ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಬಲದಿಂದ ಶಿರಾ ಗೆಲ್ಲಲು ಸಾಧ್ಯವಿಲ್ಲ: ಎಚ್‌.ಡಿ.ಕುಮಾರಸ್ವಾಮಿ

Last Updated 22 ಅಕ್ಟೋಬರ್ 2020, 4:29 IST
ಅಕ್ಷರ ಗಾತ್ರ

ಬೆಂಗಳೂರು: ಆರ್‌.ಆರ್‌.ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆಯನ್ನು ಹಣ ಬಲದ ಮೂಲಕ ಗೆಲ್ಲಲು ಬಿಜೆಪಿ ಹೊರಟಿದೆ. ಆದರೆ, ಶಿರಾದಲ್ಲಿ ಹಣ ಬಲದಿಂದ ಗೆಲ್ಲಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ‘ಹಣ ಬಲದಿಂದ ಕೆ.ಆರ್‌.ಪೇಟೆಯಲ್ಲಿ ಕಮಲ ಅರಳಿಸಿದಂತೆ ಶಿರಾದಲ್ಲಿ ಕಮಲ ಅರಳಿಸಲು ಸಾಧ್ಯವಿಲ್ಲ. ಎವೆರಿ ಡೇಸ್‌ ಇಸ್ ನಾಟ್‌ ಸಂಡೇ’ ಎಂದು ಹೇಳಿದರು.

‘ನಳಿನ್‌ ಕುಮಾರ್‌ ಕಟೀಲ್‌ಗೆ ಘನತೆಯೇ ಇಲ್ಲ. ನಾನು ಮುಖ್ಯಮಂತ್ರಿ ಆಗಿದ್ದಾಗ ಹೇಗಿದ್ದೆ ಎಂಬುದು ಜನರಿಗೆ ಗೊತ್ತು. ನನ್ನಷ್ಟು ಜನಸಾಮಾನ್ಯರಿಗೆ ಸಿಗುವವರು ಯಾರೂ ಇಲ್ಲ. ನಳಿನ್ ಎಷ್ಟು ಬಡವರಿಗೆ ಸಹಾಯ ಮಾಡಿದ್ದಾರೆ’ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT