ಆಗಿದ್ದೇನು: ಚಿತ್ರದುರ್ಗ ಕಡೆಯಿಂದ ಬೆಂಗಳೂರಿಗೆ ಟೊಮೆಟೊ ತುಂಬಿಕೊಂಡು ಕ್ಯಾಂಟರ್ ತೆರಳುತ್ತಿತ್ತು. ಜಾಸ್ಟೋಲ್ ಸಮೀಪ ರಸ್ತೆಬದಿ ನಿಂತಿದ್ದ ಲಾರಿಗೆ ಕ್ಯಾಂಟರ್ ಹಿಂದಿನಿಂದ ಡಿಕ್ಕಿಯಾಗಿದೆ. ಚಳ್ಳಕೆರೆ ತಾಲ್ಲೂಕು ಎನ್.ದೇವರಹಳ್ಳಿ ಗ್ರಾಮದ ಕ್ಯಾಂಟರ್ ಚಾಲಕ ಶಂಕರನಾಯಕ್ (40) ಹಾಗೂ ಶಿವಣ್ಣ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಶೋಕ್ ತೀವ್ರವಾಗಿ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು.