<p><strong>ತುಮಕೂರು:</strong> ‘ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ (ಕೋಮಾ) ಇರದೇ ಇದಿದ್ದರೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯವರ ಆಡಳಿತ ನೋಡಿ ಆತ್ಮಹತ್ಯೆ ಮಾಡಿಕೊಂಡಿರುತ್ತಿದ್ದರು’ ಎಂದು ಹಿರಿಯ ಸಾಹಿತಿ, ವಿಮರ್ಶಕ ಚಂದ್ರಶೇಖರ ಪಾಟೀಲ ಹೇಳಿದರು.</p>.<p>ಬಂಡಾಯ ಸಾಹಿತ್ಯ ಸಂಘಟನೆಯು ಆಯೋಜಿಸಿದ ‘ಸಮೂಹ ಮಾಧ್ಯಮ ಮತ್ತು ಬಂಡಾಯ ಪ್ರಜ್ಞೆ’ ಎಂಬ ವಿಷಯ ಕುರಿತ ರಾಜ್ಯಮಟ್ಟದ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಮಾತನಾಡಿದರು.</p>.<p>70 ದಶಕದ ಸಮಸ್ಯೆ, ಸವಾಲು, ಶೋಷಣೆ, ಚಳವಳಿ ಎಲ್ಲವೂ ಈಗಿನ ಕಾಲದಲ್ಲೂ ಇವೆ. ಬಂಡಾಯ ಚಳವಳಿಗೆ ಮೇಲ್ನೋಟಕ್ಕೆ ‘ಕೋಮಾ’ ಆವರಿಸಿದಂತೆ ಕಂಡರೂ ಅದರ ಸೆಲೆಗಳು ಬತ್ತಿಲ್ಲ. ಆ ಸೆಲೆಗಳು ಪುನರುಜ್ಜೀವನಗೊಳ್ಳಬೇಕು. ಹಳೇ ಬೇರು ಹೊಸ ಚಿಗುರು ಎಂಬಂತೆ ಹೊಸ ಪೀಳಿಗೆಯ ಜತೆ ಬಂಡಾಯ ಸಾಹಿತ್ಯ ಸಂಘಟನೆ ಜಾಗೃತವಾಗಿದೆ. ನಾವು ನಿರಾಶರಾಗಬೇಕಿಲ್ಲ. ಭರವಸೆಯನ್ನು ಒಳಗಡೆ ಇಟ್ಟುಕೊಂಡು ಚಿಂತನೆಗಳನ್ನು ಹಬ್ಬಿಸುವ ಕೆಲಸ ಮಾಡಬೇಕು ಎಂದು ಆಶಯ ವ್ಯಕ್ತಪಡಿಸಿದರು.</p>.<p>‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಯಾರೂ ಕೊಡುವುದಿಲ್ಲ. ಅದನ್ನು ಪಡೆಯಲು ನಾವು ನಿತ್ಯ ಹೋರಾಟ ಮಾಡುತ್ತಲೇ ಇರಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ (ಕೋಮಾ) ಇರದೇ ಇದಿದ್ದರೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯವರ ಆಡಳಿತ ನೋಡಿ ಆತ್ಮಹತ್ಯೆ ಮಾಡಿಕೊಂಡಿರುತ್ತಿದ್ದರು’ ಎಂದು ಹಿರಿಯ ಸಾಹಿತಿ, ವಿಮರ್ಶಕ ಚಂದ್ರಶೇಖರ ಪಾಟೀಲ ಹೇಳಿದರು.</p>.<p>ಬಂಡಾಯ ಸಾಹಿತ್ಯ ಸಂಘಟನೆಯು ಆಯೋಜಿಸಿದ ‘ಸಮೂಹ ಮಾಧ್ಯಮ ಮತ್ತು ಬಂಡಾಯ ಪ್ರಜ್ಞೆ’ ಎಂಬ ವಿಷಯ ಕುರಿತ ರಾಜ್ಯಮಟ್ಟದ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಮಾತನಾಡಿದರು.</p>.<p>70 ದಶಕದ ಸಮಸ್ಯೆ, ಸವಾಲು, ಶೋಷಣೆ, ಚಳವಳಿ ಎಲ್ಲವೂ ಈಗಿನ ಕಾಲದಲ್ಲೂ ಇವೆ. ಬಂಡಾಯ ಚಳವಳಿಗೆ ಮೇಲ್ನೋಟಕ್ಕೆ ‘ಕೋಮಾ’ ಆವರಿಸಿದಂತೆ ಕಂಡರೂ ಅದರ ಸೆಲೆಗಳು ಬತ್ತಿಲ್ಲ. ಆ ಸೆಲೆಗಳು ಪುನರುಜ್ಜೀವನಗೊಳ್ಳಬೇಕು. ಹಳೇ ಬೇರು ಹೊಸ ಚಿಗುರು ಎಂಬಂತೆ ಹೊಸ ಪೀಳಿಗೆಯ ಜತೆ ಬಂಡಾಯ ಸಾಹಿತ್ಯ ಸಂಘಟನೆ ಜಾಗೃತವಾಗಿದೆ. ನಾವು ನಿರಾಶರಾಗಬೇಕಿಲ್ಲ. ಭರವಸೆಯನ್ನು ಒಳಗಡೆ ಇಟ್ಟುಕೊಂಡು ಚಿಂತನೆಗಳನ್ನು ಹಬ್ಬಿಸುವ ಕೆಲಸ ಮಾಡಬೇಕು ಎಂದು ಆಶಯ ವ್ಯಕ್ತಪಡಿಸಿದರು.</p>.<p>‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಯಾರೂ ಕೊಡುವುದಿಲ್ಲ. ಅದನ್ನು ಪಡೆಯಲು ನಾವು ನಿತ್ಯ ಹೋರಾಟ ಮಾಡುತ್ತಲೇ ಇರಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>