‘ಗುಬ್ಬಿ, ತಿಪಟೂರು ತಾಲ್ಲೂಕಿನ ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಮೂಲಸೌಕರ್ಯ ಕಲ್ಪಿಸಲು ಪಂಚಾಯತ್ ರಾಜ್ ವಿಭಾಗದಿಂದ ಟೆಂಡರ್ ಕರೆದಿದ್ದರು. ನಾನು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಾಂತ್ರಿಕ, ಆರ್ಥಿಕ ಬಿಡ್ನಲ್ಲಿ ಅರ್ಹತೆ ಪಡೆದಿದ್ದೆ. ನಂತರ ಅನುಮೋದನೆ ಮಾಡುವಾಗ ನನಗೆ ಟೆಂಡರ್ ತಪ್ಪಿಸಿದ್ದಾರೆ. ಇದನ್ನು ವಿರೋಧಿಸಿ ಧರಣಿ ನಡೆಸುತ್ತಿದ್ದ ಸಮಯದಲ್ಲಿ ಶ್ರೀನಿವಾಸ್ ತಮ್ಮ ಬೆಂಬಲಿಗರೊಂದಿಗೆ ಬಂದು ಹಲ್ಲೆ ನಡೆಸಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.