ತುಮಕೂರು: ಉಪ ವಿಭಾಗಾಧಿಕಾರಿವಿ. ಅಜಯ್ ಕಚೇರಿಯ ಸಮಯದಲ್ಲಿ, ತಮ್ಮ ಕಚೇರಿಯಲ್ಲಿಯೇ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸೋಮವಾರ ಕಚೇರಿಗೆ ಭೇಟಿ ನೀಡಿದ್ದ ಸಾರ್ವಜನಿಕರನ್ನು ಹೊರಗಡೆ ಕಾಯುವಂತೆ ಮಾಡಿ, ತಲೆಗೆ ಪೇಟ ತೊಟ್ಟು, ಹಾರ ಹಾಕಿಸಿಕೊಂಡು ಕೇಕ್ ಕತ್ತರಿಸಿದ್ದಾರೆ. ಅಜಯ್ ಅವರ ಈ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಉನ್ನತ ಸ್ಥಾನದಲ್ಲಿರುವ ಅಧಿಕಾರಿ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ಕರ್ತವ್ಯ ಲೋಪ ಎಸಗಿದ್ದಾರೆ. ಕಾನೂನು ಉಲ್ಲಂಘಿಸಿ ಸರ್ಕಾರಿ ಕಚೇರಿಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ ಎಂದೂಆರೋಪಿಸಿದ್ದಾರೆ.