ಗುಬ್ಬಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ– ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿರುವುದು ಇಡೀ ದೇಶಕ್ಕೆ ಗೊತ್ತಿರುವ ವಿಚಾರ. ಚಾಮುಂಡೇಶ್ವರಿ ಕ್ಷೇತ್ರವೊಂದೇ ಅಲ್ಲ, ಸುಮಾರು ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳು ಒಡಂಬಡಿಕೆ ಮಾಡಿಕೊಂಡಿದ್ದವು’ ಎಂದು ತಿಳಿಸಿದರು.