<p><strong>ತುಮಕೂರು:</strong> ‘ಆವಿಷ್ಕಾರ ಅಳವಡಿಸಿಕೊಂಡರೆ ಬದಲಾವಣೆ ತರಲು ಸಾಧ್ಯ’ ಎಂದು ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿಯ ಹಿರಿಯ ತಜ್ಞ ಪ್ರೊ.ಎಂ.ಕೆ.ಶ್ರೀಧರ್ ಹೇಳಿದರು.</p>.<p>ತುಮಕೂರು ವಿಶ್ವವಿದ್ಯಾನಿಲಯದ ಕೌಶಲ ಅಭಿವೃದ್ಧಿ ಕೇಂದ್ರ ಹಾಗೂ ತುಮಕೂರು ವಿವಿಯ ಆಂತರಿಕ ಗುಣಮಟ್ಟದ ಖಾತರಿ ಕೋಶ (ಐಕ್ಯುಎಸಿ) ಆಶ್ರಯದಲ್ಲಿ ಆಯೋಜಿಸಿದ್ಧ ‘ನಿರ್ವಹಣೆಯಲ್ಲಿ ಬದಲಾವಣೆ ಮತ್ತು ಆವಿಷ್ಕಾರ’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘18ನೇ ಶತಮಾನದ ಯೋಚನೆಗಳನ್ನು ಇಟ್ಟುಕೊಂಡು 21ನೇ ಶತಮಾನವನ್ನು ಬದಲಾಯಿಸಲು ಸಾಧ್ಯವಿಲ್ಲ. ಜಗತ್ತಿನಲ್ಲಿ ಅತ್ಯಂತ ತ್ವರಿತ ಗತಿಯ ಬದಲಾವಣೆಗಳು ಸಂಭವಿಸುತ್ತಿದ್ದು, ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನವು ಹೆಚ್ಚು ಜನಸಂಖ್ಯೆಯುಳ್ಳ ಭಾರತದಂತಹ ದೇಶಗಳಿಗೆ ಸಿಡಿಲಿನಂತೆ ಅಪ್ಪಳಿಸುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಆವಿಷ್ಕಾರ ಮನೋಭಾವ ನಾವು ರೂಢಿಸಿಕೊಳ್ಳದೇ ಇದ್ದರೆ ನಾವು ಕೆಲಸ ಮಾಡುವ ಸೇವಾ ವಲಯದಲ್ಲಿ, ದೇಶದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>ಅಧ್ಯಕ್ಷತೆವಹಿಸಿದ್ದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಮಾತನಾಡಿ, ‘ವಿಶ್ವವಿದ್ಯಾನಿಲಯದ ಆಡಳಿತ ವಿಭಾಗ, ಅಧ್ಯಯನ ವಿಭಾಗ ಹಾಗೂ ಉಭಯ ಕಾಲೇಜುಗಳ ಸಿಬ್ಬಂದಿಗೆ ಇಂದಿನ ಈ ತರಬೇತಿ ಅರ್ಥಪೂರ್ಣವಾಗಿದೆ’ ಎಂದು ಹೇಳಿದರು.</p>.<p>ಕುಲಸಚಿವ ಪ್ರೊ.ಕೆ.ಎನ್.ಗಂಗಾ ನಾಯಕ್ ಸ್ವಾಗತಿಸಿದರು. ಐಕ್ಯುಎಸಿ ನಿರ್ದೇಶಕ ಪ್ರೊ.ಕೆ.ಜಿ.ಪರಶುರಾಮ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಾಗಾರದಲ್ಲಿ ವಿವಿಯ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ‘ಆವಿಷ್ಕಾರ ಅಳವಡಿಸಿಕೊಂಡರೆ ಬದಲಾವಣೆ ತರಲು ಸಾಧ್ಯ’ ಎಂದು ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿಯ ಹಿರಿಯ ತಜ್ಞ ಪ್ರೊ.ಎಂ.ಕೆ.ಶ್ರೀಧರ್ ಹೇಳಿದರು.</p>.<p>ತುಮಕೂರು ವಿಶ್ವವಿದ್ಯಾನಿಲಯದ ಕೌಶಲ ಅಭಿವೃದ್ಧಿ ಕೇಂದ್ರ ಹಾಗೂ ತುಮಕೂರು ವಿವಿಯ ಆಂತರಿಕ ಗುಣಮಟ್ಟದ ಖಾತರಿ ಕೋಶ (ಐಕ್ಯುಎಸಿ) ಆಶ್ರಯದಲ್ಲಿ ಆಯೋಜಿಸಿದ್ಧ ‘ನಿರ್ವಹಣೆಯಲ್ಲಿ ಬದಲಾವಣೆ ಮತ್ತು ಆವಿಷ್ಕಾರ’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘18ನೇ ಶತಮಾನದ ಯೋಚನೆಗಳನ್ನು ಇಟ್ಟುಕೊಂಡು 21ನೇ ಶತಮಾನವನ್ನು ಬದಲಾಯಿಸಲು ಸಾಧ್ಯವಿಲ್ಲ. ಜಗತ್ತಿನಲ್ಲಿ ಅತ್ಯಂತ ತ್ವರಿತ ಗತಿಯ ಬದಲಾವಣೆಗಳು ಸಂಭವಿಸುತ್ತಿದ್ದು, ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನವು ಹೆಚ್ಚು ಜನಸಂಖ್ಯೆಯುಳ್ಳ ಭಾರತದಂತಹ ದೇಶಗಳಿಗೆ ಸಿಡಿಲಿನಂತೆ ಅಪ್ಪಳಿಸುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಆವಿಷ್ಕಾರ ಮನೋಭಾವ ನಾವು ರೂಢಿಸಿಕೊಳ್ಳದೇ ಇದ್ದರೆ ನಾವು ಕೆಲಸ ಮಾಡುವ ಸೇವಾ ವಲಯದಲ್ಲಿ, ದೇಶದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ’ ಎಂದು ಹೇಳಿದರು.</p>.<p>ಅಧ್ಯಕ್ಷತೆವಹಿಸಿದ್ದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಮಾತನಾಡಿ, ‘ವಿಶ್ವವಿದ್ಯಾನಿಲಯದ ಆಡಳಿತ ವಿಭಾಗ, ಅಧ್ಯಯನ ವಿಭಾಗ ಹಾಗೂ ಉಭಯ ಕಾಲೇಜುಗಳ ಸಿಬ್ಬಂದಿಗೆ ಇಂದಿನ ಈ ತರಬೇತಿ ಅರ್ಥಪೂರ್ಣವಾಗಿದೆ’ ಎಂದು ಹೇಳಿದರು.</p>.<p>ಕುಲಸಚಿವ ಪ್ರೊ.ಕೆ.ಎನ್.ಗಂಗಾ ನಾಯಕ್ ಸ್ವಾಗತಿಸಿದರು. ಐಕ್ಯುಎಸಿ ನಿರ್ದೇಶಕ ಪ್ರೊ.ಕೆ.ಜಿ.ಪರಶುರಾಮ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಾಗಾರದಲ್ಲಿ ವಿವಿಯ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>