<p><strong>ತುಮಕೂರು: </strong>ಕೇಂದ್ರ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ಏಳಿಗೆಗೆ ರೂಪಿಸಿದ ಯೋಜನೆಗಳ ಕುರಿತು ಜಾಗೃತಿ ಕಾರ್ಯಾಗಾರವನ್ನು ನಗರದ ಸದಾಶಿವನಗರದ ಅನಾಥಾಶ್ರಮದಲ್ಲಿ ಬುಧವಾರ ಮತ್ತು ಗುರುವಾರ ನಡೆಸಲಾಯಿತು.</p>.<p>ಕೇಂದ್ರ ಸರ್ಕಾರದ ಅಲ್ಪಸಂಖ್ಯಾತರ ಇಲಾಖೆ, ಹೊಸಪೇಟೆಯ ಕೃಷ್ಣ ಸಾಯಿ ಎಜುಕೇಷನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.</p>.<p>ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮ, ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ, ಉದ್ಯೋಗ, ಶಿಕ್ಷಣಕ್ಕೆ ಸಂಬಂಧಪಟ್ಟಂತೆ ತರಬೇತಿ, ವ್ಯಾಪಾರಕ್ಕೆ ಪ್ರೋತ್ಸಾಹ ಹೀಗೆ ವಿವಿಧ ರೀತಿಯ ಯೋಜನೆಗಳ ಬಗ್ಗೆ ಟ್ರಸ್ಟ್ನ ಪ್ರತಿನಿಧಿಗಳು ಮಾಹಿತಿ ನೀಡಿದರು.</p>.<p>ಅಲ್ಪಸಂಖ್ಯಾತ ಸಮುದಾಯಗಳು ಆರ್ಥಿಕವಾಗಿ ಹಿಂದುಳಿದಿವೆ. ಇತರ ವರ್ಗಗಳಂತೆಯೇ ಈ ಸಮುದಾಯವೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಚೇತರಿಕೆ ಹೊಂದಲು ಕೇಂದ್ರ ಅಲ್ಪಸಂಖ್ಯಾತ ಸಚಿವಾಲಯವು ಉಪಯುಕ್ತ ಯೋಜನೆ ರೂಪಿಸಿದೆ. ಪ್ರಯೋಜನ ಪಡೆಯಬೇಕು ಎಂದು ಹೇಳಿದರು.</p>.<p>ಟ್ರಸ್ಟ್ ಸದಸ್ಯರಾದ ಆದಿತ್ಯ ವಿಕ್ರಮ್ಜಿತ್ಸಿಂಗ್, ದೆಹಲಿಯ ರಾಕೇಶ್ ರಾಣಾ, ಜಿಲ್ಲಾ ಅಲ್ಪಸಂಖ್ಯಾತ ಇಲಾಖೆಯ ಮಾಹಿತಿ ಕೇಂದ್ರದ ಸಿಬ್ಬಂದಿ ಸಾದತ್, ನೂರುಲ್ಲಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಕೇಂದ್ರ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ಏಳಿಗೆಗೆ ರೂಪಿಸಿದ ಯೋಜನೆಗಳ ಕುರಿತು ಜಾಗೃತಿ ಕಾರ್ಯಾಗಾರವನ್ನು ನಗರದ ಸದಾಶಿವನಗರದ ಅನಾಥಾಶ್ರಮದಲ್ಲಿ ಬುಧವಾರ ಮತ್ತು ಗುರುವಾರ ನಡೆಸಲಾಯಿತು.</p>.<p>ಕೇಂದ್ರ ಸರ್ಕಾರದ ಅಲ್ಪಸಂಖ್ಯಾತರ ಇಲಾಖೆ, ಹೊಸಪೇಟೆಯ ಕೃಷ್ಣ ಸಾಯಿ ಎಜುಕೇಷನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.</p>.<p>ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮ, ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ, ಉದ್ಯೋಗ, ಶಿಕ್ಷಣಕ್ಕೆ ಸಂಬಂಧಪಟ್ಟಂತೆ ತರಬೇತಿ, ವ್ಯಾಪಾರಕ್ಕೆ ಪ್ರೋತ್ಸಾಹ ಹೀಗೆ ವಿವಿಧ ರೀತಿಯ ಯೋಜನೆಗಳ ಬಗ್ಗೆ ಟ್ರಸ್ಟ್ನ ಪ್ರತಿನಿಧಿಗಳು ಮಾಹಿತಿ ನೀಡಿದರು.</p>.<p>ಅಲ್ಪಸಂಖ್ಯಾತ ಸಮುದಾಯಗಳು ಆರ್ಥಿಕವಾಗಿ ಹಿಂದುಳಿದಿವೆ. ಇತರ ವರ್ಗಗಳಂತೆಯೇ ಈ ಸಮುದಾಯವೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಚೇತರಿಕೆ ಹೊಂದಲು ಕೇಂದ್ರ ಅಲ್ಪಸಂಖ್ಯಾತ ಸಚಿವಾಲಯವು ಉಪಯುಕ್ತ ಯೋಜನೆ ರೂಪಿಸಿದೆ. ಪ್ರಯೋಜನ ಪಡೆಯಬೇಕು ಎಂದು ಹೇಳಿದರು.</p>.<p>ಟ್ರಸ್ಟ್ ಸದಸ್ಯರಾದ ಆದಿತ್ಯ ವಿಕ್ರಮ್ಜಿತ್ಸಿಂಗ್, ದೆಹಲಿಯ ರಾಕೇಶ್ ರಾಣಾ, ಜಿಲ್ಲಾ ಅಲ್ಪಸಂಖ್ಯಾತ ಇಲಾಖೆಯ ಮಾಹಿತಿ ಕೇಂದ್ರದ ಸಿಬ್ಬಂದಿ ಸಾದತ್, ನೂರುಲ್ಲಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>