<p><strong>ತುಮಕೂರು</strong>: ‘ಅಂಬಿಗರ ಚೌಡಯ್ಯ ಮತ್ತು ಶಿವಕುಮಾರ ಸ್ವಾಮೀಜಿ ಸಮ ಸಮಾಜದ ಕನಸು ಕಂಡವರು. ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಇತರರಿಗೆ ಪ್ರೇರಣೆಯಾಗಬೇಕು’ ಎಂದು ತಹಶೀಲ್ದಾರ್ ಸಿದ್ದೇಶ್ ಸಲಹೆ ಮಾಡಿದರು.</p>.<p>ನಗರದಲ್ಲಿ ಭಾನುವಾರ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಗಂಗಾ ಮತಸ್ಥರ ಸಂಘದಿಂದ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿ ಮತ್ತು ಶಿವಕುಮಾರ ಸ್ವಾಮೀಜಿಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಗಂಗಾ ಮತಸ್ಥರ ಸಂಘ ಮುಖಂಡ ದಿವಾಕರ್, ‘ಶಿವಕುಮಾರ ಸ್ವಾಮೀಜಿಯ ಜಾತ್ಯತೀತ ನಡೆ, ಇಡೀ ಮನುಕುಲಕ್ಕೆ ಮಾದರಿ. ಅಂಬಿಗರ ಚೌಡಯ್ಯ ನದಿ ದಾಟಿಸುವ ಅಂಬಿಗರ ಕೆಲಸ ಮಾಡುತ್ತ ಅತ್ಯಂತ ಸರಳವಾಗಿ ಬದುಕಿದರು. ಸುಮಾರು 7 ಕಿ.ಮೀ ಸುತ್ತಳತೆಯ ಭೂಮಿಯನ್ನು ಮಠವೊಂದಕ್ಕೆ ದಾನ ನೀಡಿ, ದಾನಪುರವನ್ನು ಕಟ್ಟಿದ ಕೀರ್ತಿ ಅವರಿಗೆ ಸಲ್ಲುತ್ತದೆ’ ಎಂದರು.</p>.<p>ಸಮುದಾಯದ ಮುಖಂಡ ಚಂದ್ರಪ್ಪ, ‘ವಚನ ಸಾಹಿತ್ಯದಲ್ಲಿ ಬಂಡಾಯ ವಚನಕಾರ ಎನಿಸಿಕೊಂಡವರು ಅಂಬಿಗರ ಚೌಡಯ್ಯ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುನ್ನಡೆಯಬೇಕು’ ಎಂದು ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಜಿಲ್ಲಾ ಗಂಗಾ ಮತಸ್ಥರ ಸಂಘದ ಉಪಾಧ್ಯಕ್ಷ ವಿರೂಪಾಕ್ಷ, ಮುಖಂಡರಾದ ತಿಪಟೂರು ಪಾಲಾಕ್ಷ, ಗರುಡಯ್ಯ, ಕೃಷ್ಣಪ್ಪ, ಬಾಬು ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ‘ಅಂಬಿಗರ ಚೌಡಯ್ಯ ಮತ್ತು ಶಿವಕುಮಾರ ಸ್ವಾಮೀಜಿ ಸಮ ಸಮಾಜದ ಕನಸು ಕಂಡವರು. ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಇತರರಿಗೆ ಪ್ರೇರಣೆಯಾಗಬೇಕು’ ಎಂದು ತಹಶೀಲ್ದಾರ್ ಸಿದ್ದೇಶ್ ಸಲಹೆ ಮಾಡಿದರು.</p>.<p>ನಗರದಲ್ಲಿ ಭಾನುವಾರ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಗಂಗಾ ಮತಸ್ಥರ ಸಂಘದಿಂದ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿ ಮತ್ತು ಶಿವಕುಮಾರ ಸ್ವಾಮೀಜಿಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಗಂಗಾ ಮತಸ್ಥರ ಸಂಘ ಮುಖಂಡ ದಿವಾಕರ್, ‘ಶಿವಕುಮಾರ ಸ್ವಾಮೀಜಿಯ ಜಾತ್ಯತೀತ ನಡೆ, ಇಡೀ ಮನುಕುಲಕ್ಕೆ ಮಾದರಿ. ಅಂಬಿಗರ ಚೌಡಯ್ಯ ನದಿ ದಾಟಿಸುವ ಅಂಬಿಗರ ಕೆಲಸ ಮಾಡುತ್ತ ಅತ್ಯಂತ ಸರಳವಾಗಿ ಬದುಕಿದರು. ಸುಮಾರು 7 ಕಿ.ಮೀ ಸುತ್ತಳತೆಯ ಭೂಮಿಯನ್ನು ಮಠವೊಂದಕ್ಕೆ ದಾನ ನೀಡಿ, ದಾನಪುರವನ್ನು ಕಟ್ಟಿದ ಕೀರ್ತಿ ಅವರಿಗೆ ಸಲ್ಲುತ್ತದೆ’ ಎಂದರು.</p>.<p>ಸಮುದಾಯದ ಮುಖಂಡ ಚಂದ್ರಪ್ಪ, ‘ವಚನ ಸಾಹಿತ್ಯದಲ್ಲಿ ಬಂಡಾಯ ವಚನಕಾರ ಎನಿಸಿಕೊಂಡವರು ಅಂಬಿಗರ ಚೌಡಯ್ಯ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುನ್ನಡೆಯಬೇಕು’ ಎಂದು ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ಜಿಲ್ಲಾ ಗಂಗಾ ಮತಸ್ಥರ ಸಂಘದ ಉಪಾಧ್ಯಕ್ಷ ವಿರೂಪಾಕ್ಷ, ಮುಖಂಡರಾದ ತಿಪಟೂರು ಪಾಲಾಕ್ಷ, ಗರುಡಯ್ಯ, ಕೃಷ್ಣಪ್ಪ, ಬಾಬು ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>