ಉತ್ತರ ಪ್ರದೇಶದ ಬುಂದೇಲಖಂಡ ವಿಶ್ವವಿದ್ಯಾಲಯದಿಂದ ಶಿಕ್ಷಣ ಶಾಸ್ತ್ರದ ವಿಷಯದಲ್ಲಿ ಪಿಎಚ್ಡಿ ಪಡೆದಿರುವುದಾಗಿ ಕಾಲೇಜಿನ ಆಡಳಿತ ಮಂಡಳಿಗೆ ಪದವಿ ಪ್ರಮಾಣ ಪತ್ರ ನೀಡಿ ಪ್ರಾಂಶುಪಾಲರ ಹುದ್ದೆಗೆ ಆಯ್ಕೆಯಾಗಿದ್ದರು. ವಿ.ವಿಯಲ್ಲಿ ವಿಚಾರಿಸಿದಾಗ ಇದು ಸುಳ್ಳು ಎಂದು ಗೊತ್ತಾಗಿದೆ. ಮೋಸ ಮಾಡಿ ಪ್ರಾಂಶುಪಾಲರ ಹುದ್ದೆ ಪಡೆದ ಸುಕನ್ಯಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ವಕೀಲ ಲಕ್ಷ್ಮಯ್ಯ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.