ಕೆಲವರು ಇದರ ವಿರುದ್ಧ ತೀವ್ರ ಅಸಮಾಧಾನ ಹೊಂದಿದ್ದರು. ಸಿದ್ಧೇಶ್ವರ ಸೇವಾ ಸಮಿತಿಯ ಮಾಜಿ ಅಧ್ಯಕ್ಷ ಬೆಂಡೋಣೆ ಜಯರಾಂ ಈ ವಿಷಯವನ್ನು ದಾಸೋಹ ವಶಕ್ಕೆ ಪಡೆಯುವ ದಿನವೇ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಸಿ.ಸಿ. ಟಿ.ವಿ ಕ್ಯಾಮೆರಾ ಅಳವಡಿಸಿದ ನಂತರ ಸೇವಾ ಸಮಿತಿಯಲ್ಲಿ ತಪ್ಪುಗಳನ್ನು ಹುಡುಕುವ ಕೆಲಸ ಪ್ರಾರಂಭವಾಯಿತು’ ಎಂದು ನೋವಿನಿಂದ ಕಣ್ಣೀರು ಹಾಕಿದ್ದರು.