ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಬೈಕ್‌ಗೆ ಕಾರು ಡಿಕ್ಕಿ: ಜಿ.ಪಂ. ಮಾಜಿ ಉಪಾಧ್ಯಕ್ಷ ಸಾವು

Last Updated 2 ಮೇ 2022, 16:34 IST
ಅಕ್ಷರ ಗಾತ್ರ

ಗುಬ್ಬಿ: ಪಟ್ಟಣಕ್ಕೆ ಸಮೀಪದ ಕಬ್ಬಿಣದಸೇತುವೆ ಪಾಳ್ಯದ ಬಳಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷಕೆ.ಸಿ. ಕೃಷ್ಣಮೂರ್ತಿ (65) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

ಕಡೆಪಾಳ್ಯ ಗ್ರಾಮದವರಾದ ಕೃಷ್ಣಮೂರ್ತಿ ಅವರ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ.

ಮೃತರು ಅಗ್ನಿವಂಶ ಕ್ಷತ್ರಿಯ ವಿದ್ಯಾವರ್ಧಕ ಸಂಘ, ಎವಿಕೆ ಸಮುದಾಯ ಭವನದ ಅಧ್ಯಕ್ಷ ಹಾಗೂ ಮಲ್ಲಸಂದ್ರದ ಮಹಾಲಕ್ಷ್ಮಿ ದೇವಸ್ಥಾನದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ರೈತ ಸಂಘದ ಸಂಘಟನೆಯಲ್ಲೂ ತೊಡಗಿಸಿಕೊಂಡಿದ್ದರು.

ಅಂತ್ಯಕ್ರಿಯೆಯು ಮೃತರ ಸ್ವಗ್ರಾಮದಲ್ಲಿ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT