ಗುಬ್ಬಿ: ಪಟ್ಟಣಕ್ಕೆ ಸಮೀಪದ ಕಬ್ಬಿಣದಸೇತುವೆ ಪಾಳ್ಯದ ಬಳಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷಕೆ.ಸಿ. ಕೃಷ್ಣಮೂರ್ತಿ (65) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.
ಕಡೆಪಾಳ್ಯ ಗ್ರಾಮದವರಾದ ಕೃಷ್ಣಮೂರ್ತಿ ಅವರ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ.
ಮೃತರು ಅಗ್ನಿವಂಶ ಕ್ಷತ್ರಿಯ ವಿದ್ಯಾವರ್ಧಕ ಸಂಘ, ಎವಿಕೆ ಸಮುದಾಯ ಭವನದ ಅಧ್ಯಕ್ಷ ಹಾಗೂ ಮಲ್ಲಸಂದ್ರದ ಮಹಾಲಕ್ಷ್ಮಿ ದೇವಸ್ಥಾನದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ರೈತ ಸಂಘದ ಸಂಘಟನೆಯಲ್ಲೂ ತೊಡಗಿಸಿಕೊಂಡಿದ್ದರು.