<p><strong>ಹುಳಿಯಾರು:</strong> ಹೋಬಳಿ ವ್ಯಾಪ್ತಿಯ ಯಳನಡು ಗ್ರಾಮದ ಬಳಿ ಅರಣ್ಯ ಇಲಾಖೆಯಿಂದ ಇಟ್ಟಿದ್ದ ಬೋನಿಗೆ ಬುಧವಾರ ಚಿರತೆ ಸೆರೆಯಾಗಿದೆ.</p>.<p>ಬುಕ್ಕಾಪಟ್ಟಣ ಅರಣ್ಯ ಪ್ರದೇಶಕ್ಕೆ ಸೇರಿದ ಯಳನಡು ಗ್ರಾಮದ ಬಳಿಯ ಕಾಚನಕಟ್ಟೆ ಗಂಗಮ್ಮನ ಕೆರೆ ಸುತ್ತಮುತ್ತ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭೀತಿ ಉಂಟಾಗಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದ್ದರು.</p>.<p>ಗ್ರಾಮದ ಸುತ್ತಮುತ್ತ ಹಾಗೂ ಕೆರೆಯಲ್ಲಿ ಜಾಲಿ ಸೇರಿದಂತೆ ಬೇಲಿ ಬೆಳೆದಿರುವ ಕಾರಣ ಸಹಜವಾಗಿಯೇ ಚಿರತೆ ಆಗಾಗ ಕಾಣಿಸಿಕೊಂಡು ಮರೆಯಾಗುತ್ತಿತ್ತು. ಹಲವು ಬಾರಿ ರೈತರ ದನ, ಕುರಿ, ಮೇಕೆಗಳನ್ನು ಹೊತ್ತೊಯ್ದಿತ್ತು.</p>.<p>ಆದ್ದರಿಂದ 45 ದಿನಗಳ ಹಿಂದೆ ಚಿರತೆ ಸೆರೆಗೆ ಬೋನ್ ಇಡಲಾಗಿತ್ತು. ಮಂಗಳವಾರ ರಾತ್ರಿ ಬೇಟೆ ಅರಸಿ ಬಂದ ಚಿರತೆಯೊಂದು ಬೋನಿಗೆ ಬಿದ್ದಿದೆ.</p>.<p>ಸುಮಾರು ಮೂರು ವರ್ಷದ ಗಂಡು ಚಿರತೆಯನ್ನು ತಿಪಟೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜೆ.ಜಿ.ರವಿ ಅವರ ಮಾರ್ಗದರ್ಶನದಂತೆ ಬನ್ನೇರುಘಟ್ಟ ಪ್ರಾಣಿ ಸಂಗ್ರಹಾಲಯಕ್ಕೆ ಬಿಡಲಾಯಿತು ಎಂದು ಬುಕ್ಕಾಪಟ್ಟಣ ವಲಯ ಅರಣ್ಯಾಧಿಕಾರಿ ಎಚ್.ಮಲ್ಲಿಕಾರ್ಜುನಪ್ಪ ತಿಳಿಸಿದರು.</p>.<p>ಬುಕ್ಕಾಪಟ್ಟಣ ವಲಯ ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿಗಳಾದ ಟಿ.ಕಿರಣ್, ಸಿದ್ದಲಿಂಗಮೂರ್ತಿ, ಅರಣ್ಯ ರಕ್ಷಕರಾದ ದಿಲೀಪ್ಕುಮಾರ್, ಆರ್.ಶೇಖರ್, ಅರಣ್ಯ ವೀಕ್ಷಕ ಸಂತೋಷ್ ಸವಣೂರು ಹಾಗೂ ದಿನಗೂಲಿ ನೌಕರಾದ ನಾಗರಾಜು, ನಾಗರಾಜನಾಯ್ಕ, ರಂಗನಾಥ, ಸಂತೋಷ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಳಿಯಾರು:</strong> ಹೋಬಳಿ ವ್ಯಾಪ್ತಿಯ ಯಳನಡು ಗ್ರಾಮದ ಬಳಿ ಅರಣ್ಯ ಇಲಾಖೆಯಿಂದ ಇಟ್ಟಿದ್ದ ಬೋನಿಗೆ ಬುಧವಾರ ಚಿರತೆ ಸೆರೆಯಾಗಿದೆ.</p>.<p>ಬುಕ್ಕಾಪಟ್ಟಣ ಅರಣ್ಯ ಪ್ರದೇಶಕ್ಕೆ ಸೇರಿದ ಯಳನಡು ಗ್ರಾಮದ ಬಳಿಯ ಕಾಚನಕಟ್ಟೆ ಗಂಗಮ್ಮನ ಕೆರೆ ಸುತ್ತಮುತ್ತ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭೀತಿ ಉಂಟಾಗಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದ್ದರು.</p>.<p>ಗ್ರಾಮದ ಸುತ್ತಮುತ್ತ ಹಾಗೂ ಕೆರೆಯಲ್ಲಿ ಜಾಲಿ ಸೇರಿದಂತೆ ಬೇಲಿ ಬೆಳೆದಿರುವ ಕಾರಣ ಸಹಜವಾಗಿಯೇ ಚಿರತೆ ಆಗಾಗ ಕಾಣಿಸಿಕೊಂಡು ಮರೆಯಾಗುತ್ತಿತ್ತು. ಹಲವು ಬಾರಿ ರೈತರ ದನ, ಕುರಿ, ಮೇಕೆಗಳನ್ನು ಹೊತ್ತೊಯ್ದಿತ್ತು.</p>.<p>ಆದ್ದರಿಂದ 45 ದಿನಗಳ ಹಿಂದೆ ಚಿರತೆ ಸೆರೆಗೆ ಬೋನ್ ಇಡಲಾಗಿತ್ತು. ಮಂಗಳವಾರ ರಾತ್ರಿ ಬೇಟೆ ಅರಸಿ ಬಂದ ಚಿರತೆಯೊಂದು ಬೋನಿಗೆ ಬಿದ್ದಿದೆ.</p>.<p>ಸುಮಾರು ಮೂರು ವರ್ಷದ ಗಂಡು ಚಿರತೆಯನ್ನು ತಿಪಟೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜೆ.ಜಿ.ರವಿ ಅವರ ಮಾರ್ಗದರ್ಶನದಂತೆ ಬನ್ನೇರುಘಟ್ಟ ಪ್ರಾಣಿ ಸಂಗ್ರಹಾಲಯಕ್ಕೆ ಬಿಡಲಾಯಿತು ಎಂದು ಬುಕ್ಕಾಪಟ್ಟಣ ವಲಯ ಅರಣ್ಯಾಧಿಕಾರಿ ಎಚ್.ಮಲ್ಲಿಕಾರ್ಜುನಪ್ಪ ತಿಳಿಸಿದರು.</p>.<p>ಬುಕ್ಕಾಪಟ್ಟಣ ವಲಯ ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿಗಳಾದ ಟಿ.ಕಿರಣ್, ಸಿದ್ದಲಿಂಗಮೂರ್ತಿ, ಅರಣ್ಯ ರಕ್ಷಕರಾದ ದಿಲೀಪ್ಕುಮಾರ್, ಆರ್.ಶೇಖರ್, ಅರಣ್ಯ ವೀಕ್ಷಕ ಸಂತೋಷ್ ಸವಣೂರು ಹಾಗೂ ದಿನಗೂಲಿ ನೌಕರಾದ ನಾಗರಾಜು, ನಾಗರಾಜನಾಯ್ಕ, ರಂಗನಾಥ, ಸಂತೋಷ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>