆಗೆ ಸಮಸ್ಯೆಯಾಗಿದೆ. ಸಂಬಂದಪಟ್ಟವರು ಗಮನಹರಿಸಲು ಮುಂದಾಗಬೇಕು ಎಂದು ಗ್ರಾಮಸ್ಥರಾದ ಯೋಗೀಶ್ ಮತ್ತು ಪ್ರವೀಣ್ ಕೋರಿದ್ದಾರೆ.</p>.<p>‘ಸರ್ಕಾರದಿಂದ ಕಾಲುಬಾಯಿ ರೋಗದ ಉಚಿತ ಲಸಿಕೆ ವಿತರಣೆ ಬಗ್ಗೆ ಮಾರ್ಗಸೂಚಿ ಬಂದಿಲ್ಲ. ಲಸಿಕೆಯೂ ಸರಬರಾಜಾಗಿಲ್ಲ. ಆದರೂ, ಕಾಲುಬಾಯಿ ರೋಗ ನಿಯಂತ್ರಣಕ್ಕೆ ಪರ್ಯಾಯ ಲಸಿಕೆ ನೀಡಲು ವೈದ್ಯರಿಗೆ ಸೂಚನೆ ನೀಡಲಾಗಿದೆ’ ಎಂದುಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದ್ದಾರೆ.</p>.<p>ನಿಡಸಾಲೆಯ ಪಶು ವೈದ್ಯೆ ಪ್ರಿಯಾ ಮಾತನಾಡಿ, ‘ನಿಡಸಾಲೆ ಗ್ರಾಮದಲ್ಲಿ ಕಾಲುಬಾಯಿ ರೋಗದಿಂದ ಜಾನುವಾರು ಮೃತಪಡುತ್ತಿವೆ. ರೋಗ ಹರಡದಂತೆ ಸುತ್ತಲಿನ ಗ್ರಾಮಗಳಾದ ಹೊಸಹಳ್ಳಿದೊಡ್ಡಿ, ಎ.ಕೆ. ಕಾಲೊನಿ, ಕೆಬ್ಬಳ್ಳಿ, ರಾಜಪ್ಪದೊಡ್ಡಿಯಲ್ಲಿ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ನಿಡಸಾಲೆ ಗ್ರಾಮದಲ್ಲಿ ಸೋಂಕು ಹರಡದಂತೆ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಸ್ಥರು ಸಹ ಎಚ್ಚರಿಕೆವಹಿಸಬೇಕಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ನಿಡಸಾಲೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಕಾಲುಬಾಯಿ ರೋಗದಿಂದ ಜಾನುವಾರು ಮೃತಪಡುತ್ತಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.</p>.<p>ನಿಡಸಾಲೆ, ಚಲಮಸಂದ್ರ ಗ್ರಾಮದಲ್ಲಿ ಕಾಲುಬಾಯಿ ರೋಗದಿಂದ ಜಾನುವಾರು ಬಳಲುತ್ತಿವೆ. ಕಳೆದ ವಾರದಿಂದ ಸೋಂಕು ತೀವ್ರವಾಗಿ ವ್ಯಾಪಿಸುತ್ತಿದ್ದು ಶನಿವಾರದಿಂದ ಇಲ್ಲಿಯವರೆಗೆನಿಡಸಾಲೆ ಗ್ರಾಮದ ಪಟೇಲ್ ಗಂಗಣ್ಣ, ಶಿವಲಿಂಗಯ್ಯ, ಕೃಷ್ಣಪ್ಪ, ಚಂದ್ರೇಗೌಡ ಅವರಿಗೆ ಸೇರಿದ ಒಟ್ಟು 8 ಜಾನುವಾರು ಮೃತಪಟ್ಟಿವೆ. ಇನ್ನೂ ಹತ್ತಾರು ಜಾನುವಾರು ಸೋಂಕಿನಿಂದ ಚಿಂತಾಜನಕ ಸ್ಥಿತಿಗೆ ತಲುಪಿವೆ.