<p>ಗುಬ್ಬಿ: ದ್ವಿದಳ ಧಾನ್ಯ ಹಾಗೂ ಸಿರಿ ಧಾನ್ಯಗಳನ್ನು ಹೆಚ್ಚಾಗಿ ಬಳಸುವುದರಿಂದ ಆರೋಗ್ಯದಲ್ಲಿ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಒಕ್ಕೂಟದ ಅಧ್ಯಕ್ಷೆ ಮಂಗಳ ಗೌರಮ್ಮ ತಿಳಿಸಿದರು.</p>.<p>ತಾಲ್ಲೂಕಿನ ನಿಟ್ಟೂರಿನಲ್ಲಿ ಶನಿವಾರ ನಡೆದ ಸಿರಿಧಾನ್ಯ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸಿರಿಧಾನ್ಯಗಳಲ್ಲಿ ಹೆಚ್ಚಿನ ಪೋಷಕಾಂಶಗಳು ಇರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಆಧುನಿಕ ಆಹಾರ ಪದ್ಧತಿಯಿಂದಾಗಿ ಚಿಕ್ಕ ವಯಸ್ಸಿನಲ್ಲಿಯೇ ಅನೇಕ ಕಾಯಿಲೆಗಳಿಗೆ ಬಲಿಯಾಗುತ್ತಿರುವುದು ದುರಾದೃಷ್ಟಕರ ಎಂದರು.</p>.<p>ತ್ರಿವೇಣಿ ಉಪನ್ಯಾಸ ನೀಡಿ, ರೈತರು ಸಿರಿಧಾನ್ಯ ಬೆಳೆಯಲು ಹೆಚ್ಚಿನ ಆಸಕ್ತಿ ವಹಿಸುತಿಲ್ಲ. ವಾಣಿಜ್ಯ ಬೆಳೆಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಬಾರಿ ಬೆಲೆ ತೆರಬೇಕಾಗುತ್ತದೆ ಎಂದರು.</p>.<p>ಮೇಲ್ವಿಚಾರಕ ರಾಜೇಶ್ ಮಾತನಾಡಿ, ಸಿರಿಧಾನ್ಯ ಬಳಕೆಯಿಂದ ಮಧುಮೇಹ ಹಾಗೂ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು ಸಾಧ್ಯ. ಸಿರಿಧಾನ್ಯಗಳನ್ನು ನೇರವಾಗಿ ಬಳಸುವ ಜೊತೆಗೆ ಮಾಲ್ಟ್ ಪೌಡರ್ ಹಾಗೂ ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ತಯಾರಿಸುವ ಮೂಲಕ ಬಳಸಿಕೊಳ್ಳಬಹುದು ಎಂದು ಹೇಳಿದರು.</p>.<p>ನವಣೆ ಹಾಗೂ ಬರಗುಗಳ ಅನ್ನ ಹಾಗೂ ರಾಗಿ ಮಾಲ್ಟ್ ಸ್ಥಳದಲ್ಲಿಯೇ ತಯಾರಿಸಿ ಎಲ್ಲರಿಗೂ <br />ನೀಡಲಾಯಿತು.</p>.<p>ಗ್ರಾಮ ಪಂಚಾಯಿತಿ ಸದಸ್ಯೆ ಹಸೀನಾ ತಾಜ್, ಒಕ್ಕೂಟದ ಪದಾಧಿಕಾರಿಗಳಾದ ಕನಕಲಕ್ಷ್ಮಿ, ಬೋರೇಗೌಡ, ನಟರಾಜ್, ವಲಯ ಮೇಲ್ವಿಚಾರಕಿ ಇಂದ್ರಮ್ಮ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಜಯಲಕ್ಷ್ಮೀ, ಸೇವಾಪ್ರತಿನಿಧಿ ಲತಾಮಣಿ, ಹೇಮ, ಲಕ್ಷ್ಮಮ್ಮ, ಸಿಎಸ್ಸಿ ಕಾರ್ಯಕರ್ತರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಬ್ಬಿ: ದ್ವಿದಳ ಧಾನ್ಯ ಹಾಗೂ ಸಿರಿ ಧಾನ್ಯಗಳನ್ನು ಹೆಚ್ಚಾಗಿ ಬಳಸುವುದರಿಂದ ಆರೋಗ್ಯದಲ್ಲಿ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಒಕ್ಕೂಟದ ಅಧ್ಯಕ್ಷೆ ಮಂಗಳ ಗೌರಮ್ಮ ತಿಳಿಸಿದರು.</p>.<p>ತಾಲ್ಲೂಕಿನ ನಿಟ್ಟೂರಿನಲ್ಲಿ ಶನಿವಾರ ನಡೆದ ಸಿರಿಧಾನ್ಯ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸಿರಿಧಾನ್ಯಗಳಲ್ಲಿ ಹೆಚ್ಚಿನ ಪೋಷಕಾಂಶಗಳು ಇರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಆಧುನಿಕ ಆಹಾರ ಪದ್ಧತಿಯಿಂದಾಗಿ ಚಿಕ್ಕ ವಯಸ್ಸಿನಲ್ಲಿಯೇ ಅನೇಕ ಕಾಯಿಲೆಗಳಿಗೆ ಬಲಿಯಾಗುತ್ತಿರುವುದು ದುರಾದೃಷ್ಟಕರ ಎಂದರು.</p>.<p>ತ್ರಿವೇಣಿ ಉಪನ್ಯಾಸ ನೀಡಿ, ರೈತರು ಸಿರಿಧಾನ್ಯ ಬೆಳೆಯಲು ಹೆಚ್ಚಿನ ಆಸಕ್ತಿ ವಹಿಸುತಿಲ್ಲ. ವಾಣಿಜ್ಯ ಬೆಳೆಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಬಾರಿ ಬೆಲೆ ತೆರಬೇಕಾಗುತ್ತದೆ ಎಂದರು.</p>.<p>ಮೇಲ್ವಿಚಾರಕ ರಾಜೇಶ್ ಮಾತನಾಡಿ, ಸಿರಿಧಾನ್ಯ ಬಳಕೆಯಿಂದ ಮಧುಮೇಹ ಹಾಗೂ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು ಸಾಧ್ಯ. ಸಿರಿಧಾನ್ಯಗಳನ್ನು ನೇರವಾಗಿ ಬಳಸುವ ಜೊತೆಗೆ ಮಾಲ್ಟ್ ಪೌಡರ್ ಹಾಗೂ ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ತಯಾರಿಸುವ ಮೂಲಕ ಬಳಸಿಕೊಳ್ಳಬಹುದು ಎಂದು ಹೇಳಿದರು.</p>.<p>ನವಣೆ ಹಾಗೂ ಬರಗುಗಳ ಅನ್ನ ಹಾಗೂ ರಾಗಿ ಮಾಲ್ಟ್ ಸ್ಥಳದಲ್ಲಿಯೇ ತಯಾರಿಸಿ ಎಲ್ಲರಿಗೂ <br />ನೀಡಲಾಯಿತು.</p>.<p>ಗ್ರಾಮ ಪಂಚಾಯಿತಿ ಸದಸ್ಯೆ ಹಸೀನಾ ತಾಜ್, ಒಕ್ಕೂಟದ ಪದಾಧಿಕಾರಿಗಳಾದ ಕನಕಲಕ್ಷ್ಮಿ, ಬೋರೇಗೌಡ, ನಟರಾಜ್, ವಲಯ ಮೇಲ್ವಿಚಾರಕಿ ಇಂದ್ರಮ್ಮ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಜಯಲಕ್ಷ್ಮೀ, ಸೇವಾಪ್ರತಿನಿಧಿ ಲತಾಮಣಿ, ಹೇಮ, ಲಕ್ಷ್ಮಮ್ಮ, ಸಿಎಸ್ಸಿ ಕಾರ್ಯಕರ್ತರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>