<p><strong>ತುಮಕೂರು:</strong> ಪ್ರಸ್ತುತ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಕಾರ್ಮಿಕ ಕಾನೂನು ಮೊಟಕುಗೊಳಿಸಿ ಕಾರ್ಮಿಕರನ್ನು 12 ಗಂಟೆ ದುಡಿಮೆಗೆ ದೂಡುತ್ತಿದೆ ಎಂದು ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಕಂಬೇಗೌಡ ಆರೋಪಿಸಿದರು.</p>.<p>ನಗರದಲ್ಲಿ ಬುಧವಾರ ಎಐಟಿಯಸಿ ವತಿಯಿಂದ ಏರ್ಪಡಿಸಿದ್ದ ವಿಶ್ವ ಕಾರ್ಮಿಕರ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಅಸಂಘಟಿತ ಕಾರ್ಮಿಕರಿಗೆ ಕನಿಷ್ಠ ₹31,500 ಕೂಲಿ ನಿಗದಿ ಪಡಿಸಿ, ಸಾಮಾಜಿಕ ನ್ಯಾಯ ಒದಗಿಸಬೇಕು. ಕೇಂದ್ರದ ಬಿಜೆಪಿ ಸರ್ಕಾರ ಕಾರ್ಮಿಕರು ನಿರಂತರ ಹೋರಾಟದಿಂದ ಗಳಿಸಿದ್ದ ಕಾಯ್ದೆಗೆ ತಿದ್ದುಪಡಿ ತಂದು ಬಂಡವಾಳಗಾರರಿಗೆ ಅನುವು ಮಾಡಿಕೊಟ್ಟಿದೆ. ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಎಐಟಿಯುಸಿ ಕಾರ್ಯಾಧ್ಯಕ್ಷ ಗಿರೀಶ್, ‘ಅಸಂಘಟಿತ ಕಾರ್ಮಿಕರು ಯಾವುದೇ ಸಾಮಾಜಿಕ ಭದ್ರತೆ ಇಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. 12 ದುಡಿಸಿಕೊಂಡು 8 ಗಂಟೆಯ ವೇತನ ನೀಡುತ್ತಿರುವುದು ಖಂಡನೀಯ. ಸರ್ಕಾರ ಎಚ್ಚರವಹಿಸಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಚಂದ್ರಶೇಖರ್, ಖಜಾಂಚಿ ರವಿಪ್ರಸಾದ್, ಮುಖಂಡರಾದ ಅಶ್ವತ್ಥನಾರಾಯಣ, ಲಕ್ಷ್ಮಿಪತಿ, ರಮೇಶ್, ರಾಮಚಂದ್ರ, ದೊಡ್ಡತಿಮ್ಮಯ್ಯ, ವನಜಾಕ್ಷಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಪ್ರಸ್ತುತ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಕಾರ್ಮಿಕ ಕಾನೂನು ಮೊಟಕುಗೊಳಿಸಿ ಕಾರ್ಮಿಕರನ್ನು 12 ಗಂಟೆ ದುಡಿಮೆಗೆ ದೂಡುತ್ತಿದೆ ಎಂದು ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಕಂಬೇಗೌಡ ಆರೋಪಿಸಿದರು.</p>.<p>ನಗರದಲ್ಲಿ ಬುಧವಾರ ಎಐಟಿಯಸಿ ವತಿಯಿಂದ ಏರ್ಪಡಿಸಿದ್ದ ವಿಶ್ವ ಕಾರ್ಮಿಕರ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಅಸಂಘಟಿತ ಕಾರ್ಮಿಕರಿಗೆ ಕನಿಷ್ಠ ₹31,500 ಕೂಲಿ ನಿಗದಿ ಪಡಿಸಿ, ಸಾಮಾಜಿಕ ನ್ಯಾಯ ಒದಗಿಸಬೇಕು. ಕೇಂದ್ರದ ಬಿಜೆಪಿ ಸರ್ಕಾರ ಕಾರ್ಮಿಕರು ನಿರಂತರ ಹೋರಾಟದಿಂದ ಗಳಿಸಿದ್ದ ಕಾಯ್ದೆಗೆ ತಿದ್ದುಪಡಿ ತಂದು ಬಂಡವಾಳಗಾರರಿಗೆ ಅನುವು ಮಾಡಿಕೊಟ್ಟಿದೆ. ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಎಐಟಿಯುಸಿ ಕಾರ್ಯಾಧ್ಯಕ್ಷ ಗಿರೀಶ್, ‘ಅಸಂಘಟಿತ ಕಾರ್ಮಿಕರು ಯಾವುದೇ ಸಾಮಾಜಿಕ ಭದ್ರತೆ ಇಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. 12 ದುಡಿಸಿಕೊಂಡು 8 ಗಂಟೆಯ ವೇತನ ನೀಡುತ್ತಿರುವುದು ಖಂಡನೀಯ. ಸರ್ಕಾರ ಎಚ್ಚರವಹಿಸಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಚಂದ್ರಶೇಖರ್, ಖಜಾಂಚಿ ರವಿಪ್ರಸಾದ್, ಮುಖಂಡರಾದ ಅಶ್ವತ್ಥನಾರಾಯಣ, ಲಕ್ಷ್ಮಿಪತಿ, ರಮೇಶ್, ರಾಮಚಂದ್ರ, ದೊಡ್ಡತಿಮ್ಮಯ್ಯ, ವನಜಾಕ್ಷಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>