</p>.<p>‘ಕಣ್ಣ ಮುಂದೆಯೇ ಜಾನುವಾರು ನರಳಿ ಮೃತಪಡುವುದನ್ನು ನೋಡಲಾಗದ ಸ್ಥಿತಿಗೆ ರೈತರು ತಲುಪಿದ್ದಾರೆ’ ಎಂದು ಗ್ರಾಮಸ್ಥ ಅರುಣ್ ತಿಳಿಸಿದ್ದಾರೆ.</p>.<p>ಗ್ರಾಮದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿದೆ. ಜಾನುವಾರುಗಳಿಗೆ ಲಸಿಕೆಯ ಅಗತ್ಯವಿದೆ. ವಿತರಣೆ ಮಾಡಲು ಸಿಬ್ಬಂದಿ ಕೊರತೆಯ ಜತೆಗೆ ಪಶು ವೈದ್ಯರಿಗೆ ನಿಡಸಾಲೆಯ ಜತೆಗೆ ಉಜ್ಜನಿಯ ಗ್ರಾಮದ ಪ್ರಭಾರ ಕೆಲಸವನ್ನೂ ನೀಡಲಾಗಿದೆ. ಅಧಿಕಾರಿಗಳ ನಡುವಿನ ಸಮನ್ವಯತೆಯ ಕೊರತೆ ಇದೆ. ಜತೆಗೆ ಸರ್ಕಾರದಿಂದ ಉಚಿತ ಲಸಿಕೆ ವಿತರಣೆಯಾಗದಿರುವುದು ಜಾನುವಾರುಗಳ ರಕ್ಷಣೆಗೆ ಸಮಸ್ಯೆಯಾಗಿದೆ. ಸಂಬಂದಪಟ್ಟವರು ಗಮನಹರಿಸಲು ಮುಂದಾಗಬೇಕು ಎಂದು ಗ್ರಾಮಸ್ಥರಾದ ಯೋಗೀಶ್ ಮತ್ತು ಪ್ರವೀಣ್ ಕೋರಿದ್ದಾರೆ.</p>.<p>‘ಸರ್ಕಾರದಿಂದ ಕಾಲುಬಾಯಿ ರೋಗದ ಉಚಿತ ಲಸಿಕೆ ವಿತರಣೆ ಬಗ್ಗೆ ಮಾರ್ಗಸೂಚಿ ಬಂದಿಲ್ಲ. ಲಸಿಕೆಯೂ ಸರಬರಾಜಾಗಿಲ್ಲ. ಆದರೂ, ಕಾಲುಬಾಯಿ ರೋಗ ನಿಯಂತ್ರಣಕ್ಕೆ ಪರ್ಯಾಯ ಲಸಿಕೆ ನೀಡಲು ವೈದ್ಯರಿಗೆ ಸೂಚನೆ ನೀಡಲಾಗಿದೆ’ ಎಂದುಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದ್ದಾರೆ.</p>.<p>ನಿಡಸಾಲೆಯ ಪಶು ವೈದ್ಯೆ ಪ್ರಿಯಾ ಮಾತನಾಡಿ, ‘ನಿಡಸಾಲೆ ಗ್ರಾಮದಲ್ಲಿ ಕಾಲುಬಾಯಿ ರೋಗದಿಂದ ಜಾನುವಾರು ಮೃತಪಡುತ್ತಿವೆ. ರೋಗ ಹರಡದಂತೆ ಸುತ್ತಲಿನ ಗ್ರಾಮಗಳಾದ ಹೊಸಹಳ್ಳಿದೊಡ್ಡಿ, ಎ.ಕೆ. ಕಾಲೊನಿ, ಕೆಬ್ಬಳ್ಳಿ, ರಾಜಪ್ಪದೊಡ್ಡಿಯಲ್ಲಿ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ನಿಡಸಾಲೆ ಗ್ರಾಮದಲ್ಲಿ ಸೋಂಕು ಹರಡದಂತೆ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಸ್ಥರು ಸಹ ಎಚ್ಚರಿಕೆವಹಿಸಬೇಕಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>