<p><strong>ತುಮಕೂರು (ತೋವಿನಕೆರೆ):</strong> ಬಿಸಾಡಿಹಳ್ಳಿ ಗೊಲ್ಲರಹಟ್ಟಿ ಕೃಷ್ಣ ಕುಟೀರದಲ್ಲಿದ್ದ ಮೂವರು ಬಾಣಂತಿಯರು ಹಾಗೂ ಶಿಶುಗಳನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮತ್ತೆ ಮನೆಗೆ ಸೇರಿಸಿದರು. ಎರಡು ಕೃಷ್ಣ ಕುಟೀರಗಳಿಗೆ ಅವರೇ ಬೀಗ ಹಾಕಿದರು.</p>.<p>ಗೊಲ್ಲರಹಟ್ಟಿಗೆ ಸೋಮವಾರ ಭೇಟಿ ನೀಡಿ ಅಲ್ಲಿನ ಜನರ ಜತೆ ಚರ್ಚಿಸಿದರು. ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಅಗತ್ಯ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದರು. ಇನ್ನು ಮುಂದೆ ಮೌಢ್ಯಾಚರಣೆ ಮುಂದುವರಿಸಬಾರದು ಎಂದು ಕಿವಿಮಾತು ಹೇಳಿದರು.</p>.<p>ಹಲವು ದಿನಗಳಿಂದ ಕೃಷ್ಣ ಕುಟೀರದಲ್ಲಿ ವಾಸವಿದ್ದ ಬಾಣಂತಿಯರನ್ನು ಅವರ ಕುಟುಂಬಸ್ಥರ ಮನವೊಲಿಸಿ ಮನೆಗೆ ಕಳುಹಿಸಿದರು. ಮಗುವನ್ನು ತಾವೇ ಎತ್ತಿಕೊಂಡು ಹೋಗಿ ಮನೆ ಒಳಗೆ ಬಿಟ್ಟರು. ಇದೇ ಸಮಯದಲ್ಲಿ ಒಂದು ಮಗುವಿಗೆ ‘ನಾಗಲಕ್ಷ್ಮಿ’ಎಂದು ನಾಮಕರಣ ಮಾಡಲಾಯಿತು.</p>.<p>‘ಕುಟೀರಗಳನ್ನು ಮುಂದಿನ 6 ತಿಂಗಳಲ್ಲಿ ಗ್ರಂಥಾಲಯ ಮತ್ತು ಅಂಗನವಾಡಿ ಕೇಂದ್ರವಾಗಿ ಮಾರ್ಪಡಿಸಬೇಕು. ಮಕ್ಕಳಿಗೆ ಶಿಕ್ಷಣ ನೀಡಿ, ವಿದ್ಯಾವಂತರನ್ನಾಗಿ ರೂಪಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.</p>.<p>ಗೊಲ್ಲರಹಟ್ಟಿ ಕುಟೀರಗಳಲ್ಲಿ ಬಾಣಂತಿ, ಮಕ್ಕಳನ್ನು ಬಿಡುತ್ತಿರುವ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಸರಣಿ ವರದಿಗಳು ಪ್ರಕಟವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು (ತೋವಿನಕೆರೆ):</strong> ಬಿಸಾಡಿಹಳ್ಳಿ ಗೊಲ್ಲರಹಟ್ಟಿ ಕೃಷ್ಣ ಕುಟೀರದಲ್ಲಿದ್ದ ಮೂವರು ಬಾಣಂತಿಯರು ಹಾಗೂ ಶಿಶುಗಳನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮತ್ತೆ ಮನೆಗೆ ಸೇರಿಸಿದರು. ಎರಡು ಕೃಷ್ಣ ಕುಟೀರಗಳಿಗೆ ಅವರೇ ಬೀಗ ಹಾಕಿದರು.</p>.<p>ಗೊಲ್ಲರಹಟ್ಟಿಗೆ ಸೋಮವಾರ ಭೇಟಿ ನೀಡಿ ಅಲ್ಲಿನ ಜನರ ಜತೆ ಚರ್ಚಿಸಿದರು. ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಅಗತ್ಯ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದರು. ಇನ್ನು ಮುಂದೆ ಮೌಢ್ಯಾಚರಣೆ ಮುಂದುವರಿಸಬಾರದು ಎಂದು ಕಿವಿಮಾತು ಹೇಳಿದರು.</p>.<p>ಹಲವು ದಿನಗಳಿಂದ ಕೃಷ್ಣ ಕುಟೀರದಲ್ಲಿ ವಾಸವಿದ್ದ ಬಾಣಂತಿಯರನ್ನು ಅವರ ಕುಟುಂಬಸ್ಥರ ಮನವೊಲಿಸಿ ಮನೆಗೆ ಕಳುಹಿಸಿದರು. ಮಗುವನ್ನು ತಾವೇ ಎತ್ತಿಕೊಂಡು ಹೋಗಿ ಮನೆ ಒಳಗೆ ಬಿಟ್ಟರು. ಇದೇ ಸಮಯದಲ್ಲಿ ಒಂದು ಮಗುವಿಗೆ ‘ನಾಗಲಕ್ಷ್ಮಿ’ಎಂದು ನಾಮಕರಣ ಮಾಡಲಾಯಿತು.</p>.<p>‘ಕುಟೀರಗಳನ್ನು ಮುಂದಿನ 6 ತಿಂಗಳಲ್ಲಿ ಗ್ರಂಥಾಲಯ ಮತ್ತು ಅಂಗನವಾಡಿ ಕೇಂದ್ರವಾಗಿ ಮಾರ್ಪಡಿಸಬೇಕು. ಮಕ್ಕಳಿಗೆ ಶಿಕ್ಷಣ ನೀಡಿ, ವಿದ್ಯಾವಂತರನ್ನಾಗಿ ರೂಪಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.</p>.<p>ಗೊಲ್ಲರಹಟ್ಟಿ ಕುಟೀರಗಳಲ್ಲಿ ಬಾಣಂತಿ, ಮಕ್ಕಳನ್ನು ಬಿಡುತ್ತಿರುವ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಸರಣಿ ವರದಿಗಳು ಪ್ರಕಟವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>