<p><strong>ತುಮಕೂರು:</strong> ವೀಚಿ (ವೀ.ಚಿಕ್ಕವೀರಯ್ಯ) ಸಾಹಿತ್ಯ ಪ್ರತಿಷ್ಠಾನ ಕೊಡ ಮಾಡುವ 2024ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಬೆಂಗಳೂರಿನ ಪಿ.ಚಂದ್ರಿಕಾ ಅವರ ‘ಮೂವರು ಮಹಮದರು’ ಕೃತಿ ಆಯ್ಕೆ ಆಗಿದೆ.</p>.<p>‘ವೀಚಿ ಯುವ ಸಾಹಿತ್ಯ’ ಪ್ರಶಸ್ತಿಗೆ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಗೋವಿಂದರಾಜು ಎಂ.ಕಲ್ಲೂರು ಅವರ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಕಥಾ ಸಂಕಲನವನ್ನು ಆಯ್ಕೆ ಮಾಡಲಾಗಿದೆ.</p>.<p>ವೀಚಿ ಸಾಹಿತ್ಯ ಪ್ರಶಸ್ತಿಯು ₹25ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ವೀಚಿ ಯುವ ಸಾಹಿತ್ಯ ಪ್ರಶಸ್ತಿಯು ₹5ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ.</p>.<p>ಕಥೆಗಾರ ತುಂಬಾಡಿ ರಾಮಯ್ಯ, ರಂಗಕರ್ಮಿ ಬೇಲೂರು ರಘುನಂದನ್, ಕವಿ ಟಿ.ಯಲ್ಲಪ್ಪ ನೇತೃತ್ವದ ಆಯ್ಕೆ ಸಮಿತಿಯು ಪ್ರಶಸ್ತಿಗೆ ಬಂದಿದ್ದ 180 ಕೃತಿಗಳನ್ನು ಪರಿಶೀಲಿಸಿ, ಪ್ರಶಸ್ತಿಗಳನ್ನು ಪ್ರಕಟಿಸಿದೆ. ಜೂನ್ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ವೀಚಿ ಸಾಹಿತ್ಯ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಎಂ.ಎಚ್.ನಾಗರಾಜು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ವೀಚಿ (ವೀ.ಚಿಕ್ಕವೀರಯ್ಯ) ಸಾಹಿತ್ಯ ಪ್ರತಿಷ್ಠಾನ ಕೊಡ ಮಾಡುವ 2024ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಬೆಂಗಳೂರಿನ ಪಿ.ಚಂದ್ರಿಕಾ ಅವರ ‘ಮೂವರು ಮಹಮದರು’ ಕೃತಿ ಆಯ್ಕೆ ಆಗಿದೆ.</p>.<p>‘ವೀಚಿ ಯುವ ಸಾಹಿತ್ಯ’ ಪ್ರಶಸ್ತಿಗೆ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಗೋವಿಂದರಾಜು ಎಂ.ಕಲ್ಲೂರು ಅವರ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಕಥಾ ಸಂಕಲನವನ್ನು ಆಯ್ಕೆ ಮಾಡಲಾಗಿದೆ.</p>.<p>ವೀಚಿ ಸಾಹಿತ್ಯ ಪ್ರಶಸ್ತಿಯು ₹25ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ವೀಚಿ ಯುವ ಸಾಹಿತ್ಯ ಪ್ರಶಸ್ತಿಯು ₹5ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ.</p>.<p>ಕಥೆಗಾರ ತುಂಬಾಡಿ ರಾಮಯ್ಯ, ರಂಗಕರ್ಮಿ ಬೇಲೂರು ರಘುನಂದನ್, ಕವಿ ಟಿ.ಯಲ್ಲಪ್ಪ ನೇತೃತ್ವದ ಆಯ್ಕೆ ಸಮಿತಿಯು ಪ್ರಶಸ್ತಿಗೆ ಬಂದಿದ್ದ 180 ಕೃತಿಗಳನ್ನು ಪರಿಶೀಲಿಸಿ, ಪ್ರಶಸ್ತಿಗಳನ್ನು ಪ್ರಕಟಿಸಿದೆ. ಜೂನ್ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ವೀಚಿ ಸಾಹಿತ್ಯ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಎಂ.ಎಚ್.ನಾಗರಾಜು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